AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೋತುಬಿದ್ದ ಭುಜಗಳು, ಬೇಸರಗೊಂಡ ಮುಖಗಳು… CSK ಹಿಸ್ಟರಿಯಲ್ಲೇ ಇದೇ ಮೊದಲ ಬಾರಿಗೆ..!

IPL 2025 CSK vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 49ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 190 ರನ್ ಕಲೆಹಾಕಿದರೆ, ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡ 19.4 ಓವರ್​ಗಳಲ್ಲಿ 194 ರನ್​ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: May 01, 2025 | 8:31 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 50 ಪಂದ್ಯಗಳು ಪೂರ್ಣಗೊಳ್ಳುವ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಪರಾಜಯಗೊಳ್ಳುವುದರೊಂದಿಗೆ ಸಿಎಸ್​ಕೆ ತಂಡದ ಕಪ್ ಗೆಲ್ಲುವ ಕನಸು ಕಮರಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 50 ಪಂದ್ಯಗಳು ಪೂರ್ಣಗೊಳ್ಳುವ ಮೊದಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 49ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಪರಾಜಯಗೊಳ್ಳುವುದರೊಂದಿಗೆ ಸಿಎಸ್​ಕೆ ತಂಡದ ಕಪ್ ಗೆಲ್ಲುವ ಕನಸು ಕಮರಿದೆ.

1 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು  ಬ್ಯಾಕ್ ಟು ಬ್ಯಾಕ್ ಎರಡು ಸೀಸನ್​ಗಳಲ್ಲಿ ಪ್ಲೇಆಫ್ ಆಡದೇ ಹೊರಬಿದ್ದಂತಾಗಿದೆ. ಕಳೆದ 15 ಸೀಸನ್​ಗಳಲ್ಲಿ ಸಿಎಸ್​ಕೆ ಕೇವಲ ಮೂರು ಬಾರಿ ಮಾತ್ರ ಪ್ಲೇಆಫ್ ಆಡಿರಲಿಲ್ಲ. ಇದೀಗ ನಾಲ್ಕನೇ ಬಾರಿಗೆ ಚೆನ್ನೈ ಪಡೆ ಲೀಗ್ ಹಂತದಿಂದಲೇ ಹೊರಬಿದ್ದಿದೆ.

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು  ಬ್ಯಾಕ್ ಟು ಬ್ಯಾಕ್ ಎರಡು ಸೀಸನ್​ಗಳಲ್ಲಿ ಪ್ಲೇಆಫ್ ಆಡದೇ ಹೊರಬಿದ್ದಂತಾಗಿದೆ. ಕಳೆದ 15 ಸೀಸನ್​ಗಳಲ್ಲಿ ಸಿಎಸ್​ಕೆ ಕೇವಲ ಮೂರು ಬಾರಿ ಮಾತ್ರ ಪ್ಲೇಆಫ್ ಆಡಿರಲಿಲ್ಲ. ಇದೀಗ ನಾಲ್ಕನೇ ಬಾರಿಗೆ ಚೆನ್ನೈ ಪಡೆ ಲೀಗ್ ಹಂತದಿಂದಲೇ ಹೊರಬಿದ್ದಿದೆ.

2 / 5
ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ 2020, 2022 ಮತ್ತು 2024 ರಲ್ಲಿ ಲೀಗ್ ಹಂತದಲ್ಲಿ ಹೊರಬಿದ್ದಿತ್ತು. ಆದರೆ ಇದೇ ಮೊದಲ ಬಾರಿ ಬ್ಯಾಕ್ ಟು ಬ್ಯಾಕ್ ಎರಡು ಸೀಸನ್​ಗಳಲ್ಲಿ ಪ್ಲೇಆಫ್​ ಪ್ರವೇಶಿಸುವಲ್ಲಿ ವಿಫಲವಾಗಿದೆ. 2024 ರಲ್ಲಿ ಲೀಗ್ ಹಂತದಲ್ಲೇ ಹೊರಬಿದ್ದಿದ್ದ ಧೋನಿ ಪಡೆ ಈ ಬಾರಿ ಕೂಡ ಅದನ್ನೇ ಪುನರಾವರ್ತಿಸಿದೆ.

ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡ 2020, 2022 ಮತ್ತು 2024 ರಲ್ಲಿ ಲೀಗ್ ಹಂತದಲ್ಲಿ ಹೊರಬಿದ್ದಿತ್ತು. ಆದರೆ ಇದೇ ಮೊದಲ ಬಾರಿ ಬ್ಯಾಕ್ ಟು ಬ್ಯಾಕ್ ಎರಡು ಸೀಸನ್​ಗಳಲ್ಲಿ ಪ್ಲೇಆಫ್​ ಪ್ರವೇಶಿಸುವಲ್ಲಿ ವಿಫಲವಾಗಿದೆ. 2024 ರಲ್ಲಿ ಲೀಗ್ ಹಂತದಲ್ಲೇ ಹೊರಬಿದ್ದಿದ್ದ ಧೋನಿ ಪಡೆ ಈ ಬಾರಿ ಕೂಡ ಅದನ್ನೇ ಪುನರಾವರ್ತಿಸಿದೆ.

3 / 5
ಇಂತಹದೊಂದು ವೈಫಲ್ಯದಿಂದಾಗಿ ಸೂಪರ್ ಕಿಂಗ್ಸ್ ಆಟಗಾರರು ನಿರಾಶೆಗೊಂಡಂತೆ ಕಂಡುಬಂದರು. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅವರ ಮುಖದಲ್ಲಿ ನಿರಾಶೆ ಎದ್ದು ಕಾಣುತ್ತಿತ್ತು. ಧೋನಿಯಿಂದ ಹಿಡಿದು ಜಡೇಜಾವರೆಗೆ ಎಲ್ಲರೂ ಬೇಸರದೊಂದಿಗೆ ಹೆಜ್ಜೆ ಹಾಕಿದ್ದರು.

ಇಂತಹದೊಂದು ವೈಫಲ್ಯದಿಂದಾಗಿ ಸೂಪರ್ ಕಿಂಗ್ಸ್ ಆಟಗಾರರು ನಿರಾಶೆಗೊಂಡಂತೆ ಕಂಡುಬಂದರು. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಅವರ ಮುಖದಲ್ಲಿ ನಿರಾಶೆ ಎದ್ದು ಕಾಣುತ್ತಿತ್ತು. ಧೋನಿಯಿಂದ ಹಿಡಿದು ಜಡೇಜಾವರೆಗೆ ಎಲ್ಲರೂ ಬೇಸರದೊಂದಿಗೆ ಹೆಜ್ಜೆ ಹಾಕಿದ್ದರು.

4 / 5
ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಸುದೀರ್ಘ ಚರ್ಚೆಯಲ್ಲಿ ತೊಡಗಿಸಿಕೊಂಡಿರುವುದು ಕೂಡ ಕಂಡು ಬಂತು. ಒಟ್ಟಿನಲ್ಲಿ 5 ಬಾರಿಯ ಚಾಂಪಿಯನ್ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಸೀಸನ್​ಗಳಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದು ನಿರಾಶೆ ಅನುಭವಿಸಿದೆ. ಈ ನಿರಾಶೆಯೊಂದಿಗೆ ಈ ಬಾರಿ ಕಪ್ ಗೆಲ್ಲಬೇಕೆಂಬ ಸಿಎಸ್​ಕೆ ತಂಡ ಕನಸು ಕೂಡ ಕಮರಿದೆ.

ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಬಳಿಕ ಮಹೇಂದ್ರ ಸಿಂಗ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಸಿ ವಿಶ್ವನಾಥನ್ ಅವರೊಂದಿಗೆ ಸುದೀರ್ಘ ಚರ್ಚೆಯಲ್ಲಿ ತೊಡಗಿಸಿಕೊಂಡಿರುವುದು ಕೂಡ ಕಂಡು ಬಂತು. ಒಟ್ಟಿನಲ್ಲಿ 5 ಬಾರಿಯ ಚಾಂಪಿಯನ್ ಇದೇ ಮೊದಲ ಬಾರಿಗೆ ಬ್ಯಾಕ್ ಟು ಬ್ಯಾಕ್ ಸೀಸನ್​ಗಳಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದು ನಿರಾಶೆ ಅನುಭವಿಸಿದೆ. ಈ ನಿರಾಶೆಯೊಂದಿಗೆ ಈ ಬಾರಿ ಕಪ್ ಗೆಲ್ಲಬೇಕೆಂಬ ಸಿಎಸ್​ಕೆ ತಂಡ ಕನಸು ಕೂಡ ಕಮರಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ