AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2190… ಅತ್ಯಂತ ಹೀನಾಯ ಸೋಲುಂಡ CSK

IPL 2025 RCB vs CSK; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ. ಅದು ಕೂಡ 2190 ದಿನಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಂದರೆ ಸಿಎಸ್​ಕೆ ತಂಡವನ್ನು ತವರು ಮೈದಾನದಲ್ಲಿ ಯಾವುದೇ ತಂಡ 50 ರನ್​ಗಳಿಂದ ಸೋಲಿಸಿರಲಿಲ್ಲ. ಆದರೀಗ ಆರ್​ಸಿಬಿ ಚೆಪಾಕ್ ಕೋಟೆಯನ್ನು ಸಿಎಸ್​ಕೆಯನ್ನು ಬಗ್ಗು ಬಡಿದಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 8:09 AM

Share
IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 5
ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

3 / 5
ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

4 / 5
2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 5
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?