AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2190… ಅತ್ಯಂತ ಹೀನಾಯ ಸೋಲುಂಡ CSK

IPL 2025 RCB vs CSK; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ. ಅದು ಕೂಡ 2190 ದಿನಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಂದರೆ ಸಿಎಸ್​ಕೆ ತಂಡವನ್ನು ತವರು ಮೈದಾನದಲ್ಲಿ ಯಾವುದೇ ತಂಡ 50 ರನ್​ಗಳಿಂದ ಸೋಲಿಸಿರಲಿಲ್ಲ. ಆದರೀಗ ಆರ್​ಸಿಬಿ ಚೆಪಾಕ್ ಕೋಟೆಯನ್ನು ಸಿಎಸ್​ಕೆಯನ್ನು ಬಗ್ಗು ಬಡಿದಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 8:09 AM

Share
IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 5
ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

3 / 5
ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

4 / 5
2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 5
Follow Us
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ