Sign In

By signing in or creating an account, you agree with Associated Broadcasting Company's Terms & Conditions and Privacy Policy.

2190… ಅತ್ಯಂತ ಹೀನಾಯ ಸೋಲುಂಡ CSK

IPL 2025 RCB vs CSK; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ. ಅದು ಕೂಡ 2190 ದಿನಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಂದರೆ ಸಿಎಸ್​ಕೆ ತಂಡವನ್ನು ತವರು ಮೈದಾನದಲ್ಲಿ ಯಾವುದೇ ತಂಡ 50 ರನ್​ಗಳಿಂದ ಸೋಲಿಸಿರಲಿಲ್ಲ. ಆದರೀಗ ಆರ್​ಸಿಬಿ ಚೆಪಾಕ್ ಕೋಟೆಯನ್ನು ಸಿಎಸ್​ಕೆಯನ್ನು ಬಗ್ಗು ಬಡಿದಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 8:09 AM

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 5
ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

3 / 5
ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

4 / 5
2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 5
Follow us
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!