AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2190… ಅತ್ಯಂತ ಹೀನಾಯ ಸೋಲುಂಡ CSK

IPL 2025 RCB vs CSK; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ. ಅದು ಕೂಡ 2190 ದಿನಗಳ ಬಳಿಕ ಅತ್ಯಂತ ಹೀನಾಯವಾಗಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅಂದರೆ ಸಿಎಸ್​ಕೆ ತಂಡವನ್ನು ತವರು ಮೈದಾನದಲ್ಲಿ ಯಾವುದೇ ತಂಡ 50 ರನ್​ಗಳಿಂದ ಸೋಲಿಸಿರಲಿಲ್ಲ. ಆದರೀಗ ಆರ್​ಸಿಬಿ ಚೆಪಾಕ್ ಕೋಟೆಯನ್ನು ಸಿಎಸ್​ಕೆಯನ್ನು ಬಗ್ಗು ಬಡಿದಿದೆ.

ಝಾಹಿರ್ ಯೂಸುಫ್
|

Updated on: Mar 29, 2025 | 8:09 AM

Share
IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

IPL 2025: ಬರೋಬ್ಬರಿ 17 ವರ್ಷಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚೆನ್ನೈನ ಚೆಪಾಕ್ ಮೈದಾನದಲ್ಲಿ ರಾಯಲ್ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಆರ್​ಸಿಬಿ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 5
ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಆರಂಭಿಕರಾದ ವಿರಾಟ್ ಕೊಹ್ಲಿ (31) ಹಾಗೂ ಫಿಲ್ ಸಾಲ್ಟ್ (32) ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆ ಬಳಿಕ ಬಂದ ರಜತ್ ಪಾಟಿದಾರ್ 32 ಎಸೆತಗಳಲ್ಲಿ 51 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 196 ರನ್​ ಕಲೆಹಾಕಿತು.

2 / 5
ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

ಈ ಕಠಿಣ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ಪರ ರಚಿನ್ ರವೀಂದ್ರ 41 ರನ್​ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್​ ಕಳೆದುಕೊಂಡು 146 ರನ್​ಗಳಿಸಿ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆರ್​ಸಿಬಿ 50 ರನ್​ಗಳ ಜಯ ಸಾಧಿಸಿದೆ.

3 / 5
ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

ವಿಶೇಷ ಎಂದರೆ ಇದು ಆರ್​ಸಿಬಿ ಪಾಲಿಗೆ ಅತ್ಯಂತ ಮಹತ್ವದ ಗೆಲುವಾದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪಾಲಿಗೆ ಅತ್ಯಂತ ಹೀನಾಯ ಸೋಲು. ಏಕೆಂದರೆ ಸಿಎಸ್​ಕೆ ತಂಡವು ಕಳೆದ 17 ವರ್ಷಗಳಲ್ಲಿ ಚೆಪಾಕ್ ಮೈದಾನದಲ್ಲಿ 50 ರನ್​ಗಳಿಂದ ಒಂದೇ ಒಂದು ಪಂದ್ಯವನ್ನು ಸೋತಿರಲಿಲ್ಲ.

4 / 5
2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

2019 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 46 ರನ್​ಗಳಿಂದ ಪರಾಜಯಗೊಂಡಿದ್ದೇ ಹೀನಾಯ ಸೋಲಾಗಿತ್ತು. ಆದರೀಗ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚೆನ್ನೈನಲ್ಲೇ ಆರ್​ಸಿಬಿ 50 ರನ್​ಗಳಿಂದ ಬಗ್ಗು ಬಡಿದಿದೆ. ಈ ಮೂಲಕ ಸಿಎಸ್​ಕೆ ತಂಡದ ತವರು ಮೈದಾನದಲ್ಲಿ ಅತ್ಯಧಿಕ ರನ್​ಗಳ ಅಂತರಿಂದ ಗೆದ್ದ ತಂಡವೆಂಬ ಹಿರಿಮೆಯನ್ನು ಆರ್​ಸಿಬಿ ತನ್ನದಾಗಿಸಿಕೊಂಡಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ