AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: CSK ತಂಡಕ್ಕೆ ಪ್ಲೇಆಫ್​​ಗೇರಲು ಇನ್ನೂ ಇದೆ ಚಾನ್ಸ್

Csk playoffs chances 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 43ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 154 ರನ್ ಕಲೆಹಾಕಿದರೆ, ಈ ಗುರಿಯನ್ನು ಸನ್​ರೈಸರ್ಸ್ ಹೈದರಾಬಾದ್ ತಂಡ 18.4 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಎಸ್​ಆರ್​​ಹೆಚ್ ತಂಡ 5 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on: Apr 26, 2025 | 7:25 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 43ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಸೋಲನುಭವಿಸಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್​ಗಳಲ್ಲಿ 154 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 18.4 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿ ಐದು ವಿಕೆಟ್​ಗಳ ಜಯ ಸಾಧಿಸಿದೆ.

ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್​ಗಳಲ್ಲಿ 154 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 18.4 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿ ಐದು ವಿಕೆಟ್​ಗಳ ಜಯ ಸಾಧಿಸಿದೆ.

2 / 6
ಈ ಸೋಲಿನೊಂದಿಗೆ ಸಿಎಸ್​ಕೆ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಈವರೆಗೆ 9 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ ಏಳು ಪಂದ್ಯಗಳಲ್ಲಿ ಪರಾಜಯಗೊಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದಾಗ್ಯೂ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ.

ಈ ಸೋಲಿನೊಂದಿಗೆ ಸಿಎಸ್​ಕೆ ತಂಡದ ಪರಾಜಯದ ಸಂಖ್ಯೆ 7 ಕ್ಕೇರಿದೆ. ಈವರೆಗೆ 9 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಗೆದ್ದಿರುವುದು ಕೇವಲ 2 ಮ್ಯಾಚ್​ಗಳಲ್ಲಿ ಮಾತ್ರ. ಇನ್ನುಳಿದ ಏಳು ಪಂದ್ಯಗಳಲ್ಲಿ ಪರಾಜಯಗೊಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದಾಗ್ಯೂ ಸಿಎಸ್​ಕೆ ತಂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿಲ್ಲ.

3 / 6
ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆದು ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿ ಅಗ್ರ-4 ರಲ್ಲಿ ಕಾಣಿಸಿಕೊಳ್ಳುವ ತಂಡಗಳು 16 ಅಂಕಗಳನ್ನು ಕಲೆಹಾಕಿದರೆ ಸಿಎಸ್​ಕೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ.

ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆದು ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿ ಅಗ್ರ-4 ರಲ್ಲಿ ಕಾಣಿಸಿಕೊಳ್ಳುವ ತಂಡಗಳು 16 ಅಂಕಗಳನ್ನು ಕಲೆಹಾಕಿದರೆ ಸಿಎಸ್​ಕೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ.

4 / 6
ಅಂದರೆ ಇಲ್ಲಿ ಸಿಎಸ್​ಕೆ ತಂಡವು ಪ್ಲೇಆಫ್​ ಪ್ರವೇಶಿಸಬೇಕಿದ್ದರೆ, ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಹಾಗೆಯೇ ಲೀಗ್​ ಹಂತದ ಮುಕ್ತಾಯದ ವೇಳೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವೊಂದು 14 ಅಂಕಗಳನ್ನು ಮಾತ್ರ ಪಡೆದಿರಬೇಕಾಗುತ್ತದೆ.

ಅಂದರೆ ಇಲ್ಲಿ ಸಿಎಸ್​ಕೆ ತಂಡವು ಪ್ಲೇಆಫ್​ ಪ್ರವೇಶಿಸಬೇಕಿದ್ದರೆ, ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಹಾಗೆಯೇ ಲೀಗ್​ ಹಂತದ ಮುಕ್ತಾಯದ ವೇಳೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವೊಂದು 14 ಅಂಕಗಳನ್ನು ಮಾತ್ರ ಪಡೆದಿರಬೇಕಾಗುತ್ತದೆ.

5 / 6
ಹೀಗೆ ಅಂಕ ಪಟ್ಟಿಯಲ್ಲಿರುವ ನಾಲ್ಕನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳೊಂದಿಗೆ ಕಾಣಿಸಿಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್ ರೇಟ್​ನೊಂದಿಗೆ 14 ಪಾಯಿಂಟ್ಸ್ ಪಡೆದು ಪ್ಲೇಆಫ್​ಗೆ ಪ್ರವೇಶಿಸಬಹುದು. ಆದರೆ ಅದಕ್ಕೂ ಮುನ್ನ ಸಿಎಸ್​ಕೆ ತಂಡ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡದ ಪಾಯಿಂಟ್ಸ್ 14 ದಾಟದಂತೆ ಪ್ರಾರ್ಥಿಸಬೇಕು. ಹೀಗಾದಲ್ಲಿ ಮಾತ್ರ ಸಿಎಸ್​ಕೆ ತಂಡವನ್ನು ಈ ಬಾರಿ ಪ್ಲೇಆಫ್​ನಲ್ಲಿ ಎದುರು ನೋಡಬಹುದು.

ಹೀಗೆ ಅಂಕ ಪಟ್ಟಿಯಲ್ಲಿರುವ ನಾಲ್ಕನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳೊಂದಿಗೆ ಕಾಣಿಸಿಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್ ರೇಟ್​ನೊಂದಿಗೆ 14 ಪಾಯಿಂಟ್ಸ್ ಪಡೆದು ಪ್ಲೇಆಫ್​ಗೆ ಪ್ರವೇಶಿಸಬಹುದು. ಆದರೆ ಅದಕ್ಕೂ ಮುನ್ನ ಸಿಎಸ್​ಕೆ ತಂಡ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡದ ಪಾಯಿಂಟ್ಸ್ 14 ದಾಟದಂತೆ ಪ್ರಾರ್ಥಿಸಬೇಕು. ಹೀಗಾದಲ್ಲಿ ಮಾತ್ರ ಸಿಎಸ್​ಕೆ ತಂಡವನ್ನು ಈ ಬಾರಿ ಪ್ಲೇಆಫ್​ನಲ್ಲಿ ಎದುರು ನೋಡಬಹುದು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ