AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬದಲಿ ಆಟಗಾರನಾಗಿ ಸಿಎಸ್​ಕೆ ತಂಡ ಸೇರಿದ ಬೇಬಿ ಎಬಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್

CSK Signs Explosive Batter Dewald Brevis: ಚೆನ್ನೈ ಸೂಪರ್ ಕಿಂಗ್ಸ್ ತಂಡವು 2025ರ ಐಪಿಎಲ್‌ನಲ್ಲಿ ಗಾಯಗೊಂಡ ಗುರ್ಕೀರತ್ ಸಿಂಗ್ ಬದಲಿಗೆ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟರ್ ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಈ ಸೀಸನ್‌ನಲ್ಲಿ ಚೆನ್ನೈನ ಬ್ಯಾಟಿಂಗ್ ದುರ್ಬಲವಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬ್ರೆವಿಸ್ ಅವರ ಅದ್ಭುತ ಟಿ20 ದಾಖಲೆ ಮತ್ತು ಪ್ರಸ್ತುತ ಉತ್ತಮ ಫಾರ್ಮ್ ಸಿಎಸ್‌ಕೆಗೆ ಹೊಸ ಉತ್ಸಾಹ ತುಂಬಲಿದೆ.

ಪೃಥ್ವಿಶಂಕರ
|

Updated on:Apr 18, 2025 | 4:29 PM

Share
2025 ರ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಅಗಮನವಾಗಿದೆ ಶುಕ್ರವಾರ, ಏಪ್ರಿಲ್ 18 ರಂದು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಸಿಎಸ್​ಕೆ ಫ್ರಾಂಚೈಸಿ, ದಕ್ಷಿಣ ಆಫ್ರಿಕಾದ ಯುವ ದಾಂಡಿಗ ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದೆ.

2025 ರ ಐಪಿಎಲ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸ್ಫೋಟಕ ಬ್ಯಾಟರ್​ನ ಅಗಮನವಾಗಿದೆ ಶುಕ್ರವಾರ, ಏಪ್ರಿಲ್ 18 ರಂದು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿರುವ ಸಿಎಸ್​ಕೆ ಫ್ರಾಂಚೈಸಿ, ದಕ್ಷಿಣ ಆಫ್ರಿಕಾದ ಯುವ ದಾಂಡಗ ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿರುವುದಾಗಿ ತಿಳಿಸಿದೆ.

1 / 6
ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ಬದಲಿ ಆಟಗಾರನಾಗಿ ಸಿಎಸ್​ಕೆ ತಂಡವನ್ನು ಸೇರಿಕೊಂಡಿದ್ದು, ಅವರು ವೇಗಿ ಗುರ್ಜಪಾನಿ ಸಿಂಗ್ ಅವರ ಸ್ಥಾನವನ್ನು ತುಂಬಲಿದ್ದಾರೆ. ವಾಸ್ತವವಾಗಿ ಗುರ್ಜಪಾನಿ ಸಿಂಗ್ ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಬ್ರೆವಿಸ್ ಆಗಮನವಾಗಿದೆ.

ದಕ್ಷಿಣ ಆಫ್ರಿಕಾದ ಡೆವಾಲ್ಡ್ ಬ್ರೆವಿಸ್ ಬದಲಿ ಆಟಗಾರನಾಗಿ ಸಿಎಸ್​ಕೆ ತಂಡವನ್ನು ಸೇರಿಕೊಂಡಿದ್ದು, ಅವರು ವೇಗಿ ಗುರ್ಜಪಾನಿ ಸಿಂಗ್ ಅವರ ಸ್ಥಾನವನ್ನು ತುಂಬಲಿದ್ದಾರೆ. ವಾಸ್ತವವಾಗಿ ಗುರ್ಜಪಾನಿ ಸಿಂಗ್ ಗಾಯದ ಕಾರಣ ಇಡೀ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಬ್ರೆವಿಸ್ ಆಗಮನವಾಗಿದೆ.

2 / 6
ಈ ಸೀಸನ್​ನಲ್ಲಿ ಚೆನ್ನೈ ತಂಡದ ಬ್ಯಾಟಿಂಗ್‌ ವಿಭಾಗ ದುರ್ಬಲವಾಗಿ ಕಾಣುತ್ತಿದೆ. ಈ ಕಾರಣದಿಂದಾಗಿ ವೇಗದ ಬೌಲರ್ ಬದಲಿಗೆ ಬ್ಯಾಟ್ಸ್‌ಮನ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಸೀಸನ್‌ನಲ್ಲಿ ಚೆನ್ನೈ ತಂಡವು ದೊಡ್ಡ ಸ್ಕೋರ್ ಗಳಿಸುವಲ್ಲಿ ಅಥವಾ ವೇಗವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲವಾಗಿದೆ. ವಿಶೇಷವಾಗಿ ಅಗ್ರ ಕ್ರಮಾಂಕವು ಈ ವಿಷಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.

ಈ ಸೀಸನ್​ನಲ್ಲಿ ಚೆನ್ನೈ ತಂಡದ ಬ್ಯಾಟಿಂಗ್‌ ವಿಭಾಗ ದುರ್ಬಲವಾಗಿ ಕಾಣುತ್ತಿದೆ. ಈ ಕಾರಣದಿಂದಾಗಿ ವೇಗದ ಬೌಲರ್ ಬದಲಿಗೆ ಬ್ಯಾಟ್ಸ್‌ಮನ್‌ನನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಸೀಸನ್‌ನಲ್ಲಿ ಚೆನ್ನೈ ತಂಡವು ದೊಡ್ಡ ಸ್ಕೋರ್ ಗಳಿಸುವಲ್ಲಿ ಅಥವಾ ವೇಗವಾಗಿ ಬ್ಯಾಟಿಂಗ್ ಮಾಡುವಲ್ಲಿ ವಿಫಲವಾಗಿದೆ. ವಿಶೇಷವಾಗಿ ಅಗ್ರ ಕ್ರಮಾಂಕವು ಈ ವಿಷಯದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.

3 / 6
ಇಂತಹ ಪರಿಸ್ಥಿತಿಯಲ್ಲಿ, ಟಿ20 ಸ್ವರೂಪದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಡೆವಾಲ್ಡ್ ಬ್ರೆವಿಸ್ ಅವರನ್ನು ಚೆನ್ನೈ ತಂಡ ಸೇರಿಸಿಕೊಂಡಿದೆ. ಅವರ ದಾಖಲೆಯೂ ಇದಕ್ಕೆ ಸಾಕ್ಷಿಯಾಗಿದ್ದು, ಈ ಬ್ಯಾಟ್ಸ್‌ಮನ್ ಕೇವಲ 81 ಟಿ20 ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

ಇಂತಹ ಪರಿಸ್ಥಿತಿಯಲ್ಲಿ, ಟಿ20 ಸ್ವರೂಪದಲ್ಲಿ ಸ್ಫೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಡೆವಾಲ್ಡ್ ಬ್ರೆವಿಸ್ ಅವರನ್ನು ಚೆನ್ನೈ ತಂಡ ಸೇರಿಸಿಕೊಂಡಿದೆ. ಅವರ ದಾಖಲೆಯೂ ಇದಕ್ಕೆ ಸಾಕ್ಷಿಯಾಗಿದ್ದು, ಈ ಬ್ಯಾಟ್ಸ್‌ಮನ್ ಕೇವಲ 81 ಟಿ20 ಪಂದ್ಯಗಳಲ್ಲಿ 123 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 6
ಇಷ್ಟೇ ಅಲ್ಲ, ಬ್ರೆವಿಸ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಅವರು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಡಿವಿಷನ್-1 ಟಿ20 ಟೂರ್ನಮೆಂಟ್‌ನ ಕೊನೆಯ 6 ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ತಮ್ಮ ಟಿ20 ವೃತ್ತಿಜೀವನದಲ್ಲಿ, ಬ್ರೆವಿಸ್ 145 ರ ಸ್ಟ್ರೈಕ್ ರೇಟ್‌ನಲ್ಲಿ 1787 ರನ್ ಗಳಿಸಿದ್ದಾರೆ.

ಇಷ್ಟೇ ಅಲ್ಲ, ಬ್ರೆವಿಸ್ ಪ್ರಸ್ತುತ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ಅವರು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಡಿವಿಷನ್-1 ಟಿ20 ಟೂರ್ನಮೆಂಟ್‌ನ ಕೊನೆಯ 6 ಇನ್ನಿಂಗ್ಸ್‌ಗಳಲ್ಲಿ ಒಂದು ಶತಕ ಮತ್ತು 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ತಮ್ಮ ಟಿ20 ವೃತ್ತಿಜೀವನದಲ್ಲಿ, ಬ್ರೆವಿಸ್ 145 ರ ಸ್ಟ್ರೈಕ್ ರೇಟ್‌ನಲ್ಲಿ 1787 ರನ್ ಗಳಿಸಿದ್ದಾರೆ.

5 / 6
ಬ್ರೆವಿಸ್ 2022 ರಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದರು. ಮೊದಲ ಸೀಸನ್‌ನಲ್ಲಿಯೇ ಅವರು 7 ಪಂದ್ಯಗಳಲ್ಲಿ 142 ಸ್ಟ್ರೈಕ್ ರೇಟ್‌ನಲ್ಲಿ 161 ರನ್ ಗಳಿಸಿದರು. ಆದಾಗ್ಯೂ, 2023 ರಲ್ಲಿ ಅವರಿಗೆ ಅವಕಾಶ ಸಿಗಲಿಲ್ಲ. 2024 ರಲ್ಲಿ 3 ಪಂದ್ಯಗಳನ್ನಾಡಿದ್ದ ಅವರು ಕೇವಲ 69 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಆ ಬಳಿಕ ಮುಂಬೈ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು.

ಬ್ರೆವಿಸ್ 2022 ರಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್​ಗೆ ಪಾದಾರ್ಪಣೆ ಮಾಡಿದರು. ಮೊದಲ ಸೀಸನ್‌ನಲ್ಲಿಯೇ ಅವರು 7 ಪಂದ್ಯಗಳಲ್ಲಿ 142 ಸ್ಟ್ರೈಕ್ ರೇಟ್‌ನಲ್ಲಿ 161 ರನ್ ಗಳಿಸಿದರು. ಆದಾಗ್ಯೂ, 2023 ರಲ್ಲಿ ಅವರಿಗೆ ಅವಕಾಶ ಸಿಗಲಿಲ್ಲ. 2024 ರಲ್ಲಿ 3 ಪಂದ್ಯಗಳನ್ನಾಡಿದ್ದ ಅವರು ಕೇವಲ 69 ರನ್ ಕಲೆಹಾಕಲಷ್ಟೇ ಶಕ್ತರಾಗಿದ್ದರು. ಆ ಬಳಿಕ ಮುಂಬೈ ಅವರನ್ನು ತಂಡದಿಂದ ಬಿಡುಗಡೆ ಮಾಡಿತ್ತು.

6 / 6

Published On - 4:26 pm, Fri, 18 April 25

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ