AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಲೀಗ್ ಹಂತದಲ್ಲೇ ಹೊರಬೀಳುವ ಭೀತಿಯಲ್ಲಿ CSK

IPL 2025 CSK Playoffs Scenario: ಐಪಿಎಲ್ 2025ರ ಅಂಕ ಪಟ್ಟಿಯಲ್ಲಿ 6 ತಂಡಗಳು 10 ಅಂಕಗಳನ್ನು ಕಲೆಹಾಕಿದೆ. ಈ 6 ತಂಡಗಳಲ್ಲಿ 4 ತಂಡಗಳು ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಸಿಎಸ್​ಕೆ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದ್ದು, ಹೀಗಾಗಿ ಮುಂದಿನ 6 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಉತ್ತಮ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿದರೆ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

ಝಾಹಿರ್ ಯೂಸುಫ್
|

Updated on: Apr 21, 2025 | 10:54 AM

Share
IPL 2025: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ ಸಿಎಸ್​ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲ್ಲುವ ಮೂಲಕ ಸೋಲಿನ ಸರಪಳಿಯನ್ನು ಕಳಚಿಕೊಂಡಿತು. ಇದೀಗ ಮತ್ತೆ ಸೋಲನುಭವಿಸಿದೆ.

IPL 2025: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ ಸಿಎಸ್​ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲ್ಲುವ ಮೂಲಕ ಸೋಲಿನ ಸರಪಳಿಯನ್ನು ಕಳಚಿಕೊಂಡಿತು. ಇದೀಗ ಮತ್ತೆ ಸೋಲನುಭವಿಸಿದೆ.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ವಿಕೆಟ್​ಗಳಿಂದ ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ತಂಡ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಹೀಗಾಗಿ ಮುಂದಿನ 6 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನಿರ್ಣಾಯಕ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ವಿಕೆಟ್​ಗಳಿಂದ ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ತಂಡ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಹೀಗಾಗಿ ಮುಂದಿನ 6 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನಿರ್ಣಾಯಕ.

2 / 5
ಏಕೆಂದರೆ, ಸಿಎಸ್​ಕೆ ತಂಡವು ಆಡಿರುವ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿ -1.392 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಿಎಸ್​ಕೆ ಪ್ಲೇಆಫ್​ಗೆ ನೇರವಾಗಿ ಅರ್ಹತೆ ಪಡೆಯಬಹುದು.

ಏಕೆಂದರೆ, ಸಿಎಸ್​ಕೆ ತಂಡವು ಆಡಿರುವ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿ -1.392 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಿಎಸ್​ಕೆ ಪ್ಲೇಆಫ್​ಗೆ ನೇರವಾಗಿ ಅರ್ಹತೆ ಪಡೆಯಬಹುದು.

3 / 5
ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತವೆ. ಇದೀಗ ಕೇವಲ 4 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 6 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗೆ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ, 16 ಅಂಕಗಳನ್ನು ಪಡೆಯಬಹುದು.

ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತವೆ. ಇದೀಗ ಕೇವಲ 4 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 6 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗೆ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ, 16 ಅಂಕಗಳನ್ನು ಪಡೆಯಬಹುದು.

4 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಸಿಎಸ್​ಕೆ ತಂಡದ ಎದುರಾಳಿಗಳು ಯಾರೆಂದರೆ... ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್. ಈ 6 ಪಂದ್ಯಗಳಲ್ಲಿ ಜಯ ಸಾಧಿಸಿ ಸಿಎಸ್​ಕೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆಯಾ ಅಥವಾ ಲೀಗ್​ ಹಂತದಲ್ಲೇ ಹೊರಬೀಳಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಸಿಎಸ್​ಕೆ ತಂಡದ ಎದುರಾಳಿಗಳು ಯಾರೆಂದರೆ... ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್. ಈ 6 ಪಂದ್ಯಗಳಲ್ಲಿ ಜಯ ಸಾಧಿಸಿ ಸಿಎಸ್​ಕೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆಯಾ ಅಥವಾ ಲೀಗ್​ ಹಂತದಲ್ಲೇ ಹೊರಬೀಳಲಿದೆಯಾ ಕಾದು ನೋಡಬೇಕಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ