AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಲೀಗ್ ಹಂತದಲ್ಲೇ ಹೊರಬೀಳುವ ಭೀತಿಯಲ್ಲಿ CSK

IPL 2025 CSK Playoffs Scenario: ಐಪಿಎಲ್ 2025ರ ಅಂಕ ಪಟ್ಟಿಯಲ್ಲಿ 6 ತಂಡಗಳು 10 ಅಂಕಗಳನ್ನು ಕಲೆಹಾಕಿದೆ. ಈ 6 ತಂಡಗಳಲ್ಲಿ 4 ತಂಡಗಳು ಮುಂದಿನ 3 ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಸಿಎಸ್​ಕೆ ತಂಡದ ನೆಟ್ ರನ್ ರೇಟ್ ಮೈನಸ್​ನಲ್ಲಿದ್ದು, ಹೀಗಾಗಿ ಮುಂದಿನ 6 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಉತ್ತಮ ನೆಟ್ ರನ್ ರೇಟ್​ನಲ್ಲಿ ಹಿಂದೆ ಉಳಿದರೆ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

ಝಾಹಿರ್ ಯೂಸುಫ್
|

Updated on: Apr 21, 2025 | 10:54 AM

Share
IPL 2025: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ ಸಿಎಸ್​ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲ್ಲುವ ಮೂಲಕ ಸೋಲಿನ ಸರಪಳಿಯನ್ನು ಕಳಚಿಕೊಂಡಿತು. ಇದೀಗ ಮತ್ತೆ ಸೋಲನುಭವಿಸಿದೆ.

IPL 2025: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಸತತ ಸೋಲುಗಳಿಂದ ಕಂಗೆಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಬಳಿಕ ಸಿಎಸ್​ಕೆ ತಂಡವು ಸತತ 5 ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಗೆಲ್ಲುವ ಮೂಲಕ ಸೋಲಿನ ಸರಪಳಿಯನ್ನು ಕಳಚಿಕೊಂಡಿತು. ಇದೀಗ ಮತ್ತೆ ಸೋಲನುಭವಿಸಿದೆ.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ವಿಕೆಟ್​ಗಳಿಂದ ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ತಂಡ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಹೀಗಾಗಿ ಮುಂದಿನ 6 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನಿರ್ಣಾಯಕ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು 9 ವಿಕೆಟ್​ಗಳಿಂದ ಪರಾಜಯಗೊಂಡಿದೆ. ಈ ಸೋಲಿನೊಂದಿಗೆ ಸಿಎಸ್​ಕೆ ತಂಡ ಪ್ಲೇಆಫ್ ಲೆಕ್ಕಾಚಾರಗಳು ಶುರುವಾಗಿದೆ. ಹೀಗಾಗಿ ಮುಂದಿನ 6 ಪಂದ್ಯಗಳು ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ನಿರ್ಣಾಯಕ.

2 / 5
ಏಕೆಂದರೆ, ಸಿಎಸ್​ಕೆ ತಂಡವು ಆಡಿರುವ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿ -1.392 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಿಎಸ್​ಕೆ ಪ್ಲೇಆಫ್​ಗೆ ನೇರವಾಗಿ ಅರ್ಹತೆ ಪಡೆಯಬಹುದು.

ಏಕೆಂದರೆ, ಸಿಎಸ್​ಕೆ ತಂಡವು ಆಡಿರುವ 8 ಪಂದ್ಯಗಳಲ್ಲಿ ಗೆದ್ದಿರುವುದು ಕೇವಲ 2 ಮ್ಯಾಚ್ ಮಾತ್ರ. ಇನ್ನುಳಿದ 6 ಪಂದ್ಯಗಳಲ್ಲಿ ಸೋಲನುಭವಿಸಿ -1.392 ನೆಟ್​ ರನ್​ ರೇಟ್​ನೊಂದಿಗೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಉಳಿದ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಸಿಎಸ್​ಕೆ ಪ್ಲೇಆಫ್​ಗೆ ನೇರವಾಗಿ ಅರ್ಹತೆ ಪಡೆಯಬಹುದು.

3 / 5
ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತವೆ. ಇದೀಗ ಕೇವಲ 4 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 6 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗೆ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ, 16 ಅಂಕಗಳನ್ನು ಪಡೆಯಬಹುದು.

ಸಾಮಾನ್ಯವಾಗಿ 16 ಅಂಕಗಳನ್ನು ಪಡೆಯುವ ತಂಡಗಳು ನೇರವಾಗಿ ಪ್ಲೇಆಫ್​ಗೆ ಅರ್ಹತೆ ಪಡೆಯುತ್ತವೆ. ಇದೀಗ ಕೇವಲ 4 ಅಂಕಗಳನ್ನು ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 6 ಪಂದ್ಯಗಳಲ್ಲೂ ಜಯ ಸಾಧಿಸಬೇಕು. ಹೀಗೆ ಎಲ್ಲಾ ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿದರೆ ಮಾತ್ರ, 16 ಅಂಕಗಳನ್ನು ಪಡೆಯಬಹುದು.

4 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಸಿಎಸ್​ಕೆ ತಂಡದ ಎದುರಾಳಿಗಳು ಯಾರೆಂದರೆ... ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್. ಈ 6 ಪಂದ್ಯಗಳಲ್ಲಿ ಜಯ ಸಾಧಿಸಿ ಸಿಎಸ್​ಕೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆಯಾ ಅಥವಾ ಲೀಗ್​ ಹಂತದಲ್ಲೇ ಹೊರಬೀಳಲಿದೆಯಾ ಕಾದು ನೋಡಬೇಕಿದೆ.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮುಂದಿನ ಎಲ್ಲಾ ಪಂದ್ಯಗಳು ನಿರ್ಣಾಯಕ. ಈ ನಿರ್ಣಾಯಕ ಪಂದ್ಯಗಳಲ್ಲಿ ಸಿಎಸ್​ಕೆ ತಂಡದ ಎದುರಾಳಿಗಳು ಯಾರೆಂದರೆ... ಸನ್​ರೈಸರ್ಸ್ ಹೈದರಾಬಾದ್, ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಲ್ಕತ್ತಾ ನೈಟ್ ರೈಡರ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್. ಈ 6 ಪಂದ್ಯಗಳಲ್ಲಿ ಜಯ ಸಾಧಿಸಿ ಸಿಎಸ್​ಕೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆಯಾ ಅಥವಾ ಲೀಗ್​ ಹಂತದಲ್ಲೇ ಹೊರಬೀಳಲಿದೆಯಾ ಕಾದು ನೋಡಬೇಕಿದೆ.

5 / 5
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ