AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಈ ಬಾರಿ ಕಪ್ ಗೆಲ್ಲೋರು ಇವರೇ ಎಂದ ಡೇವಿಡ್ ವಾರ್ನರ್

IPL 2025 Final: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯಕ್ಕೆ ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಂಟ್ರಿ ಕೊಟ್ಟಿದ್ದು, ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅಥವಾ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.

ಝಾಹಿರ್ ಯೂಸುಫ್
|

Updated on:Jun 01, 2025 | 9:07 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಇದೀಗ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಮೊದಲ ಕ್ವಾಲಿಫೈಯರ್​ನಲ್ಲಿ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಇದೀಗ ದ್ವಿತೀಯ ಕ್ವಾಲಿಫೈಯರ್​ನಲ್ಲಿ ಕಣಕ್ಕಿಳಿಯಲು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಸಜ್ಜಾಗಿದೆ.

1 / 5
ಅದರಂತೆ ಜೂನ್ 1 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಅಂದರೆ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ತಂಡದ ಎದುರಾಳಿಯಾಗಿ ಮುಂಬೈ ಇಂಡಿಯನ್ಸ್ ಅಥವಾ ಪಂಜಾಬ್ ಕಿಂಗ್ಸ್ ಕಣಕ್ಕಿಳಿಯುವುದು ಖಚಿತ. ಆದರೆ ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನವೇ ಐಪಿಎಲ್​ನ ಮಾಜಿ ಆಟಗಾರ ಡೇವಿಡ್ ವಾರ್ನರ್, ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಹೆಸರಿಸಿದ್ದಾರೆ.

ಅದರಂತೆ ಜೂನ್ 1 ರಂದು ನಡೆಯಲಿರುವ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ. ಅಂದರೆ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ತಂಡದ ಎದುರಾಳಿಯಾಗಿ ಮುಂಬೈ ಇಂಡಿಯನ್ಸ್ ಅಥವಾ ಪಂಜಾಬ್ ಕಿಂಗ್ಸ್ ಕಣಕ್ಕಿಳಿಯುವುದು ಖಚಿತ. ಆದರೆ ದ್ವಿತೀಯ ಕ್ವಾಲಿಫೈಯರ್ ಪಂದ್ಯಕ್ಕೂ ಮುನ್ನವೇ ಐಪಿಎಲ್​ನ ಮಾಜಿ ಆಟಗಾರ ಡೇವಿಡ್ ವಾರ್ನರ್, ಈ ಬಾರಿ ಕಪ್ ಗೆಲ್ಲುವ ತಂಡ ಯಾವುದೆಂದು ಹೆಸರಿಸಿದ್ದಾರೆ.

2 / 5
ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್, ನನ್ನ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯಲಿದೆ ಎಂದಿದ್ದಾರೆ. ಅಲ್ಲದೆ ಫೈನಲ್ ಪಂದ್ಯದಲ್ಲಿ ಮಿಂಚುವ ಮೂಲಕ ಜೋಶ್ ಹೇಝಲ್​ವುಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯಲಿದ್ದಾರೆ ಎಂದು ಸಹ ಭವಿಷ್ಯ ನುಡಿದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡೇವಿಡ್ ವಾರ್ನರ್, ನನ್ನ ಪ್ರಕಾರ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಎತ್ತಿ ಹಿಡಿಯಲಿದೆ ಎಂದಿದ್ದಾರೆ. ಅಲ್ಲದೆ ಫೈನಲ್ ಪಂದ್ಯದಲ್ಲಿ ಮಿಂಚುವ ಮೂಲಕ ಜೋಶ್ ಹೇಝಲ್​ವುಡ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆಯಲಿದ್ದಾರೆ ಎಂದು ಸಹ ಭವಿಷ್ಯ ನುಡಿದಿದ್ದಾರೆ.

3 / 5
ಕಳೆದ 17 ವರ್ಷಗಳಲ್ಲಿ ಮೂರು ಬಾರಿ ಕಪ್ ಗೆಲ್ಲುವ ಸನಿಹಕ್ಕೆ ಬಂದಿದ್ದ ಆರ್​ಸಿಬಿ ತಂಡವು ಕೊನೆಯ ಹಂತದಲ್ಲಿ ಎಡವಿತ್ತು. ಇದೀಗ 9 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಅದು ಕೂಡ ಭರ್ಜರಿ ಪ್ರದರ್ಶನ ನೀಡುವ ಮೂಲಕ. ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಫೇವರೇಟ್ ತಂಡವಾಗಿ ಆರ್​ಸಿಬಿ ಗುರುತಿಸಿಕೊಂಡಿದೆ. 

ಕಳೆದ 17 ವರ್ಷಗಳಲ್ಲಿ ಮೂರು ಬಾರಿ ಕಪ್ ಗೆಲ್ಲುವ ಸನಿಹಕ್ಕೆ ಬಂದಿದ್ದ ಆರ್​ಸಿಬಿ ತಂಡವು ಕೊನೆಯ ಹಂತದಲ್ಲಿ ಎಡವಿತ್ತು. ಇದೀಗ 9 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಅದು ಕೂಡ ಭರ್ಜರಿ ಪ್ರದರ್ಶನ ನೀಡುವ ಮೂಲಕ. ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ಟ್ರೋಫಿ ಎತ್ತಿ ಹಿಡಿಯುವ ಫೇವರೇಟ್ ತಂಡವಾಗಿ ಆರ್​ಸಿಬಿ ಗುರುತಿಸಿಕೊಂಡಿದೆ. 

4 / 5
ಅದರಂತೆ ಜೂನ್ 3 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದೆಯಾ  ಕಾದು ನೋಡಬೇಕಿದೆ.

ಅದರಂತೆ ಜೂನ್ 3 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ  ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೊಚ್ಚಲ ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಲಿದೆಯಾ  ಕಾದು ನೋಡಬೇಕಿದೆ.

5 / 5

Published On - 9:04 am, Sun, 1 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ