AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬಿಬಿಎಲ್​ನಲ್ಲಿ ಜೇಕ್​ ಅಟ್ಟರ್ ಫ್ಲಾಪ್: ಡೆಲ್ಲಿ ಕ್ಯಾಪಿಟಲ್ಸ್​ಗೆ ಹೊಸ ಚಿಂತೆ ಶುರು

Jake Fraser-McGurk: ಐಪಿಎಲ್ ಸೀಸನ್-17 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ಜೇಕ್ ಫ್ರೇಸರ್ ಮೆಕ್​ಗುರ್ಕ್ 9 ಇನಿಂಗ್ಸ್​ಗಳಿಂದ ಒಟ್ಟು 330 ರನ್ ಬಾರಿಸಿದ್ದರು. ಈ ವೇಳೆ ಅವರ ಬ್ಯಾಟ್​ನಿಂದ 32 ಫೋರ್ ಹಾಗೂ 28 ಸಿಕ್ಸ್​ಗಳು ಮೂಡಿಬಂದಿದ್ದವು. ಆದರೀಗ ಅದೇ ಜೇಕ್ ಫ್ರೇಸರ್ ಮೆಕ್​ಗುರ್ಕ್ 30 ರನ್​ಗಳಿಸಲು ಪರದಾಡುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 15, 2025 | 9:58 AM

Share
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೆಲ ಸ್ಟಾರ್ ಆಟಗಾರರನ್ನು ಖರೀದಿಸಿದೆ. ಈ ಆಟಗಾರರಲ್ಲಿ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಕೂಡ ಒಬ್ಬರು. ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಅಬ್ಬರಿಸಿದ್ದ ಯುವ ಆಟಗಾರನನ್ನು ಈ ಬಾರಿ ಬರೋಬ್ಬರಿ 9 ಕೋಟಿ ರೂ. ನೀಡಿ ಮತ್ತೆ ಖರೀದಿಸಿದೆ.

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜಿನ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಕೆಲ ಸ್ಟಾರ್ ಆಟಗಾರರನ್ನು ಖರೀದಿಸಿದೆ. ಈ ಆಟಗಾರರಲ್ಲಿ ಯುವ ದಾಂಡಿಗ ಜೇಕ್ ಫ್ರೇಸರ್ ಮೆಕ್​ಗುರ್ಕ್​ ಕೂಡ ಒಬ್ಬರು. ಕಳೆದ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಪರ ಅಬ್ಬರಿಸಿದ್ದ ಯುವ ಆಟಗಾರನನ್ನು ಈ ಬಾರಿ ಬರೋಬ್ಬರಿ 9 ಕೋಟಿ ರೂ. ನೀಡಿ ಮತ್ತೆ ಖರೀದಿಸಿದೆ.

1 / 5
ಆದರೆ ಈ ಖರೀದಿಯ ಬಳಿಕ ಜೇಕ್ ಫ್ರೇಸರ್ ಮೆಕ್​ಗುರ್ಕ್ ಬ್ಯಾಟ್ ಸದ್ದು ಮಾಡಿಲ್ಲ ಎಂಬುದೇ ವಿಶೇಷ. ಅಂದರೆ ಒಂದೇ ಒಂದು ಉತ್ತಮ ಇನಿಂಗ್ಸ್ ಆಡಿಲ್ಲ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಜೇಕ್ ಫ್ರೇಸರ್ ಅಟ್ಟರ್ ಫ್ಲಾಪ್ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಆದರೆ ಈ ಖರೀದಿಯ ಬಳಿಕ ಜೇಕ್ ಫ್ರೇಸರ್ ಮೆಕ್​ಗುರ್ಕ್ ಬ್ಯಾಟ್ ಸದ್ದು ಮಾಡಿಲ್ಲ ಎಂಬುದೇ ವಿಶೇಷ. ಅಂದರೆ ಒಂದೇ ಒಂದು ಉತ್ತಮ ಇನಿಂಗ್ಸ್ ಆಡಿಲ್ಲ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ ಲೀಗ್​ನಲ್ಲಿ ಜೇಕ್ ಫ್ರೇಸರ್ ಅಟ್ಟರ್ ಫ್ಲಾಪ್ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ.

2 / 5
ಬಿಬಿಎಲ್​ನಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ಪರ ಕಣಕ್ಕಿಳಿಯುತ್ತಿರುವ ಜೇಕ್ ಫ್ರೇಸರ್ ಮೆಕ್​ಗುರ್ಕ್ ಈವರೆಗೆ 9 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದಾರೆ. ಆದರೆ ಈ ಒಂಭತ್ತು ಇನಿಂಗ್ಸ್​ಗಳಲ್ಲಿ ಮೂಡಿಬಂದಿರುವ ಒಟ್ಟು ರನ್​​ಗಳು 93 ಮಾತ್ರ. ಅಂದರೆ ಕೇವಲ 10.33 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.

ಬಿಬಿಎಲ್​ನಲ್ಲಿ ಮೆಲ್ಬೋರ್ನ್​ ರೆನೆಗೇಡ್ಸ್ ಪರ ಕಣಕ್ಕಿಳಿಯುತ್ತಿರುವ ಜೇಕ್ ಫ್ರೇಸರ್ ಮೆಕ್​ಗುರ್ಕ್ ಈವರೆಗೆ 9 ಇನಿಂಗ್ಸ್​ಗಳಲ್ಲಿ ಆರಂಭಿಕನಾಗಿ ಬ್ಯಾಟ್ ಬೀಸಿದ್ದಾರೆ. ಆದರೆ ಈ ಒಂಭತ್ತು ಇನಿಂಗ್ಸ್​ಗಳಲ್ಲಿ ಮೂಡಿಬಂದಿರುವ ಒಟ್ಟು ರನ್​​ಗಳು 93 ಮಾತ್ರ. ಅಂದರೆ ಕೇವಲ 10.33 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.

3 / 5
ಇನ್ನು ಈ 9 ಇನಿಂಗ್ಸ್​ಗಳಲ್ಲಿ ಜೇಕ್ ಬ್ಯಾಟ್​​ನಿಂದ ಮೂಡಿಬಂದ ಫೋರ್​​ಗಳ ಸಂಖ್ಯೆ ಕೇವಲ 7. ಹಾಗೆಯೇ 4 ಸಿಕ್ಸ್​​ಗಳನ್ನಷ್ಟೇ ಬಾರಿಸಲು ಯಶಸ್ವಿಯಾಗಿದ್ದಾರೆ. ಇನ್ನು ಈ ಬಾರಿಯ ಬಿಬಿಎಲ್​ನಲ್ಲಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಬಾರಿಸಿದ​ ಗರಿಷ್ಠ ಸ್ಕೋರ್ ಕೇವಲ 26 ರನ್​ಗಳು.

ಇನ್ನು ಈ 9 ಇನಿಂಗ್ಸ್​ಗಳಲ್ಲಿ ಜೇಕ್ ಬ್ಯಾಟ್​​ನಿಂದ ಮೂಡಿಬಂದ ಫೋರ್​​ಗಳ ಸಂಖ್ಯೆ ಕೇವಲ 7. ಹಾಗೆಯೇ 4 ಸಿಕ್ಸ್​​ಗಳನ್ನಷ್ಟೇ ಬಾರಿಸಲು ಯಶಸ್ವಿಯಾಗಿದ್ದಾರೆ. ಇನ್ನು ಈ ಬಾರಿಯ ಬಿಬಿಎಲ್​ನಲ್ಲಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಬಾರಿಸಿದ​ ಗರಿಷ್ಠ ಸ್ಕೋರ್ ಕೇವಲ 26 ರನ್​ಗಳು.

4 / 5
ಇತ್ತ ಈ ಬಾರಿಯ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಅವರನ್ನು ಬರೋಬ್ಬರಿ 9 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಆರಂಭಿಕನಾಗಿ ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿತ್ತು. ಆದರೀಗ ತವರಿನಲ್ಲಿ ನಡೆಯುತ್ತಿರುವ ಟಿ20 ಟೂರ್ನಿಯಲ್ಲೇ ಅಟ್ಟರ್​ ಫ್ಲಾಪ್ ಆಗುವ ಮೂಲಕ ಜೇಕ್ ಫ್ರೇಸರ್ ಮೆಕ್​ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಚಿಂತೆಗೆ ಕಾರಣವಾಗಿದ್ದಾರೆ.

ಇತ್ತ ಈ ಬಾರಿಯ ಮೆಗಾ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಜೇಕ್ ಫ್ರೇಸರ್ ಮೆಕ್​ಗುರ್ಕ್ ಅವರನ್ನು ಬರೋಬ್ಬರಿ 9 ಕೋಟಿ ರೂ. ನೀಡಿ ಖರೀದಿಸಿದೆ. ಈ ಮೂಲಕ ಆರಂಭಿಕನಾಗಿ ಕಣಕ್ಕಿಳಿಸಲು ಪ್ಲ್ಯಾನ್ ರೂಪಿಸಿತ್ತು. ಆದರೀಗ ತವರಿನಲ್ಲಿ ನಡೆಯುತ್ತಿರುವ ಟಿ20 ಟೂರ್ನಿಯಲ್ಲೇ ಅಟ್ಟರ್​ ಫ್ಲಾಪ್ ಆಗುವ ಮೂಲಕ ಜೇಕ್ ಫ್ರೇಸರ್ ಮೆಕ್​ಗುರ್ಕ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಚಿಂತೆಗೆ ಕಾರಣವಾಗಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಆಲಿಕಲ್ಲು ಮಳೆ; ಮನೆ ಮೇಲ್ಚಾವಣಿ ಮೇಲಿನ ಕಲ್ಲುಬಿದ್ದು 6 ವರ್ಷದ ಮಗು ಸಾವು
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ಇನ್ನೇನು ಟೇಕಾಫ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ