Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್

IPL 2025 DC vs LSG: ಐಪಿಎಲ್​​ 2025ರ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಒವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.3 ಓವರ್​ಗಳಲ್ಲಿ 211 ರನ್ ಬಾರಿಸಿ 1 ವಿಕೆಟ್​ನಿಂದ ರೋಚಕ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Mar 25, 2025 | 11:54 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಇನಿಂಗ್ಸ್​ವೊಂದರಲ್ಲಿ ಮೊದಲ 5 ವಿಕೆಟ್ ಕಳೆದುಕೊಂಡ ನಂತರ 120+ ರನ್​ಗಳಿಸಿ ಗೆದ್ದಿರುವುದು ಕೇವಲ 3 ತಂಡಗಳು ಮಾತ್ರ. ಈ ದಾಖಲೆ ಪಟ್ಟಿಯಲ್ಲಿ ಸೋಮವಾರದವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಇದೀಗ RCB ತಂಡದ ಈ ಅಪರೂಪದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್  ಧೂಳೀಪಟ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಇನಿಂಗ್ಸ್​ವೊಂದರಲ್ಲಿ ಮೊದಲ 5 ವಿಕೆಟ್ ಕಳೆದುಕೊಂಡ ನಂತರ 120+ ರನ್​ಗಳಿಸಿ ಗೆದ್ದಿರುವುದು ಕೇವಲ 3 ತಂಡಗಳು ಮಾತ್ರ. ಈ ದಾಖಲೆ ಪಟ್ಟಿಯಲ್ಲಿ ಸೋಮವಾರದವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಇದೀಗ RCB ತಂಡದ ಈ ಅಪರೂಪದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ ಮಾಡಿದೆ.

1 / 5
ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 65 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್  80 ಎಸೆತಗಳಲ್ಲಿ 146 ರನ್ ಬಾರಿಸಿದೆ. ಈ ಮೂಲಕ ಅಸಾಧ್ಯವಾದದನ್ನು ಸಾಧಿಸಿ 1 ವಿಕೆಟ್​ನ ರೋಚಕ ಜಯ ಗೆಲುವು ದಾಖಲಿಸಿದೆ.

ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 65 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ 80 ಎಸೆತಗಳಲ್ಲಿ 146 ರನ್ ಬಾರಿಸಿದೆ. ಈ ಮೂಲಕ ಅಸಾಧ್ಯವಾದದನ್ನು ಸಾಧಿಸಿ 1 ವಿಕೆಟ್​ನ ರೋಚಕ ಜಯ ಗೆಲುವು ದಾಖಲಿಸಿದೆ.

2 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತೀ ಹೆಚ್ಚು ರನ್ ಬಾರಿಸಿ ಗೆದ್ದ ತಂಡವೆಂಬ ದಾಖಲೆ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತೀ ಹೆಚ್ಚು ರನ್ ಬಾರಿಸಿ ಗೆದ್ದ ತಂಡವೆಂಬ ದಾಖಲೆ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

3 / 5
2016 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಆರ್​ಸಿಬಿ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾಗ್ಯೂ ಎಬಿ ಡಿವಿಲಿಯರ್ಸ್ (79) ಅವರ ಸ್ಪೋಟಕ ಇನಿಂಗ್ಸ್​ನೊಂದಿಗೆ ಆರ್​ಸಿಬಿ ಪಡೆ 159 ರನ್​ಗಳನ್ನು ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಅಂದು ಆರ್​ಸಿಬಿ 5 ವಿಕೆಟ್ ಕಳೆದುಕೊಂಡ ಬಳಿಕ ಕಲೆಹಾಕಿದ್ದು ಬರೋಬ್ಬರಿ 130 ರನ್​ಗಳು. ಈ ಮೂಲಕ ಐಪಿಎಲ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದರು.

2016 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಆರ್​ಸಿಬಿ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾಗ್ಯೂ ಎಬಿ ಡಿವಿಲಿಯರ್ಸ್ (79) ಅವರ ಸ್ಪೋಟಕ ಇನಿಂಗ್ಸ್​ನೊಂದಿಗೆ ಆರ್​ಸಿಬಿ ಪಡೆ 159 ರನ್​ಗಳನ್ನು ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಅಂದು ಆರ್​ಸಿಬಿ 5 ವಿಕೆಟ್ ಕಳೆದುಕೊಂಡ ಬಳಿಕ ಕಲೆಹಾಕಿದ್ದು ಬರೋಬ್ಬರಿ 130 ರನ್​ಗಳು. ಈ ಮೂಲಕ ಐಪಿಎಲ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆ ಅಳಿಸಿ ಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ಬರೆದಿದೆ. ಅದು ಸಹ 5 ವಿಕೆಟ್ ಪತನದ ಬಳಿಕ ಬರೋಬ್ಬರಿ 146 ರನ್ ಬಾರಿಸುವ ಮೂಲಕ. ಅಶುತೋಷ್ ಶರ್ಮಾ (66) ಹಾಗೂ ವಿಪ್ರಾಜ್ ನಿಗಮ್ (39) ಅವರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕಳೆದ 8 ವರ್ಷಗಳಿಂದ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ.

ಇದೀಗ ಈ ದಾಖಲೆ ಅಳಿಸಿ ಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ಬರೆದಿದೆ. ಅದು ಸಹ 5 ವಿಕೆಟ್ ಪತನದ ಬಳಿಕ ಬರೋಬ್ಬರಿ 146 ರನ್ ಬಾರಿಸುವ ಮೂಲಕ. ಅಶುತೋಷ್ ಶರ್ಮಾ (66) ಹಾಗೂ ವಿಪ್ರಾಜ್ ನಿಗಮ್ (39) ಅವರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕಳೆದ 8 ವರ್ಷಗಳಿಂದ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ.

5 / 5
Follow us
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ