Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್

IPL 2025 DC vs LSG: ಐಪಿಎಲ್​​ 2025ರ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಒವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.3 ಓವರ್​ಗಳಲ್ಲಿ 211 ರನ್ ಬಾರಿಸಿ 1 ವಿಕೆಟ್​ನಿಂದ ರೋಚಕ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Mar 25, 2025 | 11:54 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಇನಿಂಗ್ಸ್​ವೊಂದರಲ್ಲಿ ಮೊದಲ 5 ವಿಕೆಟ್ ಕಳೆದುಕೊಂಡ ನಂತರ 120+ ರನ್​ಗಳಿಸಿ ಗೆದ್ದಿರುವುದು ಕೇವಲ 3 ತಂಡಗಳು ಮಾತ್ರ. ಈ ದಾಖಲೆ ಪಟ್ಟಿಯಲ್ಲಿ ಸೋಮವಾರದವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಇದೀಗ RCB ತಂಡದ ಈ ಅಪರೂಪದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್  ಧೂಳೀಪಟ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಇನಿಂಗ್ಸ್​ವೊಂದರಲ್ಲಿ ಮೊದಲ 5 ವಿಕೆಟ್ ಕಳೆದುಕೊಂಡ ನಂತರ 120+ ರನ್​ಗಳಿಸಿ ಗೆದ್ದಿರುವುದು ಕೇವಲ 3 ತಂಡಗಳು ಮಾತ್ರ. ಈ ದಾಖಲೆ ಪಟ್ಟಿಯಲ್ಲಿ ಸೋಮವಾರದವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಇದೀಗ RCB ತಂಡದ ಈ ಅಪರೂಪದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ ಮಾಡಿದೆ.

1 / 5
ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 65 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್  80 ಎಸೆತಗಳಲ್ಲಿ 146 ರನ್ ಬಾರಿಸಿದೆ. ಈ ಮೂಲಕ ಅಸಾಧ್ಯವಾದದನ್ನು ಸಾಧಿಸಿ 1 ವಿಕೆಟ್​ನ ರೋಚಕ ಜಯ ಗೆಲುವು ದಾಖಲಿಸಿದೆ.

ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 65 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ 80 ಎಸೆತಗಳಲ್ಲಿ 146 ರನ್ ಬಾರಿಸಿದೆ. ಈ ಮೂಲಕ ಅಸಾಧ್ಯವಾದದನ್ನು ಸಾಧಿಸಿ 1 ವಿಕೆಟ್​ನ ರೋಚಕ ಜಯ ಗೆಲುವು ದಾಖಲಿಸಿದೆ.

2 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತೀ ಹೆಚ್ಚು ರನ್ ಬಾರಿಸಿ ಗೆದ್ದ ತಂಡವೆಂಬ ದಾಖಲೆ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತೀ ಹೆಚ್ಚು ರನ್ ಬಾರಿಸಿ ಗೆದ್ದ ತಂಡವೆಂಬ ದಾಖಲೆ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

3 / 5
2016 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಆರ್​ಸಿಬಿ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾಗ್ಯೂ ಎಬಿ ಡಿವಿಲಿಯರ್ಸ್ (79) ಅವರ ಸ್ಪೋಟಕ ಇನಿಂಗ್ಸ್​ನೊಂದಿಗೆ ಆರ್​ಸಿಬಿ ಪಡೆ 159 ರನ್​ಗಳನ್ನು ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಅಂದು ಆರ್​ಸಿಬಿ 5 ವಿಕೆಟ್ ಕಳೆದುಕೊಂಡ ಬಳಿಕ ಕಲೆಹಾಕಿದ್ದು ಬರೋಬ್ಬರಿ 130 ರನ್​ಗಳು. ಈ ಮೂಲಕ ಐಪಿಎಲ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದರು.

2016 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಆರ್​ಸಿಬಿ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾಗ್ಯೂ ಎಬಿ ಡಿವಿಲಿಯರ್ಸ್ (79) ಅವರ ಸ್ಪೋಟಕ ಇನಿಂಗ್ಸ್​ನೊಂದಿಗೆ ಆರ್​ಸಿಬಿ ಪಡೆ 159 ರನ್​ಗಳನ್ನು ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಅಂದು ಆರ್​ಸಿಬಿ 5 ವಿಕೆಟ್ ಕಳೆದುಕೊಂಡ ಬಳಿಕ ಕಲೆಹಾಕಿದ್ದು ಬರೋಬ್ಬರಿ 130 ರನ್​ಗಳು. ಈ ಮೂಲಕ ಐಪಿಎಲ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆ ಅಳಿಸಿ ಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ಬರೆದಿದೆ. ಅದು ಸಹ 5 ವಿಕೆಟ್ ಪತನದ ಬಳಿಕ ಬರೋಬ್ಬರಿ 146 ರನ್ ಬಾರಿಸುವ ಮೂಲಕ. ಅಶುತೋಷ್ ಶರ್ಮಾ (66) ಹಾಗೂ ವಿಪ್ರಾಜ್ ನಿಗಮ್ (39) ಅವರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕಳೆದ 8 ವರ್ಷಗಳಿಂದ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ.

ಇದೀಗ ಈ ದಾಖಲೆ ಅಳಿಸಿ ಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ಬರೆದಿದೆ. ಅದು ಸಹ 5 ವಿಕೆಟ್ ಪತನದ ಬಳಿಕ ಬರೋಬ್ಬರಿ 146 ರನ್ ಬಾರಿಸುವ ಮೂಲಕ. ಅಶುತೋಷ್ ಶರ್ಮಾ (66) ಹಾಗೂ ವಿಪ್ರಾಜ್ ನಿಗಮ್ (39) ಅವರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕಳೆದ 8 ವರ್ಷಗಳಿಂದ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ.

5 / 5
Follow us
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ