AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ದಾಖಲೆ ಧೂಳೀಪಟ ಮಾಡಿದ ಡೆಲ್ಲಿ ಬಾಯ್ಸ್

IPL 2025 DC vs LSG: ಐಪಿಎಲ್​​ 2025ರ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ನಿಗದಿತ 20 ಒವರ್​ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.3 ಓವರ್​ಗಳಲ್ಲಿ 211 ರನ್ ಬಾರಿಸಿ 1 ವಿಕೆಟ್​ನಿಂದ ರೋಚಕ ಗೆಲುವು ದಾಖಲಿಸಿತು.

ಝಾಹಿರ್ ಯೂಸುಫ್
|

Updated on: Mar 25, 2025 | 11:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಇನಿಂಗ್ಸ್​ವೊಂದರಲ್ಲಿ ಮೊದಲ 5 ವಿಕೆಟ್ ಕಳೆದುಕೊಂಡ ನಂತರ 120+ ರನ್​ಗಳಿಸಿ ಗೆದ್ದಿರುವುದು ಕೇವಲ 3 ತಂಡಗಳು ಮಾತ್ರ. ಈ ದಾಖಲೆ ಪಟ್ಟಿಯಲ್ಲಿ ಸೋಮವಾರದವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಇದೀಗ RCB ತಂಡದ ಈ ಅಪರೂಪದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್  ಧೂಳೀಪಟ ಮಾಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲಿ ಇನಿಂಗ್ಸ್​ವೊಂದರಲ್ಲಿ ಮೊದಲ 5 ವಿಕೆಟ್ ಕಳೆದುಕೊಂಡ ನಂತರ 120+ ರನ್​ಗಳಿಸಿ ಗೆದ್ದಿರುವುದು ಕೇವಲ 3 ತಂಡಗಳು ಮಾತ್ರ. ಈ ದಾಖಲೆ ಪಟ್ಟಿಯಲ್ಲಿ ಸೋಮವಾರದವರೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರಸ್ಥಾನದಲ್ಲಿತ್ತು. ಆದರೆ ಇದೀಗ RCB ತಂಡದ ಈ ಅಪರೂಪದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಧೂಳೀಪಟ ಮಾಡಿದೆ.

1 / 5
ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 65 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್  80 ಎಸೆತಗಳಲ್ಲಿ 146 ರನ್ ಬಾರಿಸಿದೆ. ಈ ಮೂಲಕ ಅಸಾಧ್ಯವಾದದನ್ನು ಸಾಧಿಸಿ 1 ವಿಕೆಟ್​ನ ರೋಚಕ ಜಯ ಗೆಲುವು ದಾಖಲಿಸಿದೆ.

ವಿಶಾಖಪಟ್ಟಣದ ವೈಎಸ್​ಆರ್​ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು 65 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ 80 ಎಸೆತಗಳಲ್ಲಿ 146 ರನ್ ಬಾರಿಸಿದೆ. ಈ ಮೂಲಕ ಅಸಾಧ್ಯವಾದದನ್ನು ಸಾಧಿಸಿ 1 ವಿಕೆಟ್​ನ ರೋಚಕ ಜಯ ಗೆಲುವು ದಾಖಲಿಸಿದೆ.

2 / 5
ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತೀ ಹೆಚ್ಚು ರನ್ ಬಾರಿಸಿ ಗೆದ್ದ ತಂಡವೆಂಬ ದಾಖಲೆ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

ಇದರೊಂದಿಗೆ ಐಪಿಎಲ್​ ಇತಿಹಾಸದಲ್ಲಿ 5 ವಿಕೆಟ್ ಕಳೆದುಕೊಂಡ ಬಳಿಕ ಅತೀ ಹೆಚ್ಚು ರನ್ ಬಾರಿಸಿ ಗೆದ್ದ ತಂಡವೆಂಬ ದಾಖಲೆ ಕೂಡ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಈ ರೆಕಾರ್ಡ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿತ್ತು.

3 / 5
2016 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಆರ್​ಸಿಬಿ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾಗ್ಯೂ ಎಬಿ ಡಿವಿಲಿಯರ್ಸ್ (79) ಅವರ ಸ್ಪೋಟಕ ಇನಿಂಗ್ಸ್​ನೊಂದಿಗೆ ಆರ್​ಸಿಬಿ ಪಡೆ 159 ರನ್​ಗಳನ್ನು ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಅಂದು ಆರ್​ಸಿಬಿ 5 ವಿಕೆಟ್ ಕಳೆದುಕೊಂಡ ಬಳಿಕ ಕಲೆಹಾಕಿದ್ದು ಬರೋಬ್ಬರಿ 130 ರನ್​ಗಳು. ಈ ಮೂಲಕ ಐಪಿಎಲ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದರು.

2016 ರ ಐಪಿಎಲ್​ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಆರ್​ಸಿಬಿ 29 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾಗ್ಯೂ ಎಬಿ ಡಿವಿಲಿಯರ್ಸ್ (79) ಅವರ ಸ್ಪೋಟಕ ಇನಿಂಗ್ಸ್​ನೊಂದಿಗೆ ಆರ್​ಸಿಬಿ ಪಡೆ 159 ರನ್​ಗಳನ್ನು ಚೇಸ್ ಮಾಡಿ 4 ವಿಕೆಟ್​ಗಳ ಜಯ ಸಾಧಿಸಿತ್ತು. ಅಂದು ಆರ್​ಸಿಬಿ 5 ವಿಕೆಟ್ ಕಳೆದುಕೊಂಡ ಬಳಿಕ ಕಲೆಹಾಕಿದ್ದು ಬರೋಬ್ಬರಿ 130 ರನ್​ಗಳು. ಈ ಮೂಲಕ ಐಪಿಎಲ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಈ ದಾಖಲೆ ಅಳಿಸಿ ಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ಬರೆದಿದೆ. ಅದು ಸಹ 5 ವಿಕೆಟ್ ಪತನದ ಬಳಿಕ ಬರೋಬ್ಬರಿ 146 ರನ್ ಬಾರಿಸುವ ಮೂಲಕ. ಅಶುತೋಷ್ ಶರ್ಮಾ (66) ಹಾಗೂ ವಿಪ್ರಾಜ್ ನಿಗಮ್ (39) ಅವರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕಳೆದ 8 ವರ್ಷಗಳಿಂದ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ.

ಇದೀಗ ಈ ದಾಖಲೆ ಅಳಿಸಿ ಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಹೊಸ ಇತಿಹಾಸ ಬರೆದಿದೆ. ಅದು ಸಹ 5 ವಿಕೆಟ್ ಪತನದ ಬಳಿಕ ಬರೋಬ್ಬರಿ 146 ರನ್ ಬಾರಿಸುವ ಮೂಲಕ. ಅಶುತೋಷ್ ಶರ್ಮಾ (66) ಹಾಗೂ ವಿಪ್ರಾಜ್ ನಿಗಮ್ (39) ಅವರ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ಕಳೆದ 8 ವರ್ಷಗಳಿಂದ ಆರ್​ಸಿಬಿ ತಂಡದ ಹೆಸರಿನಲ್ಲಿದ್ದ ದಾಖಲೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ತನ್ನದಾಗಿಸಿಕೊಂಡಿದೆ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್