AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗೆಲುವಿನ ಬೆನ್ನಲ್ಲೇ RCB ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಡಿಕೆ

IPL 2025 Josh Hazlewood: ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್ ಭುಜದ ನೋವಿನ ಕಾರಣ ಕಳೆದ ಕೆಲ ಪಂದ್ಯಗಳಿಂದ ಹೊರಗುಳಿದಿದ್ದರು. ಇದೀಗ ಸಂಪೂರ್ಣ ಫಿಟ್​ ಸಾಧಿಸಿರುವ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದೊಡನೆ ಮುಲ್ಲನ್​ಪುರ್​ಗೆ ತೆರಳಿದ್ದಾರೆ. ಇದರೊಂದಿಗೆ ಪ್ಲೇಆಫ್ ಸುತ್ತಿನಲ್ಲಿ ಹೇಝಲ್​ವುಡ್ ಕಣಕ್ಕಿಳಿಯುವುದು ಸಹ ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on: May 28, 2025 | 12:54 PM

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮಂಗಳವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ಆರ್​​​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಭರ್ಜರಿ ಪ್ರದರ್ಶನ ಮುಂದುವರೆಸಿದೆ. ಮಂಗಳವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಜಯ ಸಾಧಿಸುವ ಮೂಲಕ ಆರ್​​​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ.

1 / 5
ಅದರಂತೆ ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಲಿರುವುದನ್ನು ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.

ಅದರಂತೆ ಮೇ 29 ರಂದು ನಡೆಯಲಿರುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಪರ ಜೋಶ್ ಹೇಝಲ್​ವುಡ್ ಕಣಕ್ಕಿಳಿಯಲಿರುವುದನ್ನು ಎಂದು ದಿನೇಶ್ ಕಾರ್ತಿಕ್ ಖಚಿತಪಡಿಸಿದ್ದಾರೆ.

2 / 5
ಎಲ್​ಎಸ್​ಜಿ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಡಿಕೆ, ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಪಂದ್ಯದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಹೇಝಲ್​ವುಡ್ ಮತ್ತೆ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಎಲ್​ಎಸ್​ಜಿ ವಿರುದ್ಧದ ಪಂದ್ಯದ ಬಳಿಕ ಮಾತನಾಡಿದ ಡಿಕೆ, ಜೋಶ್ ಹೇಝಲ್​ವುಡ್ ಸಂಪೂರ್ಣ ಫಿಟ್ ಆಗಿದ್ದು, ಮುಂದಿನ ಪಂದ್ಯದ ಪಂದ್ಯದಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ. ಅದರಂತೆ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಹೇಝಲ್​ವುಡ್ ಮತ್ತೆ ಆರ್​ಸಿಬಿ ಪರ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

3 / 5
ಇತ್ತ ಜೋಶ್ ಹೇಝಲ್​ವುಡ್ ಅಲಭ್ಯತೆಯ ನಡುವೆ ಆರ್​ಸಿಬಿ ತಂಡವು ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಹೇಝಲ್​ವುಡ್ ಪ್ಲೇಆಫ್​ನಲ್ಲಿ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್.

ಇತ್ತ ಜೋಶ್ ಹೇಝಲ್​ವುಡ್ ಅಲಭ್ಯತೆಯ ನಡುವೆ ಆರ್​ಸಿಬಿ ತಂಡವು ಬೌಲಿಂಗ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಅದರಲ್ಲೂ ಕಳೆದ ಎರಡು ಪಂದ್ಯಗಳಲ್ಲಿ ಆರ್​ಸಿಬಿ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಇದೀಗ ಹೇಝಲ್​ವುಡ್ ಪ್ಲೇಆಫ್​ನಲ್ಲಿ ಕಣಕ್ಕಿಳಿಯುತ್ತಿರುವುದು ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್.

4 / 5
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದಿರುವುದು ಜೋಶ್ ಹೇಝಲ್​ವುಡ್. ಕಳೆದ 10 ಪಂದ್ಯಗಳಲ್ಲಿ 36.5 ಓವರ್​ ಮಾಡಿದ್ದ ಹೇಝಲ್​ವುಡ್ ಒಟ್ಟು 18 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಟ್ಟು 103 ಡಾಟ್ ಬಾಲ್ ಎಸೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ಜೋಶ್ ಹೇಝಲ್​ವುಡ್ ಆಗಮನವು ಆರ್​ಸಿಬಿ ತಂಡದ ಬೌಲಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಡೌಟೇ ಇಲ್ಲ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಪಡೆದಿರುವುದು ಜೋಶ್ ಹೇಝಲ್​ವುಡ್. ಕಳೆದ 10 ಪಂದ್ಯಗಳಲ್ಲಿ 36.5 ಓವರ್​ ಮಾಡಿದ್ದ ಹೇಝಲ್​ವುಡ್ ಒಟ್ಟು 18 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಟ್ಟು 103 ಡಾಟ್ ಬಾಲ್ ಎಸೆಯುವ ಮೂಲಕ ಮಿಂಚಿದ್ದಾರೆ. ಹೀಗಾಗಿ ಜೋಶ್ ಹೇಝಲ್​ವುಡ್ ಆಗಮನವು ಆರ್​ಸಿಬಿ ತಂಡದ ಬೌಲಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವುದರಲ್ಲಿ ಡೌಟೇ ಇಲ್ಲ.

5 / 5
Follow us
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು