AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಪ್ಟನ್ ಯಾರೆಂದು ಬಹಿರಂಗಪಡಿಸಿದ RCB ಬ್ಯಾಟಿಂಗ್ ಕೋಚ್

IPL 2025 Delhi Capitals Captain: ಐಪಿಎಲ್​ನಲ್ಲಿ ಕಳೆದ ಕೆಲ ವರ್ಷಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರಿಷಭ್ ಪಂತ್ ಮುನ್ನಡೆಸಿದ್ದರು. ಆದರೆ ಈ ಬಾರಿಯ ಮೆಗಾ ಹರಾಜಿನ ಮೂಲಕ ರಿಷಭ್ ಪಂತ್ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಝಾಹಿರ್ ಯೂಸುಫ್
|

Updated on: Jan 18, 2025 | 10:23 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ತೆರೆ ಎಳೆದಿದ್ದಾರೆ. ಖಾಸಗಿ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಡಿಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಕುತೂಹಲಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ತೆರೆ ಎಳೆದಿದ್ದಾರೆ. ಖಾಸಗಿ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಡಿಕೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಂದಿನ ನಾಯಕನ ಹೆಸರನ್ನು ಬಹಿರಂಗಪಡಿಸಿದ್ದಾರೆ.

1 / 5
ದಿನೇಶ್ ಕಾರ್ತಿಕ್ ಹಂಚಿಕೊಂಡ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ANI ಕೂಡ ವರದಿ ಮಾಡಿದ್ದು, ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಚುಕ್ಕಾಣಿ ಅಕ್ಷರ್ ಪಟೇಲ್ ಪಾಲಾಗುವುದು ಬಹುತೇಕ ಖಚಿತ ಎನ್ನಬಹುದು.

ದಿನೇಶ್ ಕಾರ್ತಿಕ್ ಹಂಚಿಕೊಂಡ ಮಾಹಿತಿ ಪ್ರಕಾರ, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಅಕ್ಷರ್ ಪಟೇಲ್ ಮುನ್ನಡೆಸಲಿದ್ದಾರೆ. ಇದನ್ನು ಪುಷ್ಠೀಕರಿಸುವಂತೆ ANI ಕೂಡ ವರದಿ ಮಾಡಿದ್ದು, ಹೀಗಾಗಿ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ಚುಕ್ಕಾಣಿ ಅಕ್ಷರ್ ಪಟೇಲ್ ಪಾಲಾಗುವುದು ಬಹುತೇಕ ಖಚಿತ ಎನ್ನಬಹುದು.

2 / 5
ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ರೇಸ್​ನಲ್ಲಿ ಅಕ್ಷರ್ ಪಟೇಲ್​ ಜೊತೆ ಫಾಫ್ ಡುಪ್ಲೆಸಿಸ್, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಹಳೆಯ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕ್ಯಾಪ್ಟನ್ ರೇಸ್​ನಲ್ಲಿ ಅಕ್ಷರ್ ಪಟೇಲ್​ ಜೊತೆ ಫಾಫ್ ಡುಪ್ಲೆಸಿಸ್, ಕೆಎಲ್ ರಾಹುಲ್ ಹೆಸರುಗಳು ಮುಂಚೂಣಿಯಲ್ಲಿದ್ದವು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಯು ಹಳೆಯ ಆಟಗಾರನಿಗೆ ನಾಯಕತ್ವ ನೀಡಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

3 / 5
2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಕ್ಷರ್ ಪಟೇಲ್ ಅವರನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ  16.50 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಡೆಲ್ಲಿ ತಂಡದ ದುಬಾರಿ ಆಟಗಾರನಿಗೆ ಸಾರಥ್ಯ ನೀಡಲು ಮುಂದಾಗಿದ್ದಾರೆ. ಅದರಂತೆ ಈ ಬಾರಿ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

2019 ರಿಂದ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ಅಕ್ಷರ್ ಪಟೇಲ್ ಅವರನ್ನು ಈ ಬಾರಿಯ ಮೆಗಾ ಹರಾಜಿಗೂ ಮುನ್ನ 16.50 ಕೋಟಿ ರೂ.ಗೆ ರಿಟೈನ್ ಮಾಡಿಕೊಂಡಿತ್ತು. ಇದೀಗ ಡೆಲ್ಲಿ ತಂಡದ ದುಬಾರಿ ಆಟಗಾರನಿಗೆ ಸಾರಥ್ಯ ನೀಡಲು ಮುಂದಾಗಿದ್ದಾರೆ. ಅದರಂತೆ ಈ ಬಾರಿ ಅಕ್ಷರ್ ಪಟೇಲ್ ಮುಂದಾಳತ್ವದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ.

4 / 5
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

ಡೆಲ್ಲಿ ಕ್ಯಾಪಿಟಲ್ಸ್ ತಂಡ: ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಟ್ರಿಸ್ಟನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಮಿಚೆಲ್ ಸ್ಟಾರ್ಕ್, ಕೆಎಲ್ ರಾಹುಲ್, ಹ್ಯಾರಿ ಬ್ರೂಕ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಟಿ.ನಟರಾಜನ್, ಕರುಣ್ ನಾಯರ್, ಸಮೀರ್ ರಿಝ್ವಿ, ಅಶುತೋಷ್ ಶರ್ಮಾ, ಮೋಹಿತ್ ಶರ್ಮಾ, ಫಾಫ್ ಡು ಪ್ಲೆಸಿಸ್, ಮುಖೇಶ್ ಕುಮಾರ್, ದರ್ಶನ್ ನಲ್ಕಂಡೆ, ವಿಪ್ರಜ್ ನಿಗಮ್, ದುಷ್ಮಂತ ಚಮೀರಾ, ಡೊನೊವನ್ ಫೆರೇರಾ, ಅಜಯ್ ಮಂಡಲ್, ಮನ್ವಂತ್ ಕುಮಾರ್, ತ್ರಿಪುರಾಣ ವಿಜಯ್, ಮಾಧವ್ ತಿವಾರಿ.

5 / 5
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ತೇಜಸ್ವಿ ಸೂರ್ಯಗೆ ಇನ್ನೂ ಅನುಭವವಿಲ್ಲ: ಬರೀ ಖಾಲಿ ಮಾತು ಬೇಡ ಎಂದ ಡಿಕೆಶಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಸುದ್ದಿಗೋಷ್ಠಿ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಪ್ರತಿ ವರ್ಷ ಮೆಟ್ರೋ ದರ ಹೆಚ್ಚಾಗಬೇಕು ಎಂದು ಸಲಹೆ ನೀಡಿದ್ದು ರಾಜ್ಯ ಸರ್ಕಾರ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಗೆ ನಾಯಕಿಯಾದ ‘ರಾಮಾಚಾರಿ’ ಮೌನ
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಡೆಲಿವರಿ ಬಾಯ್ಸ್ಗೆ ಹೆಲ್ಮೆಟ್​ನಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ ಕಿಡಿಗೇಡಿಗಳು
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಸ್ಕೂಟರ್​​ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ವಿಡಿಯೋ ವೈರಲ್
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್!
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಶೋಗಾಗಿ ಮತ್ತೆ ಒಂದಾದ ಗಿಲ್ಲಿ ನಟ ಹಾಗೂ ಕಾವ್ಯಾ ಶೈವ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
ಒಪ್ಪಂದ ಆಗಿದೆ, ನಾವು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!
T20 World Cup 2026: ಇಟಲಿ ಮುಂದೆ ಯುಎಇ ಪಲ್ಟಿ!