AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

Indian Premier League 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಬಿಸಿಸಿಐ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳಿಂದಾಗಿ ಈಗಾಗಲೇ ಐವರು ಆಟಗಾರರು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ಮೊದಲ ಸುತ್ತಿನಲ್ಲೇ ದಂಡ ಕಟ್ಟಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Apr 07, 2025 | 1:54 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್​ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್​ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

1 / 6
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

2 / 6
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 6
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

4 / 6
ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ.  25 ರಷ್ಟು ದಂಡ ವಿಧಿಸಲಾಗಿದೆ.

ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ.  25 ರಷ್ಟು ದಂಡ ವಿಧಿಸಲಾಗಿದೆ.

5 / 6
ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

6 / 6
Follow us
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ವಿಡಿಯೋ: ಭೀಕರ ದಾಳಿಗೆ ಛಿದ್ರ ಛಿದ್ರವಾಗಿ ಹಾರಿದ ಪಾಕ್ ಸೈನಿಕರ ಮೃತದೇಹ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ
ಕರುಂಗಲಿ ಮಾಲೆಯ ಹಿಂದಿನ ರಹಸ್ಯ ಹಾಗೂ ಅದರ ಮಹತ್ವ ತಿಳಿಯಿರಿ