Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 9 ದಿನಗಳಲ್ಲಿ ಐವರು ಆಟಗಾರರಿಗೆ ದಂಡ..!

Indian Premier League 2025: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2025) ಬಿಸಿಸಿಐ ಕಟ್ಟು ನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳಿಂದಾಗಿ ಈಗಾಗಲೇ ಐವರು ಆಟಗಾರರು ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಹೀಗೆ ಮೊದಲ ಸುತ್ತಿನಲ್ಲೇ ದಂಡ ಕಟ್ಟಿಸಿಕೊಂಡ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಝಾಹಿರ್ ಯೂಸುಫ್
|

Updated on: Apr 07, 2025 | 1:54 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್​ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶುರುವಾಗಿ 2 ವಾರಗಳು ಕಳೆದಿವೆ. ಈ ಎರಡು ವಾರಗಳಲ್ಲಿ ಒಟ್ಟು 19 ಪಂದ್ಯಗಳನ್ನಅಡಲಾಗಿದೆ. ಈ ಹತ್ತೊಂಬತ್ತು ಮ್ಯಾಚ್​ಗಳಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ ಐವರು ಆಟಗಾರರಿಗೆ ದಂಡದ ಶಿಕ್ಷೆ ನೀಡಲಾಗಿದೆ. ಅದರಲ್ಲೂ ಓರ್ವ ಆಟಗಾರ ಎರಡೇ ವಾರಗಳಲ್ಲಿ 2 ಬಾರಿ ಫೈನ್ ಕಟ್ಟಿದ್ದಾರೆ. ಈವರೆಗೆ ಐಪಿಎಲ್​ನಲ್ಲಿ ದಂಡ ಕಟ್ಟಿಸಿಕೊಂಡ ಆಟಗಾರರು ಯಾರೆಲ್ಲಾ ನೋಡುವುದಾದರೆ...

1 / 6
ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

ಹಾರ್ದಿಕ್ ಪಾಂಡ್ಯ: ಮಾರ್ಚ್ 30 ರಂದು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಹಮದಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಸ್ಲೋ ಓವರ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ವಿಧಿಸಲಾಗಿದೆ.

2 / 6
ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಯಾನ್ ಪರಾಗ್: ಸಂಜು ಸ್ಯಾಮ್ಸನ್ ಬದಲಿಗೆ ರಾಜಸ್ಥಾನ್ ರಾಯಲ್ಸ್ ತಂಡವನ್ನು 3 ಪಂದ್ಯಗಳಲ್ಲಿ ಮುನ್ನಡೆಸಿದ್ದ ರಿಯಾನ್ ಪರಾಗ್ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪರಾಗ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

3 / 6
ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

ರಿಷಭ್ ಪಂತ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ದಂಡ ತೆತ್ತಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಪಂತ್​ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.

4 / 6
ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ.  25 ರಷ್ಟು ದಂಡ ವಿಧಿಸಲಾಗಿದೆ.

ಇಶಾಂತ್ ಶರ್ಮಾ: ಗುಜರಾತ್ ಟೈಟಾನ್ಸ್ ತಂಡದ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡ ದಂಡದ ಶಿಕ್ದೆಗೆ ಗುರಿಯಾಗಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಅವರಿಗೆ ಪಂದ್ಯ ಶುಲ್ಕದ ಶೇ.  25 ರಷ್ಟು ದಂಡ ವಿಧಿಸಲಾಗಿದೆ.

5 / 6
ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

ದಿಗ್ವೇಶ್ ರಾಠಿ: ಲಕ್ನೋ ಸೂಪರ್ ಜೈಂಟ್ಸ್ ತಂಡದ ಯುವ ಸ್ಪಿನ್ನರ್ ದಿಗ್ವೇಶ್ ರಾಠಿ ಈಗಾಗಲೇ ಎರಡು ಬಾರಿ ದಂಡದ ಶಿಕ್ಷೆಗೆ ಗುರಿಯಾಗಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ ಅವರನ್ನು ಔಟ್ ಮಾಡಿ ನೋಟ್ ಬುಕ್ ಸೆಲೆಬ್ರೇಷನ್ ಮಾಡಿದ್ದ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ.25 ರಷ್ಟು ದಂಡ ವಿಧಿಸಿದ್ದರು. ಅಲ್ಲದೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು. ಇದಾದ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮತ್ತದೇ ನೋಟ್​ ಬುಕ್ ಸೆಲೆಬ್ರೇಷನ್​ನೊಂದಿಗೆ ದಿಗ್ವೇಶ್ ರಾಠಿ ಕಾಣಿಸಿಕೊಂಡಿದ್ದಾರೆ. ಐಪಿಎಲ್​ ನಿಯಮ ಉಲ್ಲಂಘಿಸಿದ್ದಕಾಗಿ ಈ ಬಾರಿ ದಿಗ್ವೇಶ್​ಗೆ ಪಂದ್ಯ ಶುಲ್ಕದ ಶೇ. 50 ರಷ್ಟು ದಂಡ ಹಾಗೂ 2 ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.

6 / 6
Follow us
ರಿಕ್ಕಿ ಬಲಗೈಯಲ್ಲಿದ್ದ ಗುಂಡನ್ನು ವೈದ್ಯರು ಹೊರತೆಗೆದಿದ್ದಾರೆ: ಜಗದೀಶ್
ರಿಕ್ಕಿ ಬಲಗೈಯಲ್ಲಿದ್ದ ಗುಂಡನ್ನು ವೈದ್ಯರು ಹೊರತೆಗೆದಿದ್ದಾರೆ: ಜಗದೀಶ್
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪರಮೇಶ್ವರ್
ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಪರಮೇಶ್ವರ್
ಮುಂಬೈನಲ್ಲಿ ದೇವಾಲಯ ಧ್ವಂಸ; ಸಾವಿರಾರು ಜೈನರಿಂದ ಪ್ರತಿಭಟನೆ
ಮುಂಬೈನಲ್ಲಿ ದೇವಾಲಯ ಧ್ವಂಸ; ಸಾವಿರಾರು ಜೈನರಿಂದ ಪ್ರತಿಭಟನೆ
ಸಮುದ್ರದಲ್ಲಿ 28 ಕಿಮೀ ಈಜಿದ ಹುಬ್ಬಳ್ಳಿ CPI
ಸಮುದ್ರದಲ್ಲಿ 28 ಕಿಮೀ ಈಜಿದ ಹುಬ್ಬಳ್ಳಿ CPI
ರಥೋತ್ಸವ ಅವಘಡದಲ್ಲಿ ಯಾರೂ ಗಾಯಗೊಳ್ಳದಿರುವುದೇ ಪವಾಡ
ರಥೋತ್ಸವ ಅವಘಡದಲ್ಲಿ ಯಾರೂ ಗಾಯಗೊಳ್ಳದಿರುವುದೇ ಪವಾಡ
ಶಿವಕುಮಾರ್ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸಿದ್ದಾರೆ: ಗಣಿಗ
ಶಿವಕುಮಾರ್ ಟೀಕಿಸಿದ್ದಕ್ಕೆ ಮುನಿರತ್ನ ಸಾಕಷ್ಟು ಅನುಭವಿಸಿದ್ದಾರೆ: ಗಣಿಗ
ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ
ಆಗ ಅಹಿಂದ ಅಯ್ತು ಈಗ ಜಾತಿ ಗಣತಿ ವರದಿಯ ಸರದಿ: ಪ್ರತಾಪ್ ಸಿಂಹ
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ
ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಬಂತು ಇಕೋಫಿಕ್ಸ್ ತಂತ್ರಜ್ಞಾನ
ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ
ಚುನಾಯಿತ ಪ್ರತಿನಿಧಿಗಳು ಶಿವಕುಮಾರ್​ರನ್ನು ಭೇಟಿಯಾಗುವುದು ತಪ್ಪಲ್ಲ: ಸಂಸದ
ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್
ಕಳೆದ ವರ್ಷಕ್ಕಿಂತ ಈ ವರ್ಷ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ: ಪರಮೇಶ್ವರ್