AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇನ್ನೂ ಬಾರದ RCB ತಂಡದ ಪ್ರಮುಖ ಆಟಗಾರ..!

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​ 2025) ಮಾರ್ಚ್ 22 ರಿಂದ ಆರಂಭವಾಗಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಫೈನಲ್ ಪಂದ್ಯವು ಮೇ 25 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಜರುಗಲಿದೆ.

ಝಾಹಿರ್ ಯೂಸುಫ್
|

Updated on: Mar 15, 2025 | 1:04 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್​-18 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ಆರ್​ಸಿಬಿ ತಂಡದ 7 ವಿದೇಶಿ ಆಟಗಾರರು ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಪ್ರಮುಖ ವೇಗಿ ಇನ್ನೂ ಸಹ ತಂಡವನ್ನು ಸೇರಿಕೊಂಡಿಲ್ಲ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್​-18 ಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದೆ. ಈಗಾಗಲೇ ಆರ್​ಸಿಬಿ ತಂಡದ 7 ವಿದೇಶಿ ಆಟಗಾರರು ತಂಡವನ್ನು ಕೂಡಿಕೊಂಡಿದ್ದಾರೆ. ಇದಾಗ್ಯೂ ಪ್ರಮುಖ ವೇಗಿ ಇನ್ನೂ ಸಹ ತಂಡವನ್ನು ಸೇರಿಕೊಂಡಿಲ್ಲ.

1 / 5
ಹೌದು, ಆರ್​ಸಿಬಿ ಈ ಬಾರಿ ಒಟ್ಟು 8 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅವರಲ್ಲಿ ಇಂಗ್ಲೆಂಡ್ ತಂಡದ ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಇನ್ನು ಶ್ರೀಲಂಕಾದ ನುವಾನ್ ತುಷಾರ, ವೆಸ್ಟ್ ಇಂಡೀಸ್​ನ ರೊಮಾರಿಯೊ ಶೆಫರ್ಡ್, ಆಸ್ಟ್ರೇಲಿಯಾ ಟಿಮ್ ಡೇವಿಡ್ ಹಾಗೂ ಸೌತ್ ಆಫ್ರಿಕಾ ಲುಂಗಿ ಎನ್​ಗಿಡಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭ್ಯಾಸವನ್ನು ಶುರು ಮಾಡಿದ್ದಾರೆ.

ಹೌದು, ಆರ್​ಸಿಬಿ ಈ ಬಾರಿ ಒಟ್ಟು 8 ವಿದೇಶಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿದೆ. ಅವರಲ್ಲಿ ಇಂಗ್ಲೆಂಡ್ ತಂಡದ ಜೇಕಬ್ ಬೆಥೆಲ್, ಫಿಲ್ ಸಾಲ್ಟ್ ಹಾಗೂ ಲಿಯಾಮ್ ಲಿವಿಂಗ್​ಸ್ಟೋನ್ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಇನ್ನು ಶ್ರೀಲಂಕಾದ ನುವಾನ್ ತುಷಾರ, ವೆಸ್ಟ್ ಇಂಡೀಸ್​ನ ರೊಮಾರಿಯೊ ಶೆಫರ್ಡ್, ಆಸ್ಟ್ರೇಲಿಯಾ ಟಿಮ್ ಡೇವಿಡ್ ಹಾಗೂ ಸೌತ್ ಆಫ್ರಿಕಾ ಲುಂಗಿ ಎನ್​ಗಿಡಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭ್ಯಾಸವನ್ನು ಶುರು ಮಾಡಿದ್ದಾರೆ.

2 / 5
ಇದಾಗ್ಯೂ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಆರ್​ಸಿಬಿ ತಂಡದ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿಲ್ಲ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್​ವುಡ್ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾದರೂ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ.

ಇದಾಗ್ಯೂ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಆರ್​ಸಿಬಿ ತಂಡದ ಕ್ಯಾಂಪ್​ನಲ್ಲಿ ಕಾಣಿಸಿಕೊಂಡಿಲ್ಲ. ಕಣಕಾಲಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಹ್ಯಾಝಲ್​ವುಡ್ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲೂ ಕಣಕ್ಕಿಳಿದಿರಲಿಲ್ಲ. ಇದೀಗ ಐಪಿಎಲ್ ಆರಂಭಕ್ಕೆ ದಿನಗಣನೆ ಶುರುವಾದರೂ ಅವರು ಇನ್ನೂ ಸಹ ಆರ್​ಸಿಬಿ ತಂಡವನ್ನು ಕೂಡಿಕೊಂಡಿಲ್ಲ.

3 / 5
ಇದಕ್ಕೆ ಮುಖ್ಯ ಕಾರಣ ಅವರ ಫಿಟ್​ನೆಸ್ ಸಮಸ್ಯೆ. ಏಕೆಂದರೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಆಟಗಾರರಿಗೆ ಮಾತ್ರ ಐಪಿಎಲ್ ಆಡಲು ಅವಕಾಶ ನೀಡುತ್ತದೆ. ಅದರಂತೆ ಇದೀಗ ಜೋಶ್ ಹ್ಯಾಝಲ್​ವುಡ್ ಆಸ್ಟ್ರೇಲಿಯಾದಲ್ಲಿ ಫಿಟ್​ನೆಸ್ ಟೆಸ್ಟ್ ಪಾಸ್ ಆಗಬೇಕಿದ್ದು, ಇದಾದ ಬಳಿಕವಷ್ಟೇ ಅವರಿಗೆ ಐಪಿಎಲ್​​ ಆಡಲು ಅನುಮತಿ ಸಿಗಲಿದೆ. ಹೀಗಾಗಿ ಜೋಶ್ ಹ್ಯಾಝಲ್​ವುಡ್ ಆಗಮನ ಮತ್ತಷ್ಟು ವಿಳಂಬವಾದರೂ ಅಚ್ಚರಿಪಡಬೇಕಿಲ್ಲ.

ಇದಕ್ಕೆ ಮುಖ್ಯ ಕಾರಣ ಅವರ ಫಿಟ್​ನೆಸ್ ಸಮಸ್ಯೆ. ಏಕೆಂದರೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಂಪೂರ್ಣ ಫಿಟ್​ನೆಸ್ ಸಾಧಿಸಿದ ಆಟಗಾರರಿಗೆ ಮಾತ್ರ ಐಪಿಎಲ್ ಆಡಲು ಅವಕಾಶ ನೀಡುತ್ತದೆ. ಅದರಂತೆ ಇದೀಗ ಜೋಶ್ ಹ್ಯಾಝಲ್​ವುಡ್ ಆಸ್ಟ್ರೇಲಿಯಾದಲ್ಲಿ ಫಿಟ್​ನೆಸ್ ಟೆಸ್ಟ್ ಪಾಸ್ ಆಗಬೇಕಿದ್ದು, ಇದಾದ ಬಳಿಕವಷ್ಟೇ ಅವರಿಗೆ ಐಪಿಎಲ್​​ ಆಡಲು ಅನುಮತಿ ಸಿಗಲಿದೆ. ಹೀಗಾಗಿ ಜೋಶ್ ಹ್ಯಾಝಲ್​ವುಡ್ ಆಗಮನ ಮತ್ತಷ್ಟು ವಿಳಂಬವಾದರೂ ಅಚ್ಚರಿಪಡಬೇಕಿಲ್ಲ.

4 / 5
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

5 / 5
Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ