AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಲ್ಲವಾ?

IPL 2025 Virat Kohli: ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಇದೀಗ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ಕಿಂಗ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ.

ಝಾಹಿರ್ ಯೂಸುಫ್
|

Updated on:Feb 05, 2025 | 10:27 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರೆಂಬುದು ನಿರ್ಧಾರವಾಗಿಲ್ಲ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಸಿಬಿ ಈ ಬಾರಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರೆಂಬುದು ನಿರ್ಧಾರವಾಗಿಲ್ಲ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಸಿಬಿ ಈ ಬಾರಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

1 / 6
ಇತ್ತ ನಾಯಕತ್ವದ ರೇಸ್​ನಲ್ಲಿ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಇದಾಗ್ಯೂ ಅವರೇ ನಾಯಕ ಎಂಬುದನ್ನು ಇದುವರೆಗೆ ಆರ್​ಸಿಬಿ ಫ್ರಾಂಚೈಸಿ ಖಚಿತಪಡಿಸಿಲ್ಲ. ಇದೀಗ ಕ್ಯಾಪ್ಟನ್ ಆಯ್ಕೆ ವಿಷಯದಲ್ಲಿ ನಮಗೆ ಹಲವು ಆಯ್ಕೆಗಳಿವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಆರ್​ಸಿಬಿ ಸಿಒಒ ರಾಜೇಶ್ ಮೆನನ್.

ಇತ್ತ ನಾಯಕತ್ವದ ರೇಸ್​ನಲ್ಲಿ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಇದಾಗ್ಯೂ ಅವರೇ ನಾಯಕ ಎಂಬುದನ್ನು ಇದುವರೆಗೆ ಆರ್​ಸಿಬಿ ಫ್ರಾಂಚೈಸಿ ಖಚಿತಪಡಿಸಿಲ್ಲ. ಇದೀಗ ಕ್ಯಾಪ್ಟನ್ ಆಯ್ಕೆ ವಿಷಯದಲ್ಲಿ ನಮಗೆ ಹಲವು ಆಯ್ಕೆಗಳಿವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಆರ್​ಸಿಬಿ ಸಿಒಒ ರಾಜೇಶ್ ಮೆನನ್.

2 / 6
ಸ್ಪೋರ್ಟ್ಸ್ ತಕ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜೇಶ್ ಮೆನನ್, ಆರ್​ಸಿಬಿ ನಾಯಕತ್ವದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್​ಸಿಬಿ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಸ್ಪೋರ್ಟ್ಸ್ ತಕ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜೇಶ್ ಮೆನನ್, ಆರ್​ಸಿಬಿ ನಾಯಕತ್ವದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್​ಸಿಬಿ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

3 / 6
ನಮ್ಮ ತಂಡದಲ್ಲಿ ನಾಯಕತ್ವದ ಅನುಭವ ಹೊಂದಿರುವ ಹಲವು ಆಟಗಾರರಿದ್ದಾರೆ. ಅಲ್ಲದೆ ನಮ್ಮ ಮುಂದೆ 4-5 ಆಯ್ಕೆಗಳಿವೆ. ಈ ಆಯ್ಕೆಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಅದಕ್ಕೂ ಮುಂಚಿತವಾಗಿ ಆರ್​ಸಿಬಿ ತಂಡದ ಹೊಸ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ರಾಜೇಶ್ ಮೆನನ್ ತಿಳಿಸಿದ್ದಾರೆ.

ನಮ್ಮ ತಂಡದಲ್ಲಿ ನಾಯಕತ್ವದ ಅನುಭವ ಹೊಂದಿರುವ ಹಲವು ಆಟಗಾರರಿದ್ದಾರೆ. ಅಲ್ಲದೆ ನಮ್ಮ ಮುಂದೆ 4-5 ಆಯ್ಕೆಗಳಿವೆ. ಈ ಆಯ್ಕೆಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಅದಕ್ಕೂ ಮುಂಚಿತವಾಗಿ ಆರ್​ಸಿಬಿ ತಂಡದ ಹೊಸ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ರಾಜೇಶ್ ಮೆನನ್ ತಿಳಿಸಿದ್ದಾರೆ.

4 / 6
ಇತ್ತ ರಾಜೇಶ್ ಮೆನನ್ ಅವರ ಈ ಹೇಳಿಕೆಯ ಬೆನ್ನಲ್ಲೇ ಈ ಬಾರಿ ವಿರಾಟ್ ಕೊಹ್ಲಿಗೆ ಆರ್​ಸಿಬಿ ತಂಡದ ನಾಯಕತ್ವ ನೀಡಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೊಹ್ಲಿಗೆ ಕ್ಯಾಪ್ಟನ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೀಗ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ನಾಲ್ಕೈದು ಆಯ್ಕೆಗಳಿವೆ ಎನ್ನುವ ಮೂಲಕ ಆರ್​ಸಿಬಿ ಸಿಒಒ ಕುತೂಹಲ ಮೂಡಿಸಿದ್ದಾರೆ.

ಇತ್ತ ರಾಜೇಶ್ ಮೆನನ್ ಅವರ ಈ ಹೇಳಿಕೆಯ ಬೆನ್ನಲ್ಲೇ ಈ ಬಾರಿ ವಿರಾಟ್ ಕೊಹ್ಲಿಗೆ ಆರ್​ಸಿಬಿ ತಂಡದ ನಾಯಕತ್ವ ನೀಡಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೊಹ್ಲಿಗೆ ಕ್ಯಾಪ್ಟನ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೀಗ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ನಾಲ್ಕೈದು ಆಯ್ಕೆಗಳಿವೆ ಎನ್ನುವ ಮೂಲಕ ಆರ್​ಸಿಬಿ ಸಿಒಒ ಕುತೂಹಲ ಮೂಡಿಸಿದ್ದಾರೆ.

5 / 6
ಒಟ್ಟಿನಲ್ಲಿ ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ. ಈ ನಾಯಕ ವಿರಾಟ್ ಕೊಹ್ಲಿ ಆಗಲಿದ್ದಾರಾ? ಅಥವಾ ಭುವನೇಶ್ವರ್ ಕುಮಾರ್ ಅಥವಾ ರಜತ್ ಪಾಟಿದಾರ್, ಇಲ್ಲಾ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ. ಈ ನಾಯಕ ವಿರಾಟ್ ಕೊಹ್ಲಿ ಆಗಲಿದ್ದಾರಾ? ಅಥವಾ ಭುವನೇಶ್ವರ್ ಕುಮಾರ್ ಅಥವಾ ರಜತ್ ಪಾಟಿದಾರ್, ಇಲ್ಲಾ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 10:20 am, Wed, 5 February 25

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು