AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಲ್ಲವಾ?

IPL 2025 Virat Kohli: ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಇದೀಗ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ಕಿಂಗ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ.

ಝಾಹಿರ್ ಯೂಸುಫ್
|

Updated on:Feb 05, 2025 | 10:27 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರೆಂಬುದು ನಿರ್ಧಾರವಾಗಿಲ್ಲ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಸಿಬಿ ಈ ಬಾರಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರೆಂಬುದು ನಿರ್ಧಾರವಾಗಿಲ್ಲ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಸಿಬಿ ಈ ಬಾರಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

1 / 6
ಇತ್ತ ನಾಯಕತ್ವದ ರೇಸ್​ನಲ್ಲಿ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಇದಾಗ್ಯೂ ಅವರೇ ನಾಯಕ ಎಂಬುದನ್ನು ಇದುವರೆಗೆ ಆರ್​ಸಿಬಿ ಫ್ರಾಂಚೈಸಿ ಖಚಿತಪಡಿಸಿಲ್ಲ. ಇದೀಗ ಕ್ಯಾಪ್ಟನ್ ಆಯ್ಕೆ ವಿಷಯದಲ್ಲಿ ನಮಗೆ ಹಲವು ಆಯ್ಕೆಗಳಿವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಆರ್​ಸಿಬಿ ಸಿಒಒ ರಾಜೇಶ್ ಮೆನನ್.

ಇತ್ತ ನಾಯಕತ್ವದ ರೇಸ್​ನಲ್ಲಿ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಇದಾಗ್ಯೂ ಅವರೇ ನಾಯಕ ಎಂಬುದನ್ನು ಇದುವರೆಗೆ ಆರ್​ಸಿಬಿ ಫ್ರಾಂಚೈಸಿ ಖಚಿತಪಡಿಸಿಲ್ಲ. ಇದೀಗ ಕ್ಯಾಪ್ಟನ್ ಆಯ್ಕೆ ವಿಷಯದಲ್ಲಿ ನಮಗೆ ಹಲವು ಆಯ್ಕೆಗಳಿವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಆರ್​ಸಿಬಿ ಸಿಒಒ ರಾಜೇಶ್ ಮೆನನ್.

2 / 6
ಸ್ಪೋರ್ಟ್ಸ್ ತಕ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜೇಶ್ ಮೆನನ್, ಆರ್​ಸಿಬಿ ನಾಯಕತ್ವದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್​ಸಿಬಿ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಸ್ಪೋರ್ಟ್ಸ್ ತಕ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜೇಶ್ ಮೆನನ್, ಆರ್​ಸಿಬಿ ನಾಯಕತ್ವದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್​ಸಿಬಿ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

3 / 6
ನಮ್ಮ ತಂಡದಲ್ಲಿ ನಾಯಕತ್ವದ ಅನುಭವ ಹೊಂದಿರುವ ಹಲವು ಆಟಗಾರರಿದ್ದಾರೆ. ಅಲ್ಲದೆ ನಮ್ಮ ಮುಂದೆ 4-5 ಆಯ್ಕೆಗಳಿವೆ. ಈ ಆಯ್ಕೆಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಅದಕ್ಕೂ ಮುಂಚಿತವಾಗಿ ಆರ್​ಸಿಬಿ ತಂಡದ ಹೊಸ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ರಾಜೇಶ್ ಮೆನನ್ ತಿಳಿಸಿದ್ದಾರೆ.

ನಮ್ಮ ತಂಡದಲ್ಲಿ ನಾಯಕತ್ವದ ಅನುಭವ ಹೊಂದಿರುವ ಹಲವು ಆಟಗಾರರಿದ್ದಾರೆ. ಅಲ್ಲದೆ ನಮ್ಮ ಮುಂದೆ 4-5 ಆಯ್ಕೆಗಳಿವೆ. ಈ ಆಯ್ಕೆಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಅದಕ್ಕೂ ಮುಂಚಿತವಾಗಿ ಆರ್​ಸಿಬಿ ತಂಡದ ಹೊಸ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ರಾಜೇಶ್ ಮೆನನ್ ತಿಳಿಸಿದ್ದಾರೆ.

4 / 6
ಇತ್ತ ರಾಜೇಶ್ ಮೆನನ್ ಅವರ ಈ ಹೇಳಿಕೆಯ ಬೆನ್ನಲ್ಲೇ ಈ ಬಾರಿ ವಿರಾಟ್ ಕೊಹ್ಲಿಗೆ ಆರ್​ಸಿಬಿ ತಂಡದ ನಾಯಕತ್ವ ನೀಡಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೊಹ್ಲಿಗೆ ಕ್ಯಾಪ್ಟನ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೀಗ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ನಾಲ್ಕೈದು ಆಯ್ಕೆಗಳಿವೆ ಎನ್ನುವ ಮೂಲಕ ಆರ್​ಸಿಬಿ ಸಿಒಒ ಕುತೂಹಲ ಮೂಡಿಸಿದ್ದಾರೆ.

ಇತ್ತ ರಾಜೇಶ್ ಮೆನನ್ ಅವರ ಈ ಹೇಳಿಕೆಯ ಬೆನ್ನಲ್ಲೇ ಈ ಬಾರಿ ವಿರಾಟ್ ಕೊಹ್ಲಿಗೆ ಆರ್​ಸಿಬಿ ತಂಡದ ನಾಯಕತ್ವ ನೀಡಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೊಹ್ಲಿಗೆ ಕ್ಯಾಪ್ಟನ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೀಗ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ನಾಲ್ಕೈದು ಆಯ್ಕೆಗಳಿವೆ ಎನ್ನುವ ಮೂಲಕ ಆರ್​ಸಿಬಿ ಸಿಒಒ ಕುತೂಹಲ ಮೂಡಿಸಿದ್ದಾರೆ.

5 / 6
ಒಟ್ಟಿನಲ್ಲಿ ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ. ಈ ನಾಯಕ ವಿರಾಟ್ ಕೊಹ್ಲಿ ಆಗಲಿದ್ದಾರಾ? ಅಥವಾ ಭುವನೇಶ್ವರ್ ಕುಮಾರ್ ಅಥವಾ ರಜತ್ ಪಾಟಿದಾರ್, ಇಲ್ಲಾ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ. ಈ ನಾಯಕ ವಿರಾಟ್ ಕೊಹ್ಲಿ ಆಗಲಿದ್ದಾರಾ? ಅಥವಾ ಭುವನೇಶ್ವರ್ ಕುಮಾರ್ ಅಥವಾ ರಜತ್ ಪಾಟಿದಾರ್, ಇಲ್ಲಾ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 10:20 am, Wed, 5 February 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ