IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿ ನಾಯಕರಲ್ಲವಾ?

IPL 2025 Virat Kohli: ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು 143 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಈ ವೇಳೆ 66 ಪಂದ್ಯಗಳಲ್ಲಿ ಆರ್​ಸಿಬಿ ತಂಡ ಜಯ ಸಾಧಿಸಿದೆ. ಹಾಗೆಯೇ 2016 ರಲ್ಲಿ ಕಿಂಗ್ ಕೊಹ್ಲಿ ನಾಯಕತ್ವದಲ್ಲೇ ಆರ್​ಸಿಬಿ ಫೈನಲ್​ಗೆ ಪ್ರವೇಶಿಸಿತ್ತು. ಇದೀಗ ಆರ್​ಸಿಬಿ ತಂಡದ ನಾಯಕತ್ವದ ರೇಸ್​ನಲ್ಲಿ ಕಿಂಗ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ.

ಝಾಹಿರ್ ಯೂಸುಫ್
|

Updated on:Feb 05, 2025 | 10:27 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರೆಂಬುದು ನಿರ್ಧಾರವಾಗಿಲ್ಲ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಸಿಬಿ ಈ ಬಾರಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಇದಾಗ್ಯೂ ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುವವರು ಯಾರೆಂಬುದು ನಿರ್ಧಾರವಾಗಿಲ್ಲ. ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದ ಫಾಫ್ ಡುಪ್ಲೆಸಿಸ್ ಈ ಬಾರಿ ಕ್ಯಾಪಿಟಲ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಆರ್​ಸಿಬಿ ಈ ಬಾರಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಿದೆ.

1 / 6
ಇತ್ತ ನಾಯಕತ್ವದ ರೇಸ್​ನಲ್ಲಿ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಇದಾಗ್ಯೂ ಅವರೇ ನಾಯಕ ಎಂಬುದನ್ನು ಇದುವರೆಗೆ ಆರ್​ಸಿಬಿ ಫ್ರಾಂಚೈಸಿ ಖಚಿತಪಡಿಸಿಲ್ಲ. ಇದೀಗ ಕ್ಯಾಪ್ಟನ್ ಆಯ್ಕೆ ವಿಷಯದಲ್ಲಿ ನಮಗೆ ಹಲವು ಆಯ್ಕೆಗಳಿವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಆರ್​ಸಿಬಿ ಸಿಒಒ ರಾಜೇಶ್ ಮೆನನ್.

ಇತ್ತ ನಾಯಕತ್ವದ ರೇಸ್​ನಲ್ಲಿ ವಿರಾಟ್ ಕೊಹ್ಲಿ ಹೆಸರು ಮುಂಚೂಣಿಯಲ್ಲಿದೆ. ಇದಾಗ್ಯೂ ಅವರೇ ನಾಯಕ ಎಂಬುದನ್ನು ಇದುವರೆಗೆ ಆರ್​ಸಿಬಿ ಫ್ರಾಂಚೈಸಿ ಖಚಿತಪಡಿಸಿಲ್ಲ. ಇದೀಗ ಕ್ಯಾಪ್ಟನ್ ಆಯ್ಕೆ ವಿಷಯದಲ್ಲಿ ನಮಗೆ ಹಲವು ಆಯ್ಕೆಗಳಿವೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ಆರ್​ಸಿಬಿ ಸಿಒಒ ರಾಜೇಶ್ ಮೆನನ್.

2 / 6
ಸ್ಪೋರ್ಟ್ಸ್ ತಕ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜೇಶ್ ಮೆನನ್, ಆರ್​ಸಿಬಿ ನಾಯಕತ್ವದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್​ಸಿಬಿ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಸ್ಪೋರ್ಟ್ಸ್ ತಕ್ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಾಜೇಶ್ ಮೆನನ್, ಆರ್​ಸಿಬಿ ನಾಯಕತ್ವದ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಇಲ್ಲಿ ವಿರಾಟ್ ಕೊಹ್ಲಿ ಅವರನ್ನು ಆರ್​ಸಿಬಿ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧರಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

3 / 6
ನಮ್ಮ ತಂಡದಲ್ಲಿ ನಾಯಕತ್ವದ ಅನುಭವ ಹೊಂದಿರುವ ಹಲವು ಆಟಗಾರರಿದ್ದಾರೆ. ಅಲ್ಲದೆ ನಮ್ಮ ಮುಂದೆ 4-5 ಆಯ್ಕೆಗಳಿವೆ. ಈ ಆಯ್ಕೆಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಅದಕ್ಕೂ ಮುಂಚಿತವಾಗಿ ಆರ್​ಸಿಬಿ ತಂಡದ ಹೊಸ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ರಾಜೇಶ್ ಮೆನನ್ ತಿಳಿಸಿದ್ದಾರೆ.

ನಮ್ಮ ತಂಡದಲ್ಲಿ ನಾಯಕತ್ವದ ಅನುಭವ ಹೊಂದಿರುವ ಹಲವು ಆಟಗಾರರಿದ್ದಾರೆ. ಅಲ್ಲದೆ ನಮ್ಮ ಮುಂದೆ 4-5 ಆಯ್ಕೆಗಳಿವೆ. ಈ ಆಯ್ಕೆಗಳ ಬಗ್ಗೆ ಚರ್ಚಿಸಿದ ಬಳಿಕವಷ್ಟೇ ಅಂತಿಮ ತೀರ್ಮಾನಕ್ಕೆ ಬರುತ್ತೇವೆ. ಅದಕ್ಕೂ ಮುಂಚಿತವಾಗಿ ಆರ್​ಸಿಬಿ ತಂಡದ ಹೊಸ ನಾಯಕ ಯಾರು ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ರಾಜೇಶ್ ಮೆನನ್ ತಿಳಿಸಿದ್ದಾರೆ.

4 / 6
ಇತ್ತ ರಾಜೇಶ್ ಮೆನನ್ ಅವರ ಈ ಹೇಳಿಕೆಯ ಬೆನ್ನಲ್ಲೇ ಈ ಬಾರಿ ವಿರಾಟ್ ಕೊಹ್ಲಿಗೆ ಆರ್​ಸಿಬಿ ತಂಡದ ನಾಯಕತ್ವ ನೀಡಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೊಹ್ಲಿಗೆ ಕ್ಯಾಪ್ಟನ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೀಗ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ನಾಲ್ಕೈದು ಆಯ್ಕೆಗಳಿವೆ ಎನ್ನುವ ಮೂಲಕ ಆರ್​ಸಿಬಿ ಸಿಒಒ ಕುತೂಹಲ ಮೂಡಿಸಿದ್ದಾರೆ.

ಇತ್ತ ರಾಜೇಶ್ ಮೆನನ್ ಅವರ ಈ ಹೇಳಿಕೆಯ ಬೆನ್ನಲ್ಲೇ ಈ ಬಾರಿ ವಿರಾಟ್ ಕೊಹ್ಲಿಗೆ ಆರ್​ಸಿಬಿ ತಂಡದ ನಾಯಕತ್ವ ನೀಡಲ್ವಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಈ ಹಿಂದೆ ಕೊಹ್ಲಿಗೆ ಕ್ಯಾಪ್ಟನ್ ನೀಡುವುದು ಬಹುತೇಕ ಖಚಿತ ಎನ್ನಲಾಗುತ್ತಿತ್ತು. ಆದರೀಗ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ನಾಲ್ಕೈದು ಆಯ್ಕೆಗಳಿವೆ ಎನ್ನುವ ಮೂಲಕ ಆರ್​ಸಿಬಿ ಸಿಒಒ ಕುತೂಹಲ ಮೂಡಿಸಿದ್ದಾರೆ.

5 / 6
ಒಟ್ಟಿನಲ್ಲಿ ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ. ಈ ನಾಯಕ ವಿರಾಟ್ ಕೊಹ್ಲಿ ಆಗಲಿದ್ದಾರಾ? ಅಥವಾ ಭುವನೇಶ್ವರ್ ಕುಮಾರ್ ಅಥವಾ ರಜತ್ ಪಾಟಿದಾರ್, ಇಲ್ಲಾ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಐಪಿಎಲ್ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ. ಈ ನಾಯಕ ವಿರಾಟ್ ಕೊಹ್ಲಿ ಆಗಲಿದ್ದಾರಾ? ಅಥವಾ ಭುವನೇಶ್ವರ್ ಕುಮಾರ್ ಅಥವಾ ರಜತ್ ಪಾಟಿದಾರ್, ಇಲ್ಲಾ ಲಿಯಾಮ್ ಲಿವಿಂಗ್​ಸ್ಟೋನ್​ಗೆ ಕ್ಯಾಪ್ಟನ್ ಪಟ್ಟ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6

Published On - 10:20 am, Wed, 5 February 25

Follow us
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ನೀರಿನ ಕೊಡ ಉರಡತಲೇ, ತುಪ್ಪದ ಕೊಡ ಉಕ್ಕತಲೇ ಪರಾಕ್:ಮೈಲಾರಲಿಂಗೇಶ್ವರ ಕಾರ್ಣಿಕ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ಗುಂಡಿನ ದಾಳಿ ನಡೆದಾಗ ಚಿಕಿತ್ಸೆಗೆ ಬಾಗಪ್ಪ ₹ 1 ಕೋಟಿ ಖರ್ಚು ಮಾಡಿದ್ದನಂತೆ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ವಿಮಾನ ನಿಲ್ದಾಣದಲ್ಲಿ ಮೋದಿಯನ್ನು ತಬ್ಬಿ ಬೀಳ್ಕೊಟ್ಟ ಫ್ರಾನ್ಸ್​ ಅಧ್ಯಕ್ಷ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪ ಹರಿಜನ್ ಅಂತ್ಯಕ್ರಿಯೆಯಲ್ಲಿ ನೂರಾರು ಜನ ಭಾಗಿ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಬಾಗಪ್ಪನನ್ನು ಪ್ರೀತಿಸಿ ವರಿಸಿದ ಮಹಿಳೆ ಸರ್ಕಾರೀ ವಕೀಲೆಯಾಗಿದ್ದರು: ಮಹಾಂತೇಶ
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ತನಿಖೆ ಪದದ ವ್ಯಾಖ್ಯಾನ ಬದಲಾದಂತಿದೆ!
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಉಡುಪಿಗೆ ಬಂದು ದೈವಕ್ಕೆ ಕೈ ಮುಗಿದ ತಮಿಳು ನಟ ವಿಶಾಲ್
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಮಾರ್ಸಿಲ್ಲೆಯಲ್ಲಿ ಭಾರತೀಯ ಕಾನ್ಸುಲೇಟ್ ಉದ್ಘಾಟನೆ; ಮೋದಿ, ಮೋದಿ ಘೋಷಣೆ
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಜನರಿಂದ ಬಡ್ಡಿ ಪೀಕಿ ಪೀಕಿಯೇ ಯಲ್ಲಪ್ಪ ಮಿಸ್ಕಿನ್,  ಬಡ್ಡಿ ಯಲ್ಲಪ್ಪನಾದ!
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?
ಪತ್ನಿಗೆ ಸಿಲ್ಕ್​ ಸೀರೆ ಖರೀದಿಸಿದ ಡಿಕೆ ಶಿವಕುಮಾರ್: ಬೆಲೆ ಎಷ್ಟು ಗೊತ್ತಾ?