AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬರೋಬ್ಬರಿ 115 ರನ್ಸ್: RCB ಆರ್ಭಟಕ್ಕೆ ಮಗುಚಿ ಬಿದ್ದ JCB

IPL 2025 MI vs RCB: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 20ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 221 ರನ್​ ಕಲೆಹಾಕಿದರೆ, ಮುಂಬೈ ಇಂಡಿಯನ್ಸ್ ತಂಡವು 209 ರನ್​ಗಳಿಸಿ 12 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಝಾಹಿರ್ ಯೂಸುಫ್
|

Updated on: Apr 08, 2025 | 10:30 AM

Share
10 ಓವರ್​ಗಳಲ್ಲಿ ಬರೋಬ್ಬರಿ 115 ರನ್​ಗಳು... ಇದು ಯಾವುದೇ ಹೊಸ ಬೌಲರ್​ ನೀಡಿದ ರನ್​ಗಳಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್ ತಂಡದ ತ್ರಿವಳಿ ಅಸ್ತ್ರವೆಂದೇ ಗುರುತಿಸಿಕೊಂಡಿರುವ ಜಸ್​ಪ್ರೀತ್ ಬುಮ್ರಾ, ದೀಪಕ್ ಚಹರ್ ಹಾಗೂ ಟ್ರೆಂಟ್ ಬೌಲ್ಟ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳು ಕಲೆಹಾಕಿದ ರನ್​ಗಳು.

10 ಓವರ್​ಗಳಲ್ಲಿ ಬರೋಬ್ಬರಿ 115 ರನ್​ಗಳು... ಇದು ಯಾವುದೇ ಹೊಸ ಬೌಲರ್​ ನೀಡಿದ ರನ್​ಗಳಲ್ಲ. ಬದಲಾಗಿ ಮುಂಬೈ ಇಂಡಿಯನ್ಸ್ ತಂಡದ ತ್ರಿವಳಿ ಅಸ್ತ್ರವೆಂದೇ ಗುರುತಿಸಿಕೊಂಡಿರುವ ಜಸ್​ಪ್ರೀತ್ ಬುಮ್ರಾ, ದೀಪಕ್ ಚಹರ್ ಹಾಗೂ ಟ್ರೆಂಟ್ ಬೌಲ್ಟ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳು ಕಲೆಹಾಕಿದ ರನ್​ಗಳು.

1 / 5
ಐಪಿಎಲ್ ಮೆಗಾ ಹರಾಜಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸಖತ್ ಸುದ್ದಿಯಾಗಿದ್ದು JCB ಟ್ಯಾಗ್​ ಲೈನ್​ನೊಂದಿಗೆ. ಇಲ್ಲಿ J ಅಂದರೆ ಜಸ್​ಪ್ರೀತ್, C ಅಂದರೆ ಚಹರ್ ಹಾಗೂ B ಅಂದರೆ ಬೌಲ್ಟ್​. ಈ ಮೂವರು ಪ್ರಮುಖ ವೇಗಿಗಳನ್ನು ಜೊತೆಗೂಡಿಸುವ ಮೂಲಕ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ JCB ಅಸ್ತ್ರ ಪ್ರಯೋಗಿಸಲಿದೆ ಎನ್ನಲಾಗಿತ್ತು. ಆದರೀಗ ಆರ್​ಸಿಬಿ ಬ್ಯಾಟರ್​ಗಳ ಆರ್ಭಟಕ್ಕೆ JCB ಮಗುಚಿ ಬಿದ್ದಿದೆ.

ಐಪಿಎಲ್ ಮೆಗಾ ಹರಾಜಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಸಖತ್ ಸುದ್ದಿಯಾಗಿದ್ದು JCB ಟ್ಯಾಗ್​ ಲೈನ್​ನೊಂದಿಗೆ. ಇಲ್ಲಿ J ಅಂದರೆ ಜಸ್​ಪ್ರೀತ್, C ಅಂದರೆ ಚಹರ್ ಹಾಗೂ B ಅಂದರೆ ಬೌಲ್ಟ್​. ಈ ಮೂವರು ಪ್ರಮುಖ ವೇಗಿಗಳನ್ನು ಜೊತೆಗೂಡಿಸುವ ಮೂಲಕ ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ JCB ಅಸ್ತ್ರ ಪ್ರಯೋಗಿಸಲಿದೆ ಎನ್ನಲಾಗಿತ್ತು. ಆದರೀಗ ಆರ್​ಸಿಬಿ ಬ್ಯಾಟರ್​ಗಳ ಆರ್ಭಟಕ್ಕೆ JCB ಮಗುಚಿ ಬಿದ್ದಿದೆ.

2 / 5
ಮುಂಬೈನ ವಾಂಖಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಮೊದಲ ಓವರ್ ಎಸೆದಿದ್ದು ಟ್ರೆಂಟ್ ಬೌಲ್ಟ್. ಮೊದಲ ಓವರ್​ನಲ್ಲಿ ಸಾಲ್ಟ್ ವಿಕೆಟ್ ಪಡೆದ ಬೌಲ್ಟ್ ಅನ್ನು ಆ ಬಳಿಕ ಆರ್​ಸಿಬಿ ಬ್ಯಾಟರ್​ಗಳು ಅಟ್ಟಾಡಿಸಿಕೊಂಡು ಹೊಡೆದಿದ್ದರು. ಪರಿಣಾಮ 4 ಓವರ್​ಗಳಲ್ಲಿ ಟ್ರೆಂಟ್ ಬೌಲ್ಟ್ ನೀಡಿದ್ದು ಬರೋಬ್ಬರಿ 57 ರನ್​ಗಳು.

ಮುಂಬೈನ ವಾಂಖಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಪರ ಮೊದಲ ಓವರ್ ಎಸೆದಿದ್ದು ಟ್ರೆಂಟ್ ಬೌಲ್ಟ್. ಮೊದಲ ಓವರ್​ನಲ್ಲಿ ಸಾಲ್ಟ್ ವಿಕೆಟ್ ಪಡೆದ ಬೌಲ್ಟ್ ಅನ್ನು ಆ ಬಳಿಕ ಆರ್​ಸಿಬಿ ಬ್ಯಾಟರ್​ಗಳು ಅಟ್ಟಾಡಿಸಿಕೊಂಡು ಹೊಡೆದಿದ್ದರು. ಪರಿಣಾಮ 4 ಓವರ್​ಗಳಲ್ಲಿ ಟ್ರೆಂಟ್ ಬೌಲ್ಟ್ ನೀಡಿದ್ದು ಬರೋಬ್ಬರಿ 57 ರನ್​ಗಳು.

3 / 5
ಮುಂಬೈ ಇಂಡಿಯನ್ಸ್ ತಂಡದ ಮತ್ತೋರ್ವ ವೇಗಾಸ್ತ್ರವಾಗಿ ಗುರುತಿಸಿಕೊಂಡಿರುವ ದೀಪಕ್ ಚಹರ್ ಅವರ ಓವರ್​ಗಳಲ್ಲೂ ಆರ್​ಸಿಬಿ ಬ್ಯಾಟರ್​ಗಳು ಅಬ್ಬರಿಸಿದರು. ಪರಿಣಾಮ 2 ಓವರ್​ಗಳಲ್ಲಿ ಚಹರ್ ನೀಡಿದ್ದು ಬರೋಬ್ಬರಿ 29 ರನ್​ಗಳು. ಆ ಬಳಿಕ ಅವರಿಗೆ ಹಾರ್ದಿಕ್ ಪಾಂಡ್ಯ ಓವರ್ ನೀಡಲಿಲ್ಲ ಎಂಬುದು ವಿಶೇಷ.

ಮುಂಬೈ ಇಂಡಿಯನ್ಸ್ ತಂಡದ ಮತ್ತೋರ್ವ ವೇಗಾಸ್ತ್ರವಾಗಿ ಗುರುತಿಸಿಕೊಂಡಿರುವ ದೀಪಕ್ ಚಹರ್ ಅವರ ಓವರ್​ಗಳಲ್ಲೂ ಆರ್​ಸಿಬಿ ಬ್ಯಾಟರ್​ಗಳು ಅಬ್ಬರಿಸಿದರು. ಪರಿಣಾಮ 2 ಓವರ್​ಗಳಲ್ಲಿ ಚಹರ್ ನೀಡಿದ್ದು ಬರೋಬ್ಬರಿ 29 ರನ್​ಗಳು. ಆ ಬಳಿಕ ಅವರಿಗೆ ಹಾರ್ದಿಕ್ ಪಾಂಡ್ಯ ಓವರ್ ನೀಡಲಿಲ್ಲ ಎಂಬುದು ವಿಶೇಷ.

4 / 5
ಇನ್ನು ಮುಂಬೈ ಇಂಡಿಯನ್ಸ್ ಪರ ತುಸು ಉತ್ತಮ ಪ್ರದರ್ಶನ ನೀಡಿದ್ದು ಜಸ್​ಪ್ರೀತ್ ಬುಮ್ರಾ. 4 ಓವರ್​ಗಳನ್ನು ಎಸೆದ ಬುಮ್ರಾ ಒಟ್ಟು 29 ರನ್​ ನೀಡಿದ್ದರು. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಮೂಲಕ ಆರ್​ಸಿಬಿ ಬ್ಯಾಟರ್​ಗಳು JCB ವೇಗಾಸ್ತ್ರದ ವಿರುದ್ಧ ಬರೋಬ್ಬರಿ 115 ರನ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಅದು ಸಹ ಕೇವಲ 10 ಓವರ್​ಗಳಲ್ಲಿ ಎಂಬುದು ವಿಶೇಷ.

ಇನ್ನು ಮುಂಬೈ ಇಂಡಿಯನ್ಸ್ ಪರ ತುಸು ಉತ್ತಮ ಪ್ರದರ್ಶನ ನೀಡಿದ್ದು ಜಸ್​ಪ್ರೀತ್ ಬುಮ್ರಾ. 4 ಓವರ್​ಗಳನ್ನು ಎಸೆದ ಬುಮ್ರಾ ಒಟ್ಟು 29 ರನ್​ ನೀಡಿದ್ದರು. ಇದಾಗ್ಯೂ ಒಂದೇ ಒಂದು ವಿಕೆಟ್ ಪಡೆಯಲು ಸಾಧ್ಯವಾಗಲಿಲ್ಲ ಎಂಬುದು ಇಲ್ಲಿ ಉಲ್ಲೇಖಾರ್ಹ. ಈ ಮೂಲಕ ಆರ್​ಸಿಬಿ ಬ್ಯಾಟರ್​ಗಳು JCB ವೇಗಾಸ್ತ್ರದ ವಿರುದ್ಧ ಬರೋಬ್ಬರಿ 115 ರನ್​ಗಳನ್ನು ಬಾರಿಸಿ ಅಬ್ಬರಿಸಿದ್ದಾರೆ. ಅದು ಸಹ ಕೇವಲ 10 ಓವರ್​ಗಳಲ್ಲಿ ಎಂಬುದು ವಿಶೇಷ.

5 / 5
Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ