AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಜೋಶ್ ಹೇಝಲ್​ವುಡ್ ಬರದಿದ್ರೆ RCBಗೆ ಸೋಲು ಕಟ್ಟಿಟ್ಟ ಬುತ್ತಿ

IPL 2025 Josh Hazelwood: ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್​ 2025) ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಬೌಲರ್​ಗಳಲ್ಲಿ ಜೋಶ್ ಹೇಝಲ್​ವುಡ್ ಕೂಡ ಒಬ್ಬರು. ಅದರಲ್ಲೂ ಸಿಎಸ್​ಕೆ, ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಗಳಲ್ಲಿ ತನ್ನ ಮಾರಕ ಬೌಲಿಂಗ್​ನಿಂದ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಆದರೀಗ ಜೋಶ್ ಹೇಝಲ್​ವುಡ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ.

ಝಾಹಿರ್ ಯೂಸುಫ್
|

Updated on: May 12, 2025 | 11:04 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಅಲಭ್ಯರಾಗುವ ಸಾಧ್ಯತೆಯಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಹೇಝಲ್​ವುಡ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಮುಂಬರುವ ಪಂದ್ಯಗಳಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಉಳಿದ ಪಂದ್ಯಗಳಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಅಲಭ್ಯರಾಗುವ ಸಾಧ್ಯತೆಯಿದೆ. ಭುಜದ ನೋವಿನಿಂದ ಬಳಲುತ್ತಿದ್ದ ಹೇಝಲ್​ವುಡ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಮುಂಬರುವ ಪಂದ್ಯಗಳಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿದೆ.

1 / 5
ಏಕೆಂದರೆ ಭಾರತ ಮತ್ತು ಪಾಕ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ತವರಿಗೆ ಮರಳಿದ ವಿದೇಶಿ ಆಟಗಾರರಲ್ಲಿ ಜೋಶ್ ಹೇಝಲ್​ವುಡ್ ಕೂಡ ಒಬ್ಬರು. ಈಗಾಗಲೇ ಆಸ್ಟ್ರೇಲಿಯಾ ತಲುಪಿರುವ ಹೇಝಲ್​ವುಡ್ ಭುಜದ ನೋವಿನ ಕಾರಣ ವಾಪಾಸಾಗುವುದು ಡೌಟ್. ಒಂದು ವೇಳೆ ಆಸೀಸ್ ವೇಗಿ ಹಿಂತಿರುಗದಿದ್ದರೆ ಆರ್​ಸಿಬಿ ತಂಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.

ಏಕೆಂದರೆ ಭಾರತ ಮತ್ತು ಪಾಕ್ ನಡುವಣ ಯುದ್ಧದ ಭೀತಿ ಹಿನ್ನಲೆಯಲ್ಲಿ ತವರಿಗೆ ಮರಳಿದ ವಿದೇಶಿ ಆಟಗಾರರಲ್ಲಿ ಜೋಶ್ ಹೇಝಲ್​ವುಡ್ ಕೂಡ ಒಬ್ಬರು. ಈಗಾಗಲೇ ಆಸ್ಟ್ರೇಲಿಯಾ ತಲುಪಿರುವ ಹೇಝಲ್​ವುಡ್ ಭುಜದ ನೋವಿನ ಕಾರಣ ವಾಪಾಸಾಗುವುದು ಡೌಟ್. ಒಂದು ವೇಳೆ ಆಸೀಸ್ ವೇಗಿ ಹಿಂತಿರುಗದಿದ್ದರೆ ಆರ್​ಸಿಬಿ ತಂಡಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ.

2 / 5
ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹೇಝಲ್​ವುಡ್ 8.44 ರ ಸರಾಸರಿಯಲ್ಲಿ ಒಟ್ಟು 311 ರನ್ ನೀಡುವ ಮೂಲಕ 18 ವಿಕೆಟ್​ಗಳನ್ನು ಕಬಳಿಸಿದ್ದಾರೆ. ವಿಶೇಷ ಎಂದರೆ ಜೋಶ್ ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ವೇಗಿ 10 ವಿಕೆಟ್​ಗಳನ್ನು ಸಹ ಕಬಳಿಸಿಲ್ಲ.

ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿದ ಬೌಲರ್ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹೇಝಲ್​ವುಡ್ 8.44 ರ ಸರಾಸರಿಯಲ್ಲಿ ಒಟ್ಟು 311 ರನ್ ನೀಡುವ ಮೂಲಕ 18 ವಿಕೆಟ್​ಗಳನ್ನು ಕಬಳಿಸಿದ್ದಾರೆ. ವಿಶೇಷ ಎಂದರೆ ಜೋಶ್ ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ವೇಗಿ 10 ವಿಕೆಟ್​ಗಳನ್ನು ಸಹ ಕಬಳಿಸಿಲ್ಲ.

3 / 5
ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ ಕೂಡ ಜೋಶ್ ಹೇಝಲ್​ವುಡ್. 36.5 ಓವರ್​ಗಳಲ್ಲಿ  ಒಟ್ಟು 103 ಡಾಟ್ ಬಾಲ್​ಗಳನ್ನು ಎಸೆದಿದ್ದಾರೆ. ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ಬೌಲರ್ ಈ ಬಾರಿ 100 ಡಾಟ್ ಬಾಲ್​ ಎಸೆದಿಲ್ಲ.

ಇನ್ನು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್ ಎಸೆದ ಬೌಲರ್ ಕೂಡ ಜೋಶ್ ಹೇಝಲ್​ವುಡ್. 36.5 ಓವರ್​ಗಳಲ್ಲಿ  ಒಟ್ಟು 103 ಡಾಟ್ ಬಾಲ್​ಗಳನ್ನು ಎಸೆದಿದ್ದಾರೆ. ಹೇಝಲ್​ವುಡ್ ಅವರನ್ನು ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ಬೌಲರ್ ಈ ಬಾರಿ 100 ಡಾಟ್ ಬಾಲ್​ ಎಸೆದಿಲ್ಲ.

4 / 5
ಅಂದರೆ ಆರ್​ಸಿಬಿ ತಂಡದ ಬೌಲಿಂಗ್ ಶಕ್ತಿ ಜೋಶ್ ಹೇಝಲ್​ವುಡ್. ಇದೀಗ ಆರ್​​ಸಿಬಿ ತಂಡವು ನಿರ್ಣಾಯಕ ಹಂತಕ್ಕೆ ತಲುಪಿದೆ. ಮುಂದಿನ ಮೂರು ಮ್ಯಾಚ್​ಗಳ ಮೂಲಕ ರಾಯಲ್ ಪಡೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಇದಾದ ಬಳಿಕ ಪ್ಲೇಆಫ್ ಆಡಬೇಕಿದೆ. ಇದೀಗ ನಿರ್ಣಾಯಕ ಪಂದ್ಯಗಳ ವೇಳೆ ಜೋಶ್ ಹೇಝಲ್​ವುಡ್ ಕೈಕೊಟ್ಟರೆ ಆರ್​ಸಿಬಿ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಡೌಟೇ ಇಲ್ಲ.

ಅಂದರೆ ಆರ್​ಸಿಬಿ ತಂಡದ ಬೌಲಿಂಗ್ ಶಕ್ತಿ ಜೋಶ್ ಹೇಝಲ್​ವುಡ್. ಇದೀಗ ಆರ್​​ಸಿಬಿ ತಂಡವು ನಿರ್ಣಾಯಕ ಹಂತಕ್ಕೆ ತಲುಪಿದೆ. ಮುಂದಿನ ಮೂರು ಮ್ಯಾಚ್​ಗಳ ಮೂಲಕ ರಾಯಲ್ ಪಡೆಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವಿದೆ. ಇದಾದ ಬಳಿಕ ಪ್ಲೇಆಫ್ ಆಡಬೇಕಿದೆ. ಇದೀಗ ನಿರ್ಣಾಯಕ ಪಂದ್ಯಗಳ ವೇಳೆ ಜೋಶ್ ಹೇಝಲ್​ವುಡ್ ಕೈಕೊಟ್ಟರೆ ಆರ್​ಸಿಬಿ ತಂಡಕ್ಕೆ ಹಿನ್ನಡೆಯಾಗುವುದರಲ್ಲಿ ಡೌಟೇ ಇಲ್ಲ.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್