AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಜೋಶ್ ಹೇಝಲ್​ವುಡ್ ಎಂಟ್ರಿಗೆ ಡೇಟ್ ಫಿಕ್ಸ್

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

ಝಾಹಿರ್ ಯೂಸುಫ್
|

Updated on: May 21, 2025 | 11:04 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಐಪಿಎಲ್​ನ ಉಳಿದ ಪಂದ್ಯಗಳಿಗಾಗಿ ಭಾರತಕ್ಕೆ ಮರಳುವುದು ಖಚಿತವಾಗಿದೆ. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆಯಲ್ಲಿ ಐಪಿಎಲ್​ ಸ್ಥಗಿತಗೊಂಡಿದ್ದರಿಂದ ಹೇಝಲ್​ವುಡ್ ತವರಿಗೆ ಮರಳಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಐಪಿಎಲ್​ನ ಉಳಿದ ಪಂದ್ಯಗಳಿಗಾಗಿ ಭಾರತಕ್ಕೆ ಮರಳುವುದು ಖಚಿತವಾಗಿದೆ. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆಯಲ್ಲಿ ಐಪಿಎಲ್​ ಸ್ಥಗಿತಗೊಂಡಿದ್ದರಿಂದ ಹೇಝಲ್​ವುಡ್ ತವರಿಗೆ ಮರಳಿದ್ದರು.

1 / 6
ಇತ್ತ ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್​ವುಡ್ ಸಿಎಸ್​ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಇತ್ತ ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್​ವುಡ್ ಸಿಎಸ್​ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

2 / 6
ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್​ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಆರ್​ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್​ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಆರ್​ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಅಂದರೆ ಮೆ 23 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್​ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್​​​ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ  ಕಣಕ್ಕಿಳಿಯಬಹುದು. 

ಅಂದರೆ ಮೆ 23 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್​ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್​​​ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ  ಕಣಕ್ಕಿಳಿಯಬಹುದು. 

4 / 6
ಇತ್ತ ಜೋಶ್ ಹೇಝಲ್​ವುಡ್  ರಿಟರ್ನ್ ಸುದ್ದಿಯು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ.

ಇತ್ತ ಜೋಶ್ ಹೇಝಲ್​ವುಡ್  ರಿಟರ್ನ್ ಸುದ್ದಿಯು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ.

5 / 6
ಹಾಗೆಯೇ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್​ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್​ ಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

ಹಾಗೆಯೇ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್​ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್​ ಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

6 / 6
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್