AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಜೋಶ್ ಹೇಝಲ್​ವುಡ್ ಎಂಟ್ರಿಗೆ ಡೇಟ್ ಫಿಕ್ಸ್

IPL 2025 RCB: ಈ ಬಾರಿಯ ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್​ಗೆ ಪ್ರವೇಶಿಸಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು.

ಝಾಹಿರ್ ಯೂಸುಫ್
|

Updated on: May 21, 2025 | 11:04 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಐಪಿಎಲ್​ನ ಉಳಿದ ಪಂದ್ಯಗಳಿಗಾಗಿ ಭಾರತಕ್ಕೆ ಮರಳುವುದು ಖಚಿತವಾಗಿದೆ. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆಯಲ್ಲಿ ಐಪಿಎಲ್​ ಸ್ಥಗಿತಗೊಂಡಿದ್ದರಿಂದ ಹೇಝಲ್​ವುಡ್ ತವರಿಗೆ ಮರಳಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ವೇಗಿ ಜೋಶ್ ಹೇಝಲ್​ವುಡ್ (Josh Hazelwood) ಐಪಿಎಲ್​ನ ಉಳಿದ ಪಂದ್ಯಗಳಿಗಾಗಿ ಭಾರತಕ್ಕೆ ಮರಳುವುದು ಖಚಿತವಾಗಿದೆ. ಭಾರತ-ಪಾಕ್ ಯುದ್ಧ ಭೀತಿ ಹಿನ್ನಲೆಯಲ್ಲಿ ಐಪಿಎಲ್​ ಸ್ಥಗಿತಗೊಂಡಿದ್ದರಿಂದ ಹೇಝಲ್​ವುಡ್ ತವರಿಗೆ ಮರಳಿದ್ದರು.

1 / 6
ಇತ್ತ ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್​ವುಡ್ ಸಿಎಸ್​ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಇತ್ತ ಐಪಿಎಲ್ ಮತ್ತೆ ಶುರುವಾದರೂ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಭುಜದ ನೋವಿನ ಸಮಸ್ಯೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ವೇಳೆ ಭುಜದ ನೋವಿಗೆ ತುತ್ತಾಗಿದ್ದ ಹೇಝಲ್​ವುಡ್ ಸಿಎಸ್​ಕೆ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

2 / 6
ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್​ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಆರ್​ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇದಾದ ಬಳಿಕ ಆಸ್ಟ್ರೇಲಿಯಾಗೆ ಮರಳಿದ್ದ ಜೋಶ್ ಹೇಝಲ್​ವುಡ್ ಅಲ್ಲೇ ಚಿಕಿತ್ಸೆ ಮುಂದುವರೆಸಿದ್ದರು. ಇದೀಗ ಸಂಪೂರ್ಣ ಫಿಟ್​ನೆಸ್ ಸಾಧಿಸಿರುವ ಆರ್​ಸಿಬಿ ವೇಗಿ ಅಭ್ಯಾಸವನ್ನು ಆರಂಭಿಸಿದ್ದಾರೆ. ಅಲ್ಲದೆ ಮುಂದಿನ ಭಾನುವಾರ, ಅಂದರೆ ಮೇ 25 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

3 / 6
ಅಂದರೆ ಮೆ 23 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್​ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್​​​ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ  ಕಣಕ್ಕಿಳಿಯಬಹುದು. 

ಅಂದರೆ ಮೆ 23 ರಂದು ನಡೆಯಲಿರುವ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಪಂದ್ಯಕ್ಕೂ ಜೋಶ್ ಹೇಝಲ್​ವುಡ್ ಅಲಭ್ಯರಾಗಲಿದ್ದಾರೆ. ಇನ್ನು ಮೇ 25 ರಂದು ಆರ್​​​ಸಿಬಿ ತಂಡವನ್ನು ಸೇರಿಕೊಂಡರೆ, ಮೇ 27 ರಂದು ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ಪಂದ್ಯದಲ್ಲಿ  ಕಣಕ್ಕಿಳಿಯಬಹುದು. 

4 / 6
ಇತ್ತ ಜೋಶ್ ಹೇಝಲ್​ವುಡ್  ರಿಟರ್ನ್ ಸುದ್ದಿಯು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ.

ಇತ್ತ ಜೋಶ್ ಹೇಝಲ್​ವುಡ್  ರಿಟರ್ನ್ ಸುದ್ದಿಯು ಆರ್​ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಹೇಝಲ್​ವುಡ್. 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಆಸೀಸ್ ವೇಗಿ ಒಟ್ಟು 18 ವಿಕೆಟ್​ಗಳನ್ನು ಪಡೆದಿದ್ದಾರೆ.

5 / 6
ಹಾಗೆಯೇ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್​ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್​ ಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

ಹಾಗೆಯೇ ಆರ್​ಸಿಬಿ ಪರ ಅತ್ಯಧಿಕ ಡಾಟ್ ಬಾಲ್​ಗಳನ್ನು ಎಸೆದಿರುವುದು ಸಹ ಜೋಶ್ ಹೇಝಲ್​ವುಡ್. 10 ಪಂದ್ಯಗಳಲ್ಲಿ ಒಟ್ಟು 103 ಡಾಟ್​ ಬಾಲ್​ಗಳನ್ನು ಎಸೆದಿದ್ದಾರೆ. ಈ ಮೂಲಕ ಆರ್​ಸಿಬಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಇದೀಗ ಪ್ಲೇಆಫ್ ಹಂತಕ್ಕೂ ಮುನ್ನ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡವನ್ನು ಕೂಡಿಕೊಳ್ಳುವುದು ಖಚಿತವಾಗಿದ್ದು, ಇದರಿಂದ ರಾಯಲ್ ಪಡೆಯ ಬೌಲಿಂಗ್ ಲೈನಪ್ ಮತ್ತಷ್ಟು ಬಲಿಷ್ಠವಾಗಲಿದೆ.

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ