AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ತಂಡಕ್ಕೆ ಆಘಾತ: ಉಳಿದ ಪಂದ್ಯಗಳಿಗೆ ಪ್ರಮುಖ ಆಟಗಾರ ಅಲಭ್ಯ?

IPL 2025 RCB vs KKR: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-18 ಗೆ ಮೇ 17 ರಂದು ಮತ್ತೆ ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್​ಸಿಬಿ ತಂಡದ ಪ್ರಮುಖ ವೇಗಿ ಅಲಭ್ಯರಾಗುವುದು ಖಚಿತವಾಗಿದೆ.

ಝಾಹಿರ್ ಯೂಸುಫ್
|

Updated on:May 15, 2025 | 11:20 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಪುನರಾರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಪ್ರಮುಖ ಆಟಗಾರ ಜೋಶ್ ಹೇಝಲ್​ವುಡ್ (Josh Hazelwood) ಟೂರ್ನಿಯ ಉಳಿದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಪುನರಾರಂಭಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಆಘಾತ ಎದುರಾಗಿದೆ. ಆರ್​ಸಿಬಿ ತಂಡದ ಪ್ರಮುಖ ಆಟಗಾರ ಜೋಶ್ ಹೇಝಲ್​ವುಡ್ (Josh Hazelwood) ಟೂರ್ನಿಯ ಉಳಿದ ಪಂದ್ಯದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

1 / 5
ಈ ಬಗ್ಗೆ ಮಾತನಾಡಿದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರ ಮ್ಯಾನೇಜರ್ ನೀಲ್ ಮ್ಯಾಕ್ಸ್​ವೆಲ್, ಜೋಶ್ ಹೇಝಲ್​ವುಡ್ ಅವರು ಭುಜದ ನೋವಿನಿಂದ ಬಳಲುತ್ತಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮನದಲ್ಲಿರಿಸಿ ಅವರು ಮನೆಯಲ್ಲೇ ಉಳಿಯುವ ಸಾಧ್ಯತೆಯಿದೆ. ಅಲ್ಲದೆ ಕಮಿನ್ಸ್ ಸನ್​ರೈಸರ್ಸ್ ಹೈದರಾಬಾದ್​ ತಂಡದ ಉಳಿದ ಪಂದ್ಯಗಳಿಗೆ ಲಭ್ಯರಿರಲಿದ್ದಾರೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಅವರ ಮ್ಯಾನೇಜರ್ ನೀಲ್ ಮ್ಯಾಕ್ಸ್​ವೆಲ್, ಜೋಶ್ ಹೇಝಲ್​ವುಡ್ ಅವರು ಭುಜದ ನೋವಿನಿಂದ ಬಳಲುತ್ತಿದ್ದಾರೆ. ಮುಂಬರುವ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ ಅನ್ನು ಗಮನದಲ್ಲಿರಿಸಿ ಅವರು ಮನೆಯಲ್ಲೇ ಉಳಿಯುವ ಸಾಧ್ಯತೆಯಿದೆ. ಅಲ್ಲದೆ ಕಮಿನ್ಸ್ ಸನ್​ರೈಸರ್ಸ್ ಹೈದರಾಬಾದ್​ ತಂಡದ ಉಳಿದ ಪಂದ್ಯಗಳಿಗೆ ಲಭ್ಯರಿರಲಿದ್ದಾರೆ ಎಂದಿದ್ದಾರೆ.

2 / 5
ಇದರೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡದ ಉಳಿದ ಮ್ಯಾಚ್​ಗಳಿಗೆ ಅಲಭ್ಯರಾಗುವುದು ಬಹುತೇಕ ಕನ್ಫರ್ಮ್​ ಆದಂತಾಗಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ0ದ್ಯದಲ್ಲಿ ಭುಜದ ನೋವಿನ ಕಾರಣ ಅವರು ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಲುಂಗಿ ಎನ್​ಗಿಡಿ ಆಡಿದ್ದರು. ಇದೀಗ ಹೇಝಲ್​ವುಡ್ ಅಲಭ್ಯರಾದರೆ, ಉಳಿದ ಪಂದ್ಯಗಳಲ್ಲಿ ಲುಂಗಿ ಎನ್​ಗಿಡಿ ಅಥವಾ ನುವಾನ್ ತುಷಾರ ಕಣಕ್ಕಿಳಿಯುವ ಸಾಧ್ಯತೆಯಿದೆ.

ಇದರೊಂದಿಗೆ ಜೋಶ್ ಹೇಝಲ್​ವುಡ್ ಆರ್​ಸಿಬಿ ತಂಡದ ಉಳಿದ ಮ್ಯಾಚ್​ಗಳಿಗೆ ಅಲಭ್ಯರಾಗುವುದು ಬಹುತೇಕ ಕನ್ಫರ್ಮ್​ ಆದಂತಾಗಿದೆ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ0ದ್ಯದಲ್ಲಿ ಭುಜದ ನೋವಿನ ಕಾರಣ ಅವರು ಕಣಕ್ಕಿಳಿದಿರಲಿಲ್ಲ. ಅವರ ಬದಲಿಗೆ ಲುಂಗಿ ಎನ್​ಗಿಡಿ ಆಡಿದ್ದರು. ಇದೀಗ ಹೇಝಲ್​ವುಡ್ ಅಲಭ್ಯರಾದರೆ, ಉಳಿದ ಪಂದ್ಯಗಳಲ್ಲಿ ಲುಂಗಿ ಎನ್​ಗಿಡಿ ಅಥವಾ ನುವಾನ್ ತುಷಾರ ಕಣಕ್ಕಿಳಿಯುವ ಸಾಧ್ಯತೆಯಿದೆ.

3 / 5
ಅಂದಹಾಗೆ ಜೋಶ್ ಹೇಝಲ್​ವುಡ್ ಉಳಿದ ಪಂದ್ಯಗಳಿಗೆ ಅಲಭ್ಯರಾದರೆ, ಆರ್​ಸಿಬಿ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಜೋಶ್ ಹೇಝಲ್​ವುಡ್. ಆಡಿದ 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹೇಝಲ್​ವುಡ್ ಒಟ್ಟು 18 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಅಂದಹಾಗೆ ಜೋಶ್ ಹೇಝಲ್​ವುಡ್ ಉಳಿದ ಪಂದ್ಯಗಳಿಗೆ ಅಲಭ್ಯರಾದರೆ, ಆರ್​ಸಿಬಿ ಪಾಲಿಗೆ ಹಿನ್ನಡೆಯಾಗುವುದರಲ್ಲಿ ಅನುಮಾನವೇ ಇಲ್ಲ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಅತ್ಯಧಿಕ ವಿಕೆಟ್ ಕಬಳಿಸಿರುವುದು ಜೋಶ್ ಹೇಝಲ್​ವುಡ್. ಆಡಿದ 10 ಪಂದ್ಯಗಳಲ್ಲಿ 36.5 ಓವರ್​ಗಳನ್ನು ಎಸೆದಿರುವ ಹೇಝಲ್​ವುಡ್ ಒಟ್ಟು 18 ವಿಕೆಟ್​ಗಳನ್ನು ಕಬಳಿಸಿದ್ದಾರೆ.

4 / 5
ಹಾಗೆಯೇ 36.5 ಓವರ್​ಗಳಲ್ಲಿ ಜೋಶ್ ಹೇಝಲ್​ವುಡ್ 103 ಡಾಟ್​ ಬಾಲ್​ಗಳನ್ನು ಸಹ ಎಸೆದಿದ್ದಾರೆ. ಅಂದರೆ ಆರ್​ಸಿಬಿ ಪರ ಈ ಬಾರಿ ಅತ್ಯಧಿಕ ಡಾಟ್ ಬಾಲ್ ಎಸೆದ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ ನಿರ್ಣಾಯಕ ಹಂತದ ಪಂದ್ಯಗಳಿಗೆ ಅಲಭ್ಯರಾದರೆ, ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

ಹಾಗೆಯೇ 36.5 ಓವರ್​ಗಳಲ್ಲಿ ಜೋಶ್ ಹೇಝಲ್​ವುಡ್ 103 ಡಾಟ್​ ಬಾಲ್​ಗಳನ್ನು ಸಹ ಎಸೆದಿದ್ದಾರೆ. ಅಂದರೆ ಆರ್​ಸಿಬಿ ಪರ ಈ ಬಾರಿ ಅತ್ಯಧಿಕ ಡಾಟ್ ಬಾಲ್ ಎಸೆದ ಹಾಗೂ ಅತೀ ಹೆಚ್ಚು ವಿಕೆಟ್ ಕಬಳಿಸಿದ ಬೌಲರ್​ ನಿರ್ಣಾಯಕ ಹಂತದ ಪಂದ್ಯಗಳಿಗೆ ಅಲಭ್ಯರಾದರೆ, ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಹಿನ್ನಡೆಯನ್ನುಂಟು ಮಾಡುವುದರಲ್ಲಿ ಅನುಮಾನವೇ ಇಲ್ಲ.

5 / 5

Published On - 7:24 am, Wed, 14 May 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ