AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025 ಫೈನಲ್-WTC ಫೈನಲ್ ನಡುವೆ 15 ದಿನಗಳ ಗ್ಯಾಪ್

WTC 2025: ಭಾರತ ತಂಡವು ಎರಡು ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಿದೆ. 2021 ರ ಫೈನಲ್​ನಲ್ಲಿ ನ್ಯೂಝಿಲೆಂಡ್ ವಿರುದ್ಧ ಸೋಲುವ ಮೂಲಕ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ WTC ಮುಡಿಗೇರಿಸಿಕೊಳ್ಳುವ ಅವಕಾಶ ಕೈಚೆಲ್ಲಿಕೊಂಡಿತು. ಇದಾದ ಬಳಿಕ 2023 ರ ಫೈನಲ್​ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತು. ಇದೀಗ ಮೂರನೇ ಬಾರಿಗೆ WTC ಫೈನಲ್​ ಆಡುವ ವಿಶ್ವಾಸದಲ್ಲಿದೆ ಟೀಮ್ ಇಂಡಿಯಾ.

ಝಾಹಿರ್ ಯೂಸುಫ್
|

Updated on: Aug 18, 2024 | 12:31 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮಾರ್ಚ್ ಅಂತ್ಯದ ವೇಳೆಗೆ ಶುರುವಾಗುವುದು ಬಹುತೇಕ ಖಚಿತ. ಏಕೆಂದರೆ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಈ ಟೂರ್ನಿಯ ಬಳಿಕ ಐಪಿಎಲ್ 2025 ಆರಂಭವಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮಾರ್ಚ್ ಅಂತ್ಯದ ವೇಳೆಗೆ ಶುರುವಾಗುವುದು ಬಹುತೇಕ ಖಚಿತ. ಏಕೆಂದರೆ ಚಾಂಪಿಯನ್ಸ್ ಟ್ರೋಫಿ 2025 ಫೆಬ್ರವರಿ 19 ರಿಂದ ಶುರುವಾಗಲಿದ್ದು, ಈ ಟೂರ್ನಿಯ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ. ಈ ಟೂರ್ನಿಯ ಬಳಿಕ ಐಪಿಎಲ್ 2025 ಆರಂಭವಾಗಲಿದೆ.

1 / 5
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್ ಪಂದ್ಯವನ್ನು ಜೂನ್ ತಿಂಗಳಲ್ಲಿ ಲಾರ್ಡ್ಸ್ ಮೈದಾನದಲ್ಲಿ ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅಂದರೆ ಮಾರ್ಚ್​​ನಲ್ಲಿ ಐಪಿಎಲ್ ಆರಂಭವಾದರೆ ಜೂನ್​ಗೂ ಮುನ್ನ ಟೂರ್ನಿಯನ್ನು ಮುಗಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್ ಪಂದ್ಯವನ್ನು ಜೂನ್ ತಿಂಗಳಲ್ಲಿ ಲಾರ್ಡ್ಸ್ ಮೈದಾನದಲ್ಲಿ ಆಯೋಜಿಸಲು ಐಸಿಸಿ ನಿರ್ಧರಿಸಿದೆ. ಅಂದರೆ ಮಾರ್ಚ್​​ನಲ್ಲಿ ಐಪಿಎಲ್ ಆರಂಭವಾದರೆ ಜೂನ್​ಗೂ ಮುನ್ನ ಟೂರ್ನಿಯನ್ನು ಮುಗಿಸಬೇಕಾದ ಅನಿವಾರ್ಯತೆ ಬಿಸಿಸಿಐ ಮುಂದಿದೆ.

2 / 5
ಏಕೆಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವುದು ಬಹುತೇಕ ಖಚಿತ. ಪ್ರಸ್ತುತ WTC ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದ್ದು, ಮುಂದಿನ 10 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವು ನಾಲ್ಕೈದು ಪಂದ್ಯಗಳನ್ನು ಗೆದ್ದರೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲಿದೆ.

ಏಕೆಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಟೀಮ್ ಇಂಡಿಯಾ ಕಣಕ್ಕಿಳಿಯುವುದು ಬಹುತೇಕ ಖಚಿತ. ಪ್ರಸ್ತುತ WTC ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದ್ದು, ಮುಂದಿನ 10 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವು ನಾಲ್ಕೈದು ಪಂದ್ಯಗಳನ್ನು ಗೆದ್ದರೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಲಿದೆ.

3 / 5
ಹೀಗಾಗಿಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೂ 2 ವಾರಗಳ ಮುಂಚಿತವಾಗಿ ಐಪಿಎಲ್ ಮುಗಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. 2023ರ WTC ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು. ಭಾರತೀಯ ಆಟಗಾರರು ಐಪಿಎಲ್ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ಗೆ ಮರಳಿದ್ದರಿಂದ ಸೋಲನುಭವಿಸಿದೆ ಎಂಬ ಟೀಕೆಗಳು ಕೇಳಿ ಬಂದಿದ್ದವು.

ಹೀಗಾಗಿಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೂ 2 ವಾರಗಳ ಮುಂಚಿತವಾಗಿ ಐಪಿಎಲ್ ಮುಗಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. 2023ರ WTC ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತ್ತು. ಭಾರತೀಯ ಆಟಗಾರರು ಐಪಿಎಲ್ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್​ಗೆ ಮರಳಿದ್ದರಿಂದ ಸೋಲನುಭವಿಸಿದೆ ಎಂಬ ಟೀಕೆಗಳು ಕೇಳಿ ಬಂದಿದ್ದವು.

4 / 5
ಆದರೆ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೂ 15 ದಿನಗಳ ಮುಂಚಿತವಾಗಿ ಐಪಿಎಲ್​ ಫೈನಲ್ ಆಯೋಜಿಸುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಅಂದರೆ ಐಪಿಎಲ್ ಫೈನಲ್ ಹಾಗೂ WTC ಫೈನಲ್‌ ನಡುವೆ 15 ದಿನಗಳ ಅಂತರವಿರಲಿದೆ. ಈ ಎರಡು ವಾರಗಳ ಅವಧಿಯಲ್ಲಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಸಜ್ಜಾಗಲಿದೆ. ಈ ಮೂಲಕ ಚೊಚ್ಚಲ ಬಾರಿಗೆ WTC ಕಿರೀಟ ಮುಡಿಗೇರಿಸಿಕೊಳ್ಳಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

ಆದರೆ ಈ ಬಾರಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೂ 15 ದಿನಗಳ ಮುಂಚಿತವಾಗಿ ಐಪಿಎಲ್​ ಫೈನಲ್ ಆಯೋಜಿಸುವುದಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಅಂದರೆ ಐಪಿಎಲ್ ಫೈನಲ್ ಹಾಗೂ WTC ಫೈನಲ್‌ ನಡುವೆ 15 ದಿನಗಳ ಅಂತರವಿರಲಿದೆ. ಈ ಎರಡು ವಾರಗಳ ಅವಧಿಯಲ್ಲಿ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗಾಗಿ ಸಜ್ಜಾಗಲಿದೆ. ಈ ಮೂಲಕ ಚೊಚ್ಚಲ ಬಾರಿಗೆ WTC ಕಿರೀಟ ಮುಡಿಗೇರಿಸಿಕೊಳ್ಳಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.

5 / 5
Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ