AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಮೂವರು ಹೊರಕ್ಕೆ..!

IPL 2025: ಐಪಿಎಲ್ ನಿಯಮದ ಪ್ರಕಾರ ಅನ್​ಕ್ಯಾಪ್ಡ್ ಪಟ್ಟಿಯಿಂದ ರಿಟೈನ್ ಆಗುವ ಆಟಗಾರರಿಗೆ 4 ಕೋಟಿ ರೂ. ನೀಡಿದರೆ ಸಾಕು. ಆದರೀಗ ಐಪಿಎಲ್​ನ ಮೂವರು ಅನ್​ಕ್ಯಾಪ್ಡ್ ಆಟಗಾರರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಹೊರಬೀಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2024 | 11:58 AM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಟೀಮ್ ಇಂಡಿಯಾದಲ್ಲಿ ಮೂವರು ಹೊಸಮುಖಗಳು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಟೀಮ್ ಇಂಡಿಯಾದಲ್ಲಿ ಮೂವರು ಹೊಸಮುಖಗಳು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣ.

1 / 7
ಈ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರೆ ಐಪಿಎಲ್​ನ​ ಅನ್​ಕ್ಯಾಪ್ಡ್​ ಪಟ್ಟಿಯಿಂದ ಹೊರಬೀಳಲಿದ್ದಾರೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಮೂಲಕ ಯಾವ ಆಟಗಾರ ಅನ್​ಕ್ಯಾಪ್ಡ್ ಪಟ್ಟ ಕಳಚಲಿದ್ದಾರೆ ಎಂಬುದೇ ಕುತೂಹಲ.

ಈ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರೆ ಐಪಿಎಲ್​ನ​ ಅನ್​ಕ್ಯಾಪ್ಡ್​ ಪಟ್ಟಿಯಿಂದ ಹೊರಬೀಳಲಿದ್ದಾರೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಮೂಲಕ ಯಾವ ಆಟಗಾರ ಅನ್​ಕ್ಯಾಪ್ಡ್ ಪಟ್ಟ ಕಳಚಲಿದ್ದಾರೆ ಎಂಬುದೇ ಕುತೂಹಲ.

2 / 7
ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಭಾರತದ ಪರ ಆಡದ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಈ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ 5+1 ಅಥವಾ 4+2 ಸೂತ್ರದಡಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು.

ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಭಾರತದ ಪರ ಆಡದ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಈ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ 5+1 ಅಥವಾ 4+2 ಸೂತ್ರದಡಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು.

3 / 7
ಅಂದರೆ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದರೆ, ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಇನ್ನು ಗರಿಷ್ಠ ಇಬ್ಬರು ಅನ್​ಕ್ಯಾಪ್ಡ್ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹೀಗೆ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

ಅಂದರೆ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದರೆ, ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಇನ್ನು ಗರಿಷ್ಠ ಇಬ್ಬರು ಅನ್​ಕ್ಯಾಪ್ಡ್ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹೀಗೆ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

4 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪ್ರಮುಖ ವೇಗಿಯಾಗಿರುವ ಮಯಾಂಕ್ ಯಾದವ್ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ, ಅವರನ್ನು ಉಳಿಸಿಕೊಳ್ಳಬೇಕಿದ್ದರೆ ಎಲ್​ಎಸ್​ಜಿ ಫ್ರಾಂಚೈಸಿಯು ಕನಿಷ್ಠ 11 ಕೋಟಿ ರೂ. ಪಾವತಿಸಬೇಕಾಗುತ್ತದೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪ್ರಮುಖ ವೇಗಿಯಾಗಿರುವ ಮಯಾಂಕ್ ಯಾದವ್ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ, ಅವರನ್ನು ಉಳಿಸಿಕೊಳ್ಳಬೇಕಿದ್ದರೆ ಎಲ್​ಎಸ್​ಜಿ ಫ್ರಾಂಚೈಸಿಯು ಕನಿಷ್ಠ 11 ಕೋಟಿ ರೂ. ಪಾವತಿಸಬೇಕಾಗುತ್ತದೆ.

5 / 7
ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ನಿತೀಶ್ ಕುಮಾರ್ ರೆಡ್ಡಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಿದರೆ 4 ಕೋಟಿ ರೂ. ನೀಡಿದರೆ ಸಾಕಿತ್ತು. ಅದುವೇ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ.

ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ನಿತೀಶ್ ಕುಮಾರ್ ರೆಡ್ಡಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಿದರೆ 4 ಕೋಟಿ ರೂ. ನೀಡಿದರೆ ಸಾಕಿತ್ತು. ಅದುವೇ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ.

6 / 7
ಇದೇ ನಿಯಮ ಕೆಕೆಆರ್ ವೇಗಿ ಹರ್ಷಿತ್ ರಾಣಗೂ ಅನ್ವಯಿಸುತ್ತದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಳೆದ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಾಣ ಅವರು ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿದರೆ, ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಈ ಮೂವರು ಆಟಗಾರರಲ್ಲಿ ಯಾರು ಅನ್​ಕ್ಯಾಪ್ಡ್ ಪಟ್ಟ ಕಳಚಿ ಹತ್ತು ಕೋಟಿಗೂ ಅಧಿಕ ಮೊತ್ತ ಗಳಿಸಲಿದ್ದಾರೆ ಕಾದು ನೋಡಬೇಕಿದೆ.

ಇದೇ ನಿಯಮ ಕೆಕೆಆರ್ ವೇಗಿ ಹರ್ಷಿತ್ ರಾಣಗೂ ಅನ್ವಯಿಸುತ್ತದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಳೆದ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಾಣ ಅವರು ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿದರೆ, ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಈ ಮೂವರು ಆಟಗಾರರಲ್ಲಿ ಯಾರು ಅನ್​ಕ್ಯಾಪ್ಡ್ ಪಟ್ಟ ಕಳಚಿ ಹತ್ತು ಕೋಟಿಗೂ ಅಧಿಕ ಮೊತ್ತ ಗಳಿಸಲಿದ್ದಾರೆ ಕಾದು ನೋಡಬೇಕಿದೆ.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ