AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಮೂವರು ಹೊರಕ್ಕೆ..!

IPL 2025: ಐಪಿಎಲ್ ನಿಯಮದ ಪ್ರಕಾರ ಅನ್​ಕ್ಯಾಪ್ಡ್ ಪಟ್ಟಿಯಿಂದ ರಿಟೈನ್ ಆಗುವ ಆಟಗಾರರಿಗೆ 4 ಕೋಟಿ ರೂ. ನೀಡಿದರೆ ಸಾಕು. ಆದರೀಗ ಐಪಿಎಲ್​ನ ಮೂವರು ಅನ್​ಕ್ಯಾಪ್ಡ್ ಆಟಗಾರರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಹೊರಬೀಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2024 | 11:58 AM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಟೀಮ್ ಇಂಡಿಯಾದಲ್ಲಿ ಮೂವರು ಹೊಸಮುಖಗಳು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಟೀಮ್ ಇಂಡಿಯಾದಲ್ಲಿ ಮೂವರು ಹೊಸಮುಖಗಳು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣ.

1 / 7
ಈ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರೆ ಐಪಿಎಲ್​ನ​ ಅನ್​ಕ್ಯಾಪ್ಡ್​ ಪಟ್ಟಿಯಿಂದ ಹೊರಬೀಳಲಿದ್ದಾರೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಮೂಲಕ ಯಾವ ಆಟಗಾರ ಅನ್​ಕ್ಯಾಪ್ಡ್ ಪಟ್ಟ ಕಳಚಲಿದ್ದಾರೆ ಎಂಬುದೇ ಕುತೂಹಲ.

ಈ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರೆ ಐಪಿಎಲ್​ನ​ ಅನ್​ಕ್ಯಾಪ್ಡ್​ ಪಟ್ಟಿಯಿಂದ ಹೊರಬೀಳಲಿದ್ದಾರೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಮೂಲಕ ಯಾವ ಆಟಗಾರ ಅನ್​ಕ್ಯಾಪ್ಡ್ ಪಟ್ಟ ಕಳಚಲಿದ್ದಾರೆ ಎಂಬುದೇ ಕುತೂಹಲ.

2 / 7
ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಭಾರತದ ಪರ ಆಡದ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಈ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ 5+1 ಅಥವಾ 4+2 ಸೂತ್ರದಡಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು.

ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಭಾರತದ ಪರ ಆಡದ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಈ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ 5+1 ಅಥವಾ 4+2 ಸೂತ್ರದಡಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು.

3 / 7
ಅಂದರೆ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದರೆ, ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಇನ್ನು ಗರಿಷ್ಠ ಇಬ್ಬರು ಅನ್​ಕ್ಯಾಪ್ಡ್ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹೀಗೆ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

ಅಂದರೆ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದರೆ, ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಇನ್ನು ಗರಿಷ್ಠ ಇಬ್ಬರು ಅನ್​ಕ್ಯಾಪ್ಡ್ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹೀಗೆ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

4 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪ್ರಮುಖ ವೇಗಿಯಾಗಿರುವ ಮಯಾಂಕ್ ಯಾದವ್ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ, ಅವರನ್ನು ಉಳಿಸಿಕೊಳ್ಳಬೇಕಿದ್ದರೆ ಎಲ್​ಎಸ್​ಜಿ ಫ್ರಾಂಚೈಸಿಯು ಕನಿಷ್ಠ 11 ಕೋಟಿ ರೂ. ಪಾವತಿಸಬೇಕಾಗುತ್ತದೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪ್ರಮುಖ ವೇಗಿಯಾಗಿರುವ ಮಯಾಂಕ್ ಯಾದವ್ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ, ಅವರನ್ನು ಉಳಿಸಿಕೊಳ್ಳಬೇಕಿದ್ದರೆ ಎಲ್​ಎಸ್​ಜಿ ಫ್ರಾಂಚೈಸಿಯು ಕನಿಷ್ಠ 11 ಕೋಟಿ ರೂ. ಪಾವತಿಸಬೇಕಾಗುತ್ತದೆ.

5 / 7
ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ನಿತೀಶ್ ಕುಮಾರ್ ರೆಡ್ಡಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಿದರೆ 4 ಕೋಟಿ ರೂ. ನೀಡಿದರೆ ಸಾಕಿತ್ತು. ಅದುವೇ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ.

ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ನಿತೀಶ್ ಕುಮಾರ್ ರೆಡ್ಡಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಿದರೆ 4 ಕೋಟಿ ರೂ. ನೀಡಿದರೆ ಸಾಕಿತ್ತು. ಅದುವೇ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ.

6 / 7
ಇದೇ ನಿಯಮ ಕೆಕೆಆರ್ ವೇಗಿ ಹರ್ಷಿತ್ ರಾಣಗೂ ಅನ್ವಯಿಸುತ್ತದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಳೆದ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಾಣ ಅವರು ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿದರೆ, ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಈ ಮೂವರು ಆಟಗಾರರಲ್ಲಿ ಯಾರು ಅನ್​ಕ್ಯಾಪ್ಡ್ ಪಟ್ಟ ಕಳಚಿ ಹತ್ತು ಕೋಟಿಗೂ ಅಧಿಕ ಮೊತ್ತ ಗಳಿಸಲಿದ್ದಾರೆ ಕಾದು ನೋಡಬೇಕಿದೆ.

ಇದೇ ನಿಯಮ ಕೆಕೆಆರ್ ವೇಗಿ ಹರ್ಷಿತ್ ರಾಣಗೂ ಅನ್ವಯಿಸುತ್ತದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಳೆದ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಾಣ ಅವರು ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿದರೆ, ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಈ ಮೂವರು ಆಟಗಾರರಲ್ಲಿ ಯಾರು ಅನ್​ಕ್ಯಾಪ್ಡ್ ಪಟ್ಟ ಕಳಚಿ ಹತ್ತು ಕೋಟಿಗೂ ಅಧಿಕ ಮೊತ್ತ ಗಳಿಸಲಿದ್ದಾರೆ ಕಾದು ನೋಡಬೇಕಿದೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ