AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಮೂವರು ಹೊರಕ್ಕೆ..!

IPL 2025: ಐಪಿಎಲ್ ನಿಯಮದ ಪ್ರಕಾರ ಅನ್​ಕ್ಯಾಪ್ಡ್ ಪಟ್ಟಿಯಿಂದ ರಿಟೈನ್ ಆಗುವ ಆಟಗಾರರಿಗೆ 4 ಕೋಟಿ ರೂ. ನೀಡಿದರೆ ಸಾಕು. ಆದರೀಗ ಐಪಿಎಲ್​ನ ಮೂವರು ಅನ್​ಕ್ಯಾಪ್ಡ್ ಆಟಗಾರರು ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿಯದರೆ ಅನ್​ಕ್ಯಾಪ್ಡ್ ಪಟ್ಟಿಯಿಂದ ಹೊರಬೀಳಲಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 05, 2024 | 11:58 AM

Share
ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಟೀಮ್ ಇಂಡಿಯಾದಲ್ಲಿ ಮೂವರು ಹೊಸಮುಖಗಳು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣ.

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರದಿಂದ (ಅಕ್ಟೋಬರ್ 6) ಶುರುವಾಗಲಿದೆ. ಈ ಸರಣಿಗಾಗಿ ಆಯ್ಕೆ ಮಾಡಲಾಗಿರುವ ಟೀಮ್ ಇಂಡಿಯಾದಲ್ಲಿ ಮೂವರು ಹೊಸಮುಖಗಳು ಕಾಣಿಸಿಕೊಂಡಿದ್ದಾರೆ. ಅವರೆಂದರೆ ಮಯಾಂಕ್ ಯಾದವ್, ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣ.

1 / 7
ಈ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರೆ ಐಪಿಎಲ್​ನ​ ಅನ್​ಕ್ಯಾಪ್ಡ್​ ಪಟ್ಟಿಯಿಂದ ಹೊರಬೀಳಲಿದ್ದಾರೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಮೂಲಕ ಯಾವ ಆಟಗಾರ ಅನ್​ಕ್ಯಾಪ್ಡ್ ಪಟ್ಟ ಕಳಚಲಿದ್ದಾರೆ ಎಂಬುದೇ ಕುತೂಹಲ.

ಈ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದರೆ ಐಪಿಎಲ್​ನ​ ಅನ್​ಕ್ಯಾಪ್ಡ್​ ಪಟ್ಟಿಯಿಂದ ಹೊರಬೀಳಲಿದ್ದಾರೆ. ಹೀಗಾಗಿಯೇ ಇದೀಗ ಬಾಂಗ್ಲಾದೇಶ್ ವಿರುದ್ಧದ ಸರಣಿಯ ಮೂಲಕ ಯಾವ ಆಟಗಾರ ಅನ್​ಕ್ಯಾಪ್ಡ್ ಪಟ್ಟ ಕಳಚಲಿದ್ದಾರೆ ಎಂಬುದೇ ಕುತೂಹಲ.

2 / 7
ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಭಾರತದ ಪರ ಆಡದ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಈ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ 5+1 ಅಥವಾ 4+2 ಸೂತ್ರದಡಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು.

ಏಕೆಂದರೆ ಐಪಿಎಲ್ ನಿಯಮದ ಪ್ರಕಾರ ಭಾರತದ ಪರ ಆಡದ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಪ್ಲೇಯರ್ಸ್ ಎಂದು ಪರಿಗಣಿಸಲಾಗುತ್ತದೆ. ಅಲ್ಲದೆ ಈ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ 5+1 ಅಥವಾ 4+2 ಸೂತ್ರದಡಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು.

3 / 7
ಅಂದರೆ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದರೆ, ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಇನ್ನು ಗರಿಷ್ಠ ಇಬ್ಬರು ಅನ್​ಕ್ಯಾಪ್ಡ್ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹೀಗೆ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

ಅಂದರೆ ಮೆಗಾ ಹರಾಜಿಗೂ ಮುನ್ನ ಫ್ರಾಂಚೈಸಿಯೊಂದು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಬಯಸಿದರೆ, ಅದರಲ್ಲಿ ಒಬ್ಬರು ಅನ್​ಕ್ಯಾಪ್ಡ್ ಆಟಗಾರ ಇರಲೇಬೇಕು. ಇನ್ನು ಗರಿಷ್ಠ ಇಬ್ಬರು ಅನ್​ಕ್ಯಾಪ್ಡ್ ಆಟಗಾರರನ್ನು ಮೆಗಾ ಹರಾಜಿಗೂ ಮುನ್ನ ಉಳಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹೀಗೆ ಅನ್​ಕ್ಯಾಪ್ಡ್​ ಪಟ್ಟಿಯಲ್ಲಿ ಉಳಿಸಿಕೊಂಡ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

4 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪ್ರಮುಖ ವೇಗಿಯಾಗಿರುವ ಮಯಾಂಕ್ ಯಾದವ್ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ, ಅವರನ್ನು ಉಳಿಸಿಕೊಳ್ಳಬೇಕಿದ್ದರೆ ಎಲ್​ಎಸ್​ಜಿ ಫ್ರಾಂಚೈಸಿಯು ಕನಿಷ್ಠ 11 ಕೋಟಿ ರೂ. ಪಾವತಿಸಬೇಕಾಗುತ್ತದೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಪ್ರಮುಖ ವೇಗಿಯಾಗಿರುವ ಮಯಾಂಕ್ ಯಾದವ್ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ, ಅವರನ್ನು ಉಳಿಸಿಕೊಳ್ಳಬೇಕಿದ್ದರೆ ಎಲ್​ಎಸ್​ಜಿ ಫ್ರಾಂಚೈಸಿಯು ಕನಿಷ್ಠ 11 ಕೋಟಿ ರೂ. ಪಾವತಿಸಬೇಕಾಗುತ್ತದೆ.

5 / 7
ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ನಿತೀಶ್ ಕುಮಾರ್ ರೆಡ್ಡಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಿದರೆ 4 ಕೋಟಿ ರೂ. ನೀಡಿದರೆ ಸಾಕಿತ್ತು. ಅದುವೇ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ.

ಹಾಗೆಯೇ ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಯು ನಿತೀಶ್ ಕುಮಾರ್ ರೆಡ್ಡಿಯನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ಆಯ್ಕೆ ಮಾಡಿದರೆ 4 ಕೋಟಿ ರೂ. ನೀಡಿದರೆ ಸಾಕಿತ್ತು. ಅದುವೇ ಅವರು ಬಾಂಗ್ಲಾದೇಶ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ.

6 / 7
ಇದೇ ನಿಯಮ ಕೆಕೆಆರ್ ವೇಗಿ ಹರ್ಷಿತ್ ರಾಣಗೂ ಅನ್ವಯಿಸುತ್ತದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಳೆದ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಾಣ ಅವರು ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿದರೆ, ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಈ ಮೂವರು ಆಟಗಾರರಲ್ಲಿ ಯಾರು ಅನ್​ಕ್ಯಾಪ್ಡ್ ಪಟ್ಟ ಕಳಚಿ ಹತ್ತು ಕೋಟಿಗೂ ಅಧಿಕ ಮೊತ್ತ ಗಳಿಸಲಿದ್ದಾರೆ ಕಾದು ನೋಡಬೇಕಿದೆ.

ಇದೇ ನಿಯಮ ಕೆಕೆಆರ್ ವೇಗಿ ಹರ್ಷಿತ್ ರಾಣಗೂ ಅನ್ವಯಿಸುತ್ತದೆ. ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಳೆದ ಸೀಸನ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ರಾಣ ಅವರು ಬಾಂಗ್ಲಾದೇಶ್ ವಿರುದ್ದದ ಸರಣಿಯಲ್ಲಿ ಕಣಕ್ಕಿಳಿದರೆ, ಅವರ ಕನಿಷ್ಠ ರಿಟೈನ್ ಮೊತ್ತ 11 ಕೋಟಿ ರೂ. ಆಗಲಿದೆ. ಹೀಗಾಗಿಯೇ ಮೂರು ಪಂದ್ಯಗಳ ಸರಣಿಯಲ್ಲಿ ಈ ಮೂವರು ಆಟಗಾರರಲ್ಲಿ ಯಾರು ಅನ್​ಕ್ಯಾಪ್ಡ್ ಪಟ್ಟ ಕಳಚಿ ಹತ್ತು ಕೋಟಿಗೂ ಅಧಿಕ ಮೊತ್ತ ಗಳಿಸಲಿದ್ದಾರೆ ಕಾದು ನೋಡಬೇಕಿದೆ.

7 / 7
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ