Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ

IPL 2025: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ರೈಟ್ ಟು ಮ್ಯಾಚ್ (ಆರ್​ಟಿಎಂ) ಆಯ್ಕೆ ನೀಡಲಾಗಿದೆ. ಅಂದರೆ ಒಬ್ಬ ಆಟಗಾರನನ್ನು ಆರ್​ಟಿಎಂ ಆಪ್ಶನ್​ನಲ್ಲಿ ಆಯ್ಕೆ ಮಾಡಿ, ಆ ಬಳಿಕ ಹರಾಜಿಗೆ ಬಿಡುಗಡೆ ಮಾಡುವುದು. ಹರಾಜಿನಲ್ಲಿ ಬೇರೆ ತಂಡ ಬಿಡ್ ಮಾಡಿದ್ರೆ, ಆ ಮೊತ್ತವನ್ನು ಬಿಡುಗಡೆ ಮಾಡಿದ ಫ್ರಾಂಚೈಸಿಯೇ ನೀಡಿ ಮತ್ತೆ ತಂಡಕ್ಕೆ ಆಯ್ಕೆ ಮಾಡಿಕೊಳ್ಳುವ ಆಯ್ಕೆ. ಆಟಗಾರರನ್ನು ರಿಟೈನ್ ಮಾಡದೇ ಈ ಆಯ್ಕೆಯ ಮೂಲಕ ಗರಿಷ್ಠ 6 ಆಟಗಾರರ ಮೇಲೆ ಆರ್​ಟಿಎಂ ಬಳಸಿಕೊಳ್ಳಬಹುದು.

ಝಾಹಿರ್ ಯೂಸುಫ್
|

Updated on: Oct 06, 2024 | 11:53 AM

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಿಕೊಳ್ಳಲಾಗುವ ಆಟಗಾರರಿಗೆ ನಿರ್ದಿಷ್ಟ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಅದರಂತೆ ಆರು ಆಟಗಾರರನ್ನು ಉಳಿಸಿಕೊಳ್ಳಲು ಮುಂದಾದರೆ ಬರೋಬ್ಬರಿ 79 ಕೋಟಿ ರೂ. ಅನ್ನು ವ್ಯಯಿಸಬೇಕು.

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಿಕೊಳ್ಳಲಾಗುವ ಆಟಗಾರರಿಗೆ ನಿರ್ದಿಷ್ಟ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಅದರಂತೆ ಆರು ಆಟಗಾರರನ್ನು ಉಳಿಸಿಕೊಳ್ಳಲು ಮುಂದಾದರೆ ಬರೋಬ್ಬರಿ 79 ಕೋಟಿ ರೂ. ಅನ್ನು ವ್ಯಯಿಸಬೇಕು.

1 / 8
ಇಲ್ಲಿ ಮೊದಲ ಆಟಗಾರನಿಗೆ 18 ಕೋಟಿ, ಎರಡನೇ ಆಟಗಾರನಿಗೆ 14 ಕೋಟಿ, ಮೂರನೇ ಆಟಗಾರನಿಗೆ 11 ಕೋಟಿ, ನಾಲ್ಕನೇ ಆಟಗಾರನಿಗೆ 18 ಕೋಟಿ, ಐದನೇ ಆಟಗಾರನಿಗೆ 14 ಕೋಟಿ ರೂ. ಹಾಗೂ ಆರನೇ ಆಟಗಾರನಿಗೆ 4 ಕೋಟಿ ಕೋಟಿ ನೀಡಬೇಕಾಗುತ್ತದೆ. ಹೀಗಾಗಿಯೇ ಈ ಬಾರಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

ಇಲ್ಲಿ ಮೊದಲ ಆಟಗಾರನಿಗೆ 18 ಕೋಟಿ, ಎರಡನೇ ಆಟಗಾರನಿಗೆ 14 ಕೋಟಿ, ಮೂರನೇ ಆಟಗಾರನಿಗೆ 11 ಕೋಟಿ, ನಾಲ್ಕನೇ ಆಟಗಾರನಿಗೆ 18 ಕೋಟಿ, ಐದನೇ ಆಟಗಾರನಿಗೆ 14 ಕೋಟಿ ರೂ. ಹಾಗೂ ಆರನೇ ಆಟಗಾರನಿಗೆ 4 ಕೋಟಿ ಕೋಟಿ ನೀಡಬೇಕಾಗುತ್ತದೆ. ಹೀಗಾಗಿಯೇ ಈ ಬಾರಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

2 / 8
ಈ ಕುತೂಹಲದ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳಲಿರುವ 6 ಆಟಗಾರರನ್ನು ಹೆಸರಿಸಿದ್ದಾರೆ ಭಾರತ ತಂಡದ ಮಾಜಿ ಆಟಗಾರ ಆಕಾಶ್ ಚೋಪ್ರಾ. ಟೀಮ್ ಇಂಡಿಯಾದ ಮಾಜಿ ಆಟಗಾರನ ಪ್ರಕಾರ ಆರ್​ಸಿಬಿ 4+2 ಸೂತ್ರದೊಂದಿಗೆ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆ.

ಈ ಕುತೂಹಲದ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳಲಿರುವ 6 ಆಟಗಾರರನ್ನು ಹೆಸರಿಸಿದ್ದಾರೆ ಭಾರತ ತಂಡದ ಮಾಜಿ ಆಟಗಾರ ಆಕಾಶ್ ಚೋಪ್ರಾ. ಟೀಮ್ ಇಂಡಿಯಾದ ಮಾಜಿ ಆಟಗಾರನ ಪ್ರಕಾರ ಆರ್​ಸಿಬಿ 4+2 ಸೂತ್ರದೊಂದಿಗೆ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆ.

3 / 8
ಅದರಂತೆ ಆರ್​ಸಿಬಿ ತಂಡದ ಮೊದಲ ರಿಟೈನ್ ವಿರಾಟ್ ಕೊಹ್ಲಿ ಆಗಲಿದ್ದಾರೆ. ಕೊಹ್ಲಿಯನ್ನು ಫಸ್ಟ್ ರಿಟೆನ್ಷನ್ ಆಯ್ಕೆಯಲ್ಲಿ RCB ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಆಕಾಶ್ ಚೋಪ್ರಾ.

ಅದರಂತೆ ಆರ್​ಸಿಬಿ ತಂಡದ ಮೊದಲ ರಿಟೈನ್ ವಿರಾಟ್ ಕೊಹ್ಲಿ ಆಗಲಿದ್ದಾರೆ. ಕೊಹ್ಲಿಯನ್ನು ಫಸ್ಟ್ ರಿಟೆನ್ಷನ್ ಆಯ್ಕೆಯಲ್ಲಿ RCB ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಆಕಾಶ್ ಚೋಪ್ರಾ.

4 / 8
ಇನ್ನು ಆರ್​ಸಿಬಿ ತಂಡದ 2ನೇ ಆಯ್ಕೆ ಕ್ಯಾಮರೋನ್ ಗ್ರೀನ್. ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ರೀನ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ಅವರನ್ನು 2ನೇ ರಿಟೆನ್ಷನ್ ಆಯ್ಕೆಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ಇನ್ನು ಆರ್​ಸಿಬಿ ತಂಡದ 2ನೇ ಆಯ್ಕೆ ಕ್ಯಾಮರೋನ್ ಗ್ರೀನ್. ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ರೀನ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ಅವರನ್ನು 2ನೇ ರಿಟೆನ್ಷನ್ ಆಯ್ಕೆಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

5 / 8
ಮೂರನೇ ರಿಟೆನ್ಷನ್​ನಲ್ಲಿ ಯುವ ದಾಂಡಿಗ ರಜತ್ ಪಾಟಿದಾರ್ ಆಯ್ಕೆಯಾಗಲಿದ್ದಾರೆ. ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಕಾರಣ ಪಾಟಿದಾರ್ ಅವರನ್ನು ಬೆಂಗಳೂರು ಫ್ರಾಂಚೈಸಿ ಕೈ ಬಿಡುವ ಸಾಧ್ಯತೆಯಿಲ್ಲ ಎಂದು ಚೋಪ್ರಾ ಹೇಳಿದ್ದಾರೆ.

ಮೂರನೇ ರಿಟೆನ್ಷನ್​ನಲ್ಲಿ ಯುವ ದಾಂಡಿಗ ರಜತ್ ಪಾಟಿದಾರ್ ಆಯ್ಕೆಯಾಗಲಿದ್ದಾರೆ. ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಕಾರಣ ಪಾಟಿದಾರ್ ಅವರನ್ನು ಬೆಂಗಳೂರು ಫ್ರಾಂಚೈಸಿ ಕೈ ಬಿಡುವ ಸಾಧ್ಯತೆಯಿಲ್ಲ ಎಂದು ಚೋಪ್ರಾ ಹೇಳಿದ್ದಾರೆ.

6 / 8
ಆರ್​ಸಿಬಿ ಫ್ರಾಂಚೈಸಿಯು ನಾಲ್ಕನೇ ಆಯ್ಕೆಯಲ್ಲಿ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಳ್ಳಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ದಯಾಳ್ ಅನ್​ಕ್ಯಾಪ್ಡ್ ಆಟಗಾರನಾಗಿ ಕಾರಣ ಆರ್​ಸಿಬಿ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲಿದೆ.

ಆರ್​ಸಿಬಿ ಫ್ರಾಂಚೈಸಿಯು ನಾಲ್ಕನೇ ಆಯ್ಕೆಯಲ್ಲಿ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಳ್ಳಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ದಯಾಳ್ ಅನ್​ಕ್ಯಾಪ್ಡ್ ಆಟಗಾರನಾಗಿ ಕಾರಣ ಆರ್​ಸಿಬಿ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲಿದೆ.

7 / 8
ಇನ್ನು ಆರ್​ಸಿಬಿ ಫ್ರಾಂಚೈಸಿಯು ಮೊಹಮ್ಮದ್ ಸಿರಾಜ್ ಹಾಗೂ ವಿಲ್ ಜಾಕ್ಸ್ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಲಿದೆ. ಇವರಿಬ್ಬರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಹರಾಜಿಗೆ ಬಿಟ್ಟು, ಆ ಬಳಿಕ ಮತ್ತೆ ಖರೀದಿಸುವ ಸಾಧ್ಯತೆಯಿದೆ. ಈ ಮೂಲಕ 4+2 ಸೂತ್ರದ ಅಡಿಯಲ್ಲಿ ಆರ್​ಸಿಬಿ ಈ 6 ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಇನ್ನು ಆರ್​ಸಿಬಿ ಫ್ರಾಂಚೈಸಿಯು ಮೊಹಮ್ಮದ್ ಸಿರಾಜ್ ಹಾಗೂ ವಿಲ್ ಜಾಕ್ಸ್ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಲಿದೆ. ಇವರಿಬ್ಬರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಹರಾಜಿಗೆ ಬಿಟ್ಟು, ಆ ಬಳಿಕ ಮತ್ತೆ ಖರೀದಿಸುವ ಸಾಧ್ಯತೆಯಿದೆ. ಈ ಮೂಲಕ 4+2 ಸೂತ್ರದ ಅಡಿಯಲ್ಲಿ ಆರ್​ಸಿಬಿ ಈ 6 ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

8 / 8
Follow us
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್