IPL 2025: RCB ಉಳಿಸಿಕೊಳ್ಳುವ ಆಟಗಾರರನ್ನು ಹೆಸರಿಸಿದ ಆಕಾಶ್ ಚೋಪ್ರಾ

Updated on: Oct 06, 2024 | 11:53 AM

IPL 2025: ಈ ಬಾರಿಯ ಐಪಿಎಲ್ ಹರಾಜಿನಲ್ಲಿ ರೈಟ್ ಟು ಮ್ಯಾಚ್ (ಆರ್​ಟಿಎಂ) ಆಯ್ಕೆ ನೀಡಲಾಗಿದೆ. ಅಂದರೆ ಒಬ್ಬ ಆಟಗಾರನನ್ನು ಆರ್​ಟಿಎಂ ಆಪ್ಶನ್​ನಲ್ಲಿ ಆಯ್ಕೆ ಮಾಡಿ, ಆ ಬಳಿಕ ಹರಾಜಿಗೆ ಬಿಡುಗಡೆ ಮಾಡುವುದು. ಹರಾಜಿನಲ್ಲಿ ಬೇರೆ ತಂಡ ಬಿಡ್ ಮಾಡಿದ್ರೆ, ಆ ಮೊತ್ತವನ್ನು ಬಿಡುಗಡೆ ಮಾಡಿದ ಫ್ರಾಂಚೈಸಿಯೇ ನೀಡಿ ಮತ್ತೆ ತಂಡಕ್ಕೆ ಆಯ್ಕೆ ಮಾಡಿಕೊಳ್ಳುವ ಆಯ್ಕೆ. ಆಟಗಾರರನ್ನು ರಿಟೈನ್ ಮಾಡದೇ ಈ ಆಯ್ಕೆಯ ಮೂಲಕ ಗರಿಷ್ಠ 6 ಆಟಗಾರರ ಮೇಲೆ ಆರ್​ಟಿಎಂ ಬಳಸಿಕೊಳ್ಳಬಹುದು.

1 / 8
IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಿಕೊಳ್ಳಲಾಗುವ ಆಟಗಾರರಿಗೆ ನಿರ್ದಿಷ್ಟ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಅದರಂತೆ ಆರು ಆಟಗಾರರನ್ನು ಉಳಿಸಿಕೊಳ್ಳಲು ಮುಂದಾದರೆ ಬರೋಬ್ಬರಿ 79 ಕೋಟಿ ರೂ. ಅನ್ನು ವ್ಯಯಿಸಬೇಕು.

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿ 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಿಕೊಳ್ಳಲಾಗುವ ಆಟಗಾರರಿಗೆ ನಿರ್ದಿಷ್ಟ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಅದರಂತೆ ಆರು ಆಟಗಾರರನ್ನು ಉಳಿಸಿಕೊಳ್ಳಲು ಮುಂದಾದರೆ ಬರೋಬ್ಬರಿ 79 ಕೋಟಿ ರೂ. ಅನ್ನು ವ್ಯಯಿಸಬೇಕು.

2 / 8

ಇಲ್ಲಿ ಮೊದಲ ಆಟಗಾರನಿಗೆ 18 ಕೋಟಿ, ಎರಡನೇ ಆಟಗಾರನಿಗೆ 14 ಕೋಟಿ, ಮೂರನೇ ಆಟಗಾರನಿಗೆ 11 ಕೋಟಿ, ನಾಲ್ಕನೇ ಆಟಗಾರನಿಗೆ 18 ಕೋಟಿ, ಐದನೇ ಆಟಗಾರನಿಗೆ 14 ಕೋಟಿ ರೂ. ಹಾಗೂ ಆರನೇ ಆಟಗಾರನಿಗೆ 4 ಕೋಟಿ ಕೋಟಿ ನೀಡಬೇಕಾಗುತ್ತದೆ. ಹೀಗಾಗಿಯೇ ಈ ಬಾರಿ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

3 / 8

ಈ ಕುತೂಹಲದ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಉಳಿಸಿಕೊಳ್ಳಲಿರುವ 6 ಆಟಗಾರರನ್ನು ಹೆಸರಿಸಿದ್ದಾರೆ ಭಾರತ ತಂಡದ ಮಾಜಿ ಆಟಗಾರ ಆಕಾಶ್ ಚೋಪ್ರಾ. ಟೀಮ್ ಇಂಡಿಯಾದ ಮಾಜಿ ಆಟಗಾರನ ಪ್ರಕಾರ ಆರ್​ಸಿಬಿ 4+2 ಸೂತ್ರದೊಂದಿಗೆ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆ.

4 / 8

ಅದರಂತೆ ಆರ್​ಸಿಬಿ ತಂಡದ ಮೊದಲ ರಿಟೈನ್ ವಿರಾಟ್ ಕೊಹ್ಲಿ ಆಗಲಿದ್ದಾರೆ. ಕೊಹ್ಲಿಯನ್ನು ಫಸ್ಟ್ ರಿಟೆನ್ಷನ್ ಆಯ್ಕೆಯಲ್ಲಿ RCB ತಂಡದಲ್ಲೇ ಉಳಿಸಿಕೊಳ್ಳುವುದು ಖಚಿತ ಎಂದಿದ್ದಾರೆ ಆಕಾಶ್ ಚೋಪ್ರಾ.

5 / 8

ಇನ್ನು ಆರ್​ಸಿಬಿ ತಂಡದ 2ನೇ ಆಯ್ಕೆ ಕ್ಯಾಮರೋನ್ ಗ್ರೀನ್. ಆಸ್ಟ್ರೇಲಿಯಾದ ಆಲ್​ರೌಂಡರ್ ಗ್ರೀನ್ ಅವರನ್ನು ಆರ್​ಸಿಬಿ ಬಿಡುಗಡೆ ಮಾಡುವ ಸಾಧ್ಯತೆಯಿಲ್ಲ. ಹೀಗಾಗಿ ಅವರನ್ನು 2ನೇ ರಿಟೆನ್ಷನ್ ಆಯ್ಕೆಯಲ್ಲಿ ತಂಡದಲ್ಲೇ ಉಳಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

6 / 8

ಮೂರನೇ ರಿಟೆನ್ಷನ್​ನಲ್ಲಿ ಯುವ ದಾಂಡಿಗ ರಜತ್ ಪಾಟಿದಾರ್ ಆಯ್ಕೆಯಾಗಲಿದ್ದಾರೆ. ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಕಾರಣ ಪಾಟಿದಾರ್ ಅವರನ್ನು ಬೆಂಗಳೂರು ಫ್ರಾಂಚೈಸಿ ಕೈ ಬಿಡುವ ಸಾಧ್ಯತೆಯಿಲ್ಲ ಎಂದು ಚೋಪ್ರಾ ಹೇಳಿದ್ದಾರೆ.

7 / 8

ಆರ್​ಸಿಬಿ ಫ್ರಾಂಚೈಸಿಯು ನಾಲ್ಕನೇ ಆಯ್ಕೆಯಲ್ಲಿ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉಳಿಸಿಕೊಳ್ಳಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ. ದಯಾಳ್ ಅನ್​ಕ್ಯಾಪ್ಡ್ ಆಟಗಾರನಾಗಿ ಕಾರಣ ಆರ್​ಸಿಬಿ ಅವರನ್ನು ಅನ್​ಕ್ಯಾಪ್ಡ್ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಲಿದೆ.

8 / 8

ಇನ್ನು ಆರ್​ಸಿಬಿ ಫ್ರಾಂಚೈಸಿಯು ಮೊಹಮ್ಮದ್ ಸಿರಾಜ್ ಹಾಗೂ ವಿಲ್ ಜಾಕ್ಸ್ ಮೇಲೆ ಆರ್​ಟಿಎಂ ಆಯ್ಕೆಯನ್ನು ಬಳಸಲಿದೆ. ಇವರಿಬ್ಬರನ್ನು ಆರ್​ಟಿಎಂ ಆಯ್ಕೆಯಡಿಯಲ್ಲಿ ಹರಾಜಿಗೆ ಬಿಟ್ಟು, ಆ ಬಳಿಕ ಮತ್ತೆ ಖರೀದಿಸುವ ಸಾಧ್ಯತೆಯಿದೆ. ಈ ಮೂಲಕ 4+2 ಸೂತ್ರದ ಅಡಿಯಲ್ಲಿ ಆರ್​ಸಿಬಿ ಈ 6 ಆಟಗಾರರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

Loading...
Unable to load recommendations.
Follow Us