AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಿಲ್ಲರ್ ಮಿಲ್ಲರ್​ನ ಖರೀದಿಸಲು RCBಗೆ ಎಬಿಡಿ ಸಲಹೆ

IPL 2025 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಮೂವರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಇದೀಗ ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಹಾಗೂ ಯಶ್ ದಯಾಳ್ ಉಳಿದುಕೊಂಡಿದ್ದಾರೆ. ಇನ್ನು ಮೆಗಾ ಹರಾಜಿನ ಮೂಲಕ ಆರ್​ಸಿಬಿ 22 ಆಟಗಾರರನ್ನು ಖರೀದಿಸಬಹುದು.

ಝಾಹಿರ್ ಯೂಸುಫ್
|

Updated on: Nov 18, 2024 | 7:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮೆಗಾ ಹರಾಜಿಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಹರಾಜಿಗಾಗಿ ಎಲ್ಲಾ ಫ್ರಾಂಚೈಸಿಗಳು ಇದೀಗ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಈ ಪ್ಲ್ಯಾನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾರನ್ನು ಖರೀದಿಸಬೇಕೆಂದು ಮಾಜಿ ಆಟಗಾರ ಎಬಿಡಿ ಡಿವಿಲಿಯರ್ಸ್ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮೆಗಾ ಹರಾಜಿಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಹರಾಜಿಗಾಗಿ ಎಲ್ಲಾ ಫ್ರಾಂಚೈಸಿಗಳು ಇದೀಗ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಈ ಪ್ಲ್ಯಾನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾರನ್ನು ಖರೀದಿಸಬೇಕೆಂದು ಮಾಜಿ ಆಟಗಾರ ಎಬಿಡಿ ಡಿವಿಲಿಯರ್ಸ್ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.

1 / 5
ಪ್ರಸ್ತುತ ಆರ್​ಸಿಬಿ ತಂಡಕ್ಕೆ ಫಿನಿಶರ್ ಒಬ್ಬರ ಅಗತ್ಯವಿದೆ. ಹೀಗಾಗಿ 6ನೇ ಕ್ರಮಾಂಕಕ್ಕಾಗಿ ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್ ಅವರನ್ನು ಖರೀದಿಸಬೇಕು. ಆರ್‌ಸಿಬಿ ಅವರನ್ನು ಹರಾಜಿನಲ್ಲಿ ಖರೀದಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಿಲ್ಲರ್ ಆಗಮನದಿಂದಾಗಿ ಆರ್​ಸಿಬಿ ತಂಡವು ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

ಪ್ರಸ್ತುತ ಆರ್​ಸಿಬಿ ತಂಡಕ್ಕೆ ಫಿನಿಶರ್ ಒಬ್ಬರ ಅಗತ್ಯವಿದೆ. ಹೀಗಾಗಿ 6ನೇ ಕ್ರಮಾಂಕಕ್ಕಾಗಿ ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್ ಅವರನ್ನು ಖರೀದಿಸಬೇಕು. ಆರ್‌ಸಿಬಿ ಅವರನ್ನು ಹರಾಜಿನಲ್ಲಿ ಖರೀದಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಿಲ್ಲರ್ ಆಗಮನದಿಂದಾಗಿ ಆರ್​ಸಿಬಿ ತಂಡವು ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

2 / 5
ಡೇವಿಡ್ ಮಿಲ್ಲರ್ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ ಇದುವರೆಗೆ 130 ಪಂದ್ಯಗಳನ್ನಾಡಿರುವ ಅವರು 36.55 ರ ಸರಾಸರಿಯಲ್ಲಿ 2924 ರನ್ ಗಳಿಸಿದ್ದಾರೆ. ಇದರಲ್ಲಿ 13 ಅರ್ಧ ಶತಕ ಮತ್ತು 1 ಶತಕವನ್ನು ಗಳಿಸಿದ್ದಾರೆ. ಇನ್ನು 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಂಚುರಿ ಸಿಡಿಸಿದ್ದರು.

ಡೇವಿಡ್ ಮಿಲ್ಲರ್ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ ಇದುವರೆಗೆ 130 ಪಂದ್ಯಗಳನ್ನಾಡಿರುವ ಅವರು 36.55 ರ ಸರಾಸರಿಯಲ್ಲಿ 2924 ರನ್ ಗಳಿಸಿದ್ದಾರೆ. ಇದರಲ್ಲಿ 13 ಅರ್ಧ ಶತಕ ಮತ್ತು 1 ಶತಕವನ್ನು ಗಳಿಸಿದ್ದಾರೆ. ಇನ್ನು 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಂಚುರಿ ಸಿಡಿಸಿದ್ದರು.

3 / 5
ಇದೀಗ ಮೆಗಾ ಹರಾಜಿನಲ್ಲಿರುವ ಕಿಲ್ಲರ್ ಮಿಲ್ಲರ್ ಖ್ಯಾತಿಯ ಸೌತ್ ಆಫ್ರಿಕಾ ಫಿನಿಶರ್ ಅನ್ನು ಆರ್​ಸಿಬಿ ತಂಡ ಖರೀದಿಸುವುದು ಉತ್ತಮ. ಈ ಮೂಲಕ ಬ್ಯಾಟಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಬಹುದು ಎಂದು ಎಬಿ ಡಿವಿಲಿಯರ್ಸ್ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಆರ್​ಸಿಬಿ ಗಂಭೀರವಾಗಿ ಪರಿಗಣನಿಸಲಿದೆಯಾ ಎಂಬುದು ಈ ಬಾರಿಯ ಮೆಗಾ ಹರಾಜಿನಿಂದ ತಿಳಿದು ಬರಲಿದೆ.

ಇದೀಗ ಮೆಗಾ ಹರಾಜಿನಲ್ಲಿರುವ ಕಿಲ್ಲರ್ ಮಿಲ್ಲರ್ ಖ್ಯಾತಿಯ ಸೌತ್ ಆಫ್ರಿಕಾ ಫಿನಿಶರ್ ಅನ್ನು ಆರ್​ಸಿಬಿ ತಂಡ ಖರೀದಿಸುವುದು ಉತ್ತಮ. ಈ ಮೂಲಕ ಬ್ಯಾಟಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಬಹುದು ಎಂದು ಎಬಿ ಡಿವಿಲಿಯರ್ಸ್ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಆರ್​ಸಿಬಿ ಗಂಭೀರವಾಗಿ ಪರಿಗಣನಿಸಲಿದೆಯಾ ಎಂಬುದು ಈ ಬಾರಿಯ ಮೆಗಾ ಹರಾಜಿನಿಂದ ತಿಳಿದು ಬರಲಿದೆ.

4 / 5
ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

5 / 5
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ