AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಕಿಲ್ಲರ್ ಮಿಲ್ಲರ್​ನ ಖರೀದಿಸಲು RCBಗೆ ಎಬಿಡಿ ಸಲಹೆ

IPL 2025 Mega Auction: ಐಪಿಎಲ್ ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಮೂವರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಇದೀಗ ತಂಡದಲ್ಲಿ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಹಾಗೂ ಯಶ್ ದಯಾಳ್ ಉಳಿದುಕೊಂಡಿದ್ದಾರೆ. ಇನ್ನು ಮೆಗಾ ಹರಾಜಿನ ಮೂಲಕ ಆರ್​ಸಿಬಿ 22 ಆಟಗಾರರನ್ನು ಖರೀದಿಸಬಹುದು.

ಝಾಹಿರ್ ಯೂಸುಫ್
|

Updated on: Nov 18, 2024 | 7:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮೆಗಾ ಹರಾಜಿಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಹರಾಜಿಗಾಗಿ ಎಲ್ಲಾ ಫ್ರಾಂಚೈಸಿಗಳು ಇದೀಗ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಈ ಪ್ಲ್ಯಾನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾರನ್ನು ಖರೀದಿಸಬೇಕೆಂದು ಮಾಜಿ ಆಟಗಾರ ಎಬಿಡಿ ಡಿವಿಲಿಯರ್ಸ್ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಮೆಗಾ ಹರಾಜಿಗೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಈ ಹರಾಜಿಗಾಗಿ ಎಲ್ಲಾ ಫ್ರಾಂಚೈಸಿಗಳು ಇದೀಗ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ. ಈ ಪ್ಲ್ಯಾನ್​ಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಯಾರನ್ನು ಖರೀದಿಸಬೇಕೆಂದು ಮಾಜಿ ಆಟಗಾರ ಎಬಿಡಿ ಡಿವಿಲಿಯರ್ಸ್ ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.

1 / 5
ಪ್ರಸ್ತುತ ಆರ್​ಸಿಬಿ ತಂಡಕ್ಕೆ ಫಿನಿಶರ್ ಒಬ್ಬರ ಅಗತ್ಯವಿದೆ. ಹೀಗಾಗಿ 6ನೇ ಕ್ರಮಾಂಕಕ್ಕಾಗಿ ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್ ಅವರನ್ನು ಖರೀದಿಸಬೇಕು. ಆರ್‌ಸಿಬಿ ಅವರನ್ನು ಹರಾಜಿನಲ್ಲಿ ಖರೀದಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಿಲ್ಲರ್ ಆಗಮನದಿಂದಾಗಿ ಆರ್​ಸಿಬಿ ತಂಡವು ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

ಪ್ರಸ್ತುತ ಆರ್​ಸಿಬಿ ತಂಡಕ್ಕೆ ಫಿನಿಶರ್ ಒಬ್ಬರ ಅಗತ್ಯವಿದೆ. ಹೀಗಾಗಿ 6ನೇ ಕ್ರಮಾಂಕಕ್ಕಾಗಿ ಸೌತ್ ಆಫ್ರಿಕಾದ ಸ್ಪೋಟಕ ದಾಂಡಿಗ ಡೇವಿಡ್ ಮಿಲ್ಲರ್ ಅವರನ್ನು ಖರೀದಿಸಬೇಕು. ಆರ್‌ಸಿಬಿ ಅವರನ್ನು ಹರಾಜಿನಲ್ಲಿ ಖರೀದಿಸುತ್ತದೆ ಎಂದು ನಾನು ಭಾವಿಸುತ್ತೇನೆ. ಮಿಲ್ಲರ್ ಆಗಮನದಿಂದಾಗಿ ಆರ್​ಸಿಬಿ ತಂಡವು ಮತ್ತಷ್ಟು ಬಲಿಷ್ಠವಾಗಲಿದೆ ಎಂದು ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್​ನಲ್ಲಿ ಹೇಳಿದ್ದಾರೆ.

2 / 5
ಡೇವಿಡ್ ಮಿಲ್ಲರ್ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ ಇದುವರೆಗೆ 130 ಪಂದ್ಯಗಳನ್ನಾಡಿರುವ ಅವರು 36.55 ರ ಸರಾಸರಿಯಲ್ಲಿ 2924 ರನ್ ಗಳಿಸಿದ್ದಾರೆ. ಇದರಲ್ಲಿ 13 ಅರ್ಧ ಶತಕ ಮತ್ತು 1 ಶತಕವನ್ನು ಗಳಿಸಿದ್ದಾರೆ. ಇನ್ನು 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಂಚುರಿ ಸಿಡಿಸಿದ್ದರು.

ಡೇವಿಡ್ ಮಿಲ್ಲರ್ ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿದಿದ್ದರು. ಅಲ್ಲದೆ ಇದುವರೆಗೆ 130 ಪಂದ್ಯಗಳನ್ನಾಡಿರುವ ಅವರು 36.55 ರ ಸರಾಸರಿಯಲ್ಲಿ 2924 ರನ್ ಗಳಿಸಿದ್ದಾರೆ. ಇದರಲ್ಲಿ 13 ಅರ್ಧ ಶತಕ ಮತ್ತು 1 ಶತಕವನ್ನು ಗಳಿಸಿದ್ದಾರೆ. ಇನ್ನು 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೆಂಚುರಿ ಸಿಡಿಸಿದ್ದರು.

3 / 5
ಇದೀಗ ಮೆಗಾ ಹರಾಜಿನಲ್ಲಿರುವ ಕಿಲ್ಲರ್ ಮಿಲ್ಲರ್ ಖ್ಯಾತಿಯ ಸೌತ್ ಆಫ್ರಿಕಾ ಫಿನಿಶರ್ ಅನ್ನು ಆರ್​ಸಿಬಿ ತಂಡ ಖರೀದಿಸುವುದು ಉತ್ತಮ. ಈ ಮೂಲಕ ಬ್ಯಾಟಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಬಹುದು ಎಂದು ಎಬಿ ಡಿವಿಲಿಯರ್ಸ್ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಆರ್​ಸಿಬಿ ಗಂಭೀರವಾಗಿ ಪರಿಗಣನಿಸಲಿದೆಯಾ ಎಂಬುದು ಈ ಬಾರಿಯ ಮೆಗಾ ಹರಾಜಿನಿಂದ ತಿಳಿದು ಬರಲಿದೆ.

ಇದೀಗ ಮೆಗಾ ಹರಾಜಿನಲ್ಲಿರುವ ಕಿಲ್ಲರ್ ಮಿಲ್ಲರ್ ಖ್ಯಾತಿಯ ಸೌತ್ ಆಫ್ರಿಕಾ ಫಿನಿಶರ್ ಅನ್ನು ಆರ್​ಸಿಬಿ ತಂಡ ಖರೀದಿಸುವುದು ಉತ್ತಮ. ಈ ಮೂಲಕ ಬ್ಯಾಟಿಂಗ್ ಲೈನಪ್​ ಅನ್ನು ಮತ್ತಷ್ಟು ಬಲಿಷ್ಠಗೊಳಿಸಬಹುದು ಎಂದು ಎಬಿ ಡಿವಿಲಿಯರ್ಸ್ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಆರ್​ಸಿಬಿ ಗಂಭೀರವಾಗಿ ಪರಿಗಣನಿಸಲಿದೆಯಾ ಎಂಬುದು ಈ ಬಾರಿಯ ಮೆಗಾ ಹರಾಜಿನಿಂದ ತಿಳಿದು ಬರಲಿದೆ.

4 / 5
ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

5 / 5
Follow Us
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ