AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: 10 ಪಂದ್ಯದಲ್ಲಿ 8 ಶತಕ: ಐಪಿಎಲ್ ಮೆಗಾ ಹರಾಜಿನಲ್ಲಿ ‘ಅಗ್ನಿ’

IPL 2025 Mega Auction: ನವೆಂಬರ್ 24 ಮತ್ತು 25 ರಂದು ನಡೆಯಲಿರುವ ಐಪಿಎಲ್ ಮೆಗಾ ಹರಾಜಿಗಾಗಿ ಬರೋಬ್ಬರಿ 1574 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 1,165 ಭಾರತೀಯ ಆಟಗಾರರಿದ್ದರೆ, 409 ವಿದೇಶಿ ಆಟಗಾರರಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 13, 2024 | 11:54 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಯುವ ಆಟಗಾರ ಅಗ್ನಿ ಚೋಪ್ರಾ ಕೂಡ ಕಾಣಿಸಿಕೊಳ್ಳಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರ ಮೆಗಾ ಹರಾಜು ನವೆಂಬರ್ 24 ಮತ್ತು 25 ರಂದು ನಡೆಯಲಿದೆ. ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆಯಲಿರುವ ಈ ಹರಾಜಿನಲ್ಲಿ ಯುವ ಆಟಗಾರ ಅಗ್ನಿ ಚೋಪ್ರಾ ಕೂಡ ಕಾಣಿಸಿಕೊಳ್ಳಲಿದ್ದಾರೆ.

1 / 5
ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮನೆಮಾತಾಗಿರುವ ಅಗ್ನಿ ಚೋಪ್ರಾ ಐಪಿಎಲ್ ಮೆಗಾ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

ದೇಶೀಯ ಅಂಗಳದಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಮನೆಮಾತಾಗಿರುವ ಅಗ್ನಿ ಚೋಪ್ರಾ ಐಪಿಎಲ್ ಮೆಗಾ ಹರಾಜಿಗಾಗಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅದು ಕೂಡ ಕೇವಲ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಎಂಬುದು ವಿಶೇಷ.

2 / 5
ಅಗ್ನಿ ಚೋಪ್ರಾ ಈಗಾಗಲೇ ರೆಡ್ ಬಾಲ್​ ಕ್ರಿಕೆಟ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಆಡಿರುವ 10 ಪಂದ್ಯಗಳಲ್ಲಿ 8 ಶತಕಗಳನ್ನು ಬಾರಿಸಿರುವ ಅಗ್ನಿ, 92.11 ಸರಾಸರಿಯೊಂದಿಗೆ 1658 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಅಗ್ನಿಯ ಖರೀದಿಗೆ ಒಂದಷ್ಟು ಫ್ರಾಂಚೈಸಿಗಳು ಆಸಕ್ತಿ ತೋರಲಿದೆ.

ಅಗ್ನಿ ಚೋಪ್ರಾ ಈಗಾಗಲೇ ರೆಡ್ ಬಾಲ್​ ಕ್ರಿಕೆಟ್​ನಲ್ಲಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಆಡಿರುವ 10 ಪಂದ್ಯಗಳಲ್ಲಿ 8 ಶತಕಗಳನ್ನು ಬಾರಿಸಿರುವ ಅಗ್ನಿ, 92.11 ಸರಾಸರಿಯೊಂದಿಗೆ 1658 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಅಗ್ನಿಯ ಖರೀದಿಗೆ ಒಂದಷ್ಟು ಫ್ರಾಂಚೈಸಿಗಳು ಆಸಕ್ತಿ ತೋರಲಿದೆ.

3 / 5
ಅದರಲ್ಲೂ ಅಗ್ನಿ ಚೋಪ್ರಾ ಖರೀದಿಗೆ ಗುಜರಾತ್ ಟೈಟಾನ್ಸ್ ಮುಂದಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅವರೊಂದಿಗಿನ ಗೆಳೆತನ. ಅಂದರೆ ಅಗ್ನಿ ಚೋಪ್ರಾ ಹಾಗೂ ಶುಭ್​ಮನ್ ಕ್ಲೋಸ್ ಫ್ರೆಂಡ್ಸ್. ಹೀಗಾಗಿ ಯಾವುದೇ ಫ್ರಾಂಚೈಸಿ ಖರೀದಿಸದೇ ಇದ್ದರೂ, ಗುಜರಾತ್ ಟೈಟಾನ್ಸ್​ ಅಗ್ನಿಗಾಗಿ ಬಿಡ್ಡಿಂಗ್ ನಡೆಸುವ ಸಾಧ್ಯತೆಯಿದೆ.

ಅದರಲ್ಲೂ ಅಗ್ನಿ ಚೋಪ್ರಾ ಖರೀದಿಗೆ ಗುಜರಾತ್ ಟೈಟಾನ್ಸ್ ಮುಂದಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಮುಖ್ಯ ಕಾರಣ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಅವರೊಂದಿಗಿನ ಗೆಳೆತನ. ಅಂದರೆ ಅಗ್ನಿ ಚೋಪ್ರಾ ಹಾಗೂ ಶುಭ್​ಮನ್ ಕ್ಲೋಸ್ ಫ್ರೆಂಡ್ಸ್. ಹೀಗಾಗಿ ಯಾವುದೇ ಫ್ರಾಂಚೈಸಿ ಖರೀದಿಸದೇ ಇದ್ದರೂ, ಗುಜರಾತ್ ಟೈಟಾನ್ಸ್​ ಅಗ್ನಿಗಾಗಿ ಬಿಡ್ಡಿಂಗ್ ನಡೆಸುವ ಸಾಧ್ಯತೆಯಿದೆ.

4 / 5
ಅಂದಹಾಗೆ ಅಗ್ನಿ ಚೋಪ್ರಾ ಬಾಲಿವುಡ್​ನ ಪ್ರಸಿದ್ಧ ನಿರ್ಮಾಪಕ/ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರ ಪುತ್ರ. ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೋ ಮುನ್ನಾಭಾಯ್, ಪಿಕೆ ಸೇರಿದಂತೆ ಹಲವು ಹಿಟ್​ ಸಿನಿಮಾಗಳನ್ನು ಅವರು ನಿರ್ಮಿಸಿದ್ದಾರೆ. ಅದರಲ್ಲೂ ಕಳೆದ ವರ್ಷದ ಬ್ಲಾಕ್ ಬಸ್ಟರ್ ಬಾಲಿವುಡ್ ಚಿತ್ರ 12th ಫೇಲ್ ಚಿತ್ರವನ್ನು ನಿರ್ದೇಶಿಸಿದ್ದು ವಿಧು ವಿನೋದ್ ಚೋಪ್ರಾ. ಅಂದರೆ ತಂದೆ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ, ಮಗ ಅಗ್ನಿ ಚೋಪ್ರಾ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿದ್ದಾರೆ.

ಅಂದಹಾಗೆ ಅಗ್ನಿ ಚೋಪ್ರಾ ಬಾಲಿವುಡ್​ನ ಪ್ರಸಿದ್ಧ ನಿರ್ಮಾಪಕ/ನಿರ್ದೇಶಕ ವಿಧು ವಿನೋದ್ ಚೋಪ್ರಾ ಅವರ ಪುತ್ರ. ಮುನ್ನಾಭಾಯ್ ಎಂಬಿಬಿಎಸ್, ಲಗೇ ರಹೋ ಮುನ್ನಾಭಾಯ್, ಪಿಕೆ ಸೇರಿದಂತೆ ಹಲವು ಹಿಟ್​ ಸಿನಿಮಾಗಳನ್ನು ಅವರು ನಿರ್ಮಿಸಿದ್ದಾರೆ. ಅದರಲ್ಲೂ ಕಳೆದ ವರ್ಷದ ಬ್ಲಾಕ್ ಬಸ್ಟರ್ ಬಾಲಿವುಡ್ ಚಿತ್ರ 12th ಫೇಲ್ ಚಿತ್ರವನ್ನು ನಿರ್ದೇಶಿಸಿದ್ದು ವಿಧು ವಿನೋದ್ ಚೋಪ್ರಾ. ಅಂದರೆ ತಂದೆ ಬಾಲಿವುಡ್​ನಲ್ಲಿ ಹೆಸರು ಮಾಡಿದರೆ, ಮಗ ಅಗ್ನಿ ಚೋಪ್ರಾ ಕ್ರಿಕೆಟ್ ಅಂಗಳದಲ್ಲಿ ಮಿಂಚುತ್ತಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ