AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅಂಗಳದಲ್ಲಿ ಅಶುತೋಷ್ ಶರ್ಮಾ

IPL 2025 Mega Auction: ಅಶುತೋಷ್ ಶರ್ಮಾ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದರು. ಈ ವೇಳೆ 9 ಇನಿಂಗ್ಸ್ ಆಡಿದ್ದ ಅವರು 15 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಒಟ್ಟು 189 ರನ್ ಚಚ್ಚಿದ್ದರು. ಇದೀಗ ಯುವ ಸ್ಪೋಟಕ ದಾಂಡಿಗನ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕಣ್ಣಿಟ್ಟಿದೆ.

ಝಾಹಿರ್ ಯೂಸುಫ್
|

Updated on: Nov 20, 2024 | 11:59 AM

Share
IPL 2025: ಐಪಿಎಲ್ ಮೆಗಾ ಹರಾಜಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಆರ್​ಸಿಬಿ ಕೆಲ ಆಟಗಾರರ ಟ್ರಯಲ್ಸ್ ನಡೆಸಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಶುತೋಷ್ ಶರ್ಮಾ ಕೂಡ ಕಾಣಿಸಿಕೊಂಡಿದ್ದಾರೆ.

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಆರ್​ಸಿಬಿ ಕೆಲ ಆಟಗಾರರ ಟ್ರಯಲ್ಸ್ ನಡೆಸಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಶುತೋಷ್ ಶರ್ಮಾ ಕೂಡ ಕಾಣಿಸಿಕೊಂಡಿದ್ದಾರೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್​ಸಿಬಿ ತಂಡದ ಟ್ರಯಲ್ಸ್​ನಲ್ಲಿ ಅಶುತೋಷ್ ಶರ್ಮಾ ಕೂಡ ಭಾಗವಹಿಸಿದ್ದು, ಈ ಮೂಲಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್​ಸಿಬಿ ತಂಡದ ಟ್ರಯಲ್ಸ್​ನಲ್ಲಿ ಅಶುತೋಷ್ ಶರ್ಮಾ ಕೂಡ ಭಾಗವಹಿಸಿದ್ದು, ಈ ಮೂಲಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

2 / 5
ಇತ್ತ ಪ್ರಮುಖ ಆಟಗಾರರೊಬ್ಬರು ಟ್ರಯಲ್ಸ್​ನಲ್ಲಿ ಭಾಗವಹಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಆರ್​ಸಿಬಿ ಉತ್ತಮ ಫಿನಿಶರ್​ನ ಹುಡುಕಾಟದಲ್ಲಿದ್ದು, ಹೀಗಾಗಿಯೇ ಅಶುತೋಷ್ ಅವರನ್ನು ಟ್ರಯಲ್ಸ್​ಗೆ ಕರೆಸಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಆರ್​ಸಿಬಿ ಅಶುತೋಷ್ ಖರೀದಿಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಪ್ರಮುಖ ಆಟಗಾರರೊಬ್ಬರು ಟ್ರಯಲ್ಸ್​ನಲ್ಲಿ ಭಾಗವಹಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಆರ್​ಸಿಬಿ ಉತ್ತಮ ಫಿನಿಶರ್​ನ ಹುಡುಕಾಟದಲ್ಲಿದ್ದು, ಹೀಗಾಗಿಯೇ ಅಶುತೋಷ್ ಅವರನ್ನು ಟ್ರಯಲ್ಸ್​ಗೆ ಕರೆಸಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಆರ್​ಸಿಬಿ ಅಶುತೋಷ್ ಖರೀದಿಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆ ಹೆಚ್ಚಿದೆ.

3 / 5
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಶುತೋಷ್ ಶರ್ಮಾ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 167ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 189 ರನ್ ಕಲೆಹಾಕಿದ್ದಾರೆ. ಅದರಲ್ಲೂ ಯುವ ದಾಂಡಿಗ ಪಂಜಾಬ್ ಕಿಂಗ್ಸ್ ತಂಡದ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಆರ್​ಸಿಬಿ ಕೂಡ ಅಶುತೋಷ್ ಶರ್ಮಾ ಮೇಲೆ ಕಣ್ಣಿಟ್ಟಿದೆ.

ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಶುತೋಷ್ ಶರ್ಮಾ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 167ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 189 ರನ್ ಕಲೆಹಾಕಿದ್ದಾರೆ. ಅದರಲ್ಲೂ ಯುವ ದಾಂಡಿಗ ಪಂಜಾಬ್ ಕಿಂಗ್ಸ್ ತಂಡದ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಆರ್​ಸಿಬಿ ಕೂಡ ಅಶುತೋಷ್ ಶರ್ಮಾ ಮೇಲೆ ಕಣ್ಣಿಟ್ಟಿದೆ.

4 / 5
ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

5 / 5
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್