AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅಂಗಳದಲ್ಲಿ ಅಶುತೋಷ್ ಶರ್ಮಾ

IPL 2025 Mega Auction: ಅಶುತೋಷ್ ಶರ್ಮಾ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದರು. ಈ ವೇಳೆ 9 ಇನಿಂಗ್ಸ್ ಆಡಿದ್ದ ಅವರು 15 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಒಟ್ಟು 189 ರನ್ ಚಚ್ಚಿದ್ದರು. ಇದೀಗ ಯುವ ಸ್ಪೋಟಕ ದಾಂಡಿಗನ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕಣ್ಣಿಟ್ಟಿದೆ.

ಝಾಹಿರ್ ಯೂಸುಫ್
|

Updated on: Nov 20, 2024 | 11:59 AM

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಆರ್​ಸಿಬಿ ಕೆಲ ಆಟಗಾರರ ಟ್ರಯಲ್ಸ್ ನಡೆಸಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಶುತೋಷ್ ಶರ್ಮಾ ಕೂಡ ಕಾಣಿಸಿಕೊಂಡಿದ್ದಾರೆ.

IPL 2025: ಐಪಿಎಲ್ ಮೆಗಾ ಹರಾಜಿಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಭರ್ಜರಿ ಸಿದ್ಧತೆಯಲ್ಲಿದೆ. ಈ ಸಿದ್ಧತೆಗಳ ನಡುವೆ ಆರ್​ಸಿಬಿ ಕೆಲ ಆಟಗಾರರ ಟ್ರಯಲ್ಸ್ ನಡೆಸಿದೆ. ಇದರಲ್ಲಿ ಪಂಜಾಬ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಶುತೋಷ್ ಶರ್ಮಾ ಕೂಡ ಕಾಣಿಸಿಕೊಂಡಿದ್ದಾರೆ.

1 / 5
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್​ಸಿಬಿ ತಂಡದ ಟ್ರಯಲ್ಸ್​ನಲ್ಲಿ ಅಶುತೋಷ್ ಶರ್ಮಾ ಕೂಡ ಭಾಗವಹಿಸಿದ್ದು, ಈ ಮೂಲಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಆರ್​ಸಿಬಿ ತಂಡದ ಟ್ರಯಲ್ಸ್​ನಲ್ಲಿ ಅಶುತೋಷ್ ಶರ್ಮಾ ಕೂಡ ಭಾಗವಹಿಸಿದ್ದು, ಈ ಮೂಲಕ ತಮ್ಮ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿದ್ದಾರೆ.

2 / 5
ಇತ್ತ ಪ್ರಮುಖ ಆಟಗಾರರೊಬ್ಬರು ಟ್ರಯಲ್ಸ್​ನಲ್ಲಿ ಭಾಗವಹಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಆರ್​ಸಿಬಿ ಉತ್ತಮ ಫಿನಿಶರ್​ನ ಹುಡುಕಾಟದಲ್ಲಿದ್ದು, ಹೀಗಾಗಿಯೇ ಅಶುತೋಷ್ ಅವರನ್ನು ಟ್ರಯಲ್ಸ್​ಗೆ ಕರೆಸಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಆರ್​ಸಿಬಿ ಅಶುತೋಷ್ ಖರೀದಿಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆ ಹೆಚ್ಚಿದೆ.

ಇತ್ತ ಪ್ರಮುಖ ಆಟಗಾರರೊಬ್ಬರು ಟ್ರಯಲ್ಸ್​ನಲ್ಲಿ ಭಾಗವಹಿಸಿರುವುದರಿಂದ ನಿರೀಕ್ಷೆಗಳು ಹೆಚ್ಚಾಗಿವೆ. ಅದರಲ್ಲೂ ಆರ್​ಸಿಬಿ ಉತ್ತಮ ಫಿನಿಶರ್​ನ ಹುಡುಕಾಟದಲ್ಲಿದ್ದು, ಹೀಗಾಗಿಯೇ ಅಶುತೋಷ್ ಅವರನ್ನು ಟ್ರಯಲ್ಸ್​ಗೆ ಕರೆಸಿಕೊಂಡಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಮೆಗಾ ಹರಾಜಿನಲ್ಲಿ ಆರ್​ಸಿಬಿ ಅಶುತೋಷ್ ಖರೀದಿಗೆ ಬಿಡ್ಡಿಂಗ್ ನಡೆಸುವ ಸಾಧ್ಯತೆ ಹೆಚ್ಚಿದೆ.

3 / 5
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಶುತೋಷ್ ಶರ್ಮಾ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 167ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 189 ರನ್ ಕಲೆಹಾಕಿದ್ದಾರೆ. ಅದರಲ್ಲೂ ಯುವ ದಾಂಡಿಗ ಪಂಜಾಬ್ ಕಿಂಗ್ಸ್ ತಂಡದ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಆರ್​ಸಿಬಿ ಕೂಡ ಅಶುತೋಷ್ ಶರ್ಮಾ ಮೇಲೆ ಕಣ್ಣಿಟ್ಟಿದೆ.

ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅಶುತೋಷ್ ಶರ್ಮಾ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 167ರ ಸ್ಟ್ರೈಕ್ ರೇಟ್​ನಲ್ಲಿ ಒಟ್ಟು 189 ರನ್ ಕಲೆಹಾಕಿದ್ದಾರೆ. ಅದರಲ್ಲೂ ಯುವ ದಾಂಡಿಗ ಪಂಜಾಬ್ ಕಿಂಗ್ಸ್ ತಂಡದ ಫಿನಿಶಿಂಗ್ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಆರ್​ಸಿಬಿ ಕೂಡ ಅಶುತೋಷ್ ಶರ್ಮಾ ಮೇಲೆ ಕಣ್ಣಿಟ್ಟಿದೆ.

4 / 5
ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

ಇನ್ನು ಮೆಗಾ ಹರಾಜಿಗೂ ಮುನ್ನ ಆರ್​ಸಿಬಿ ಫ್ರಾಂಚೈಸಿ ಒಟ್ಟು ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಇಲ್ಲಿ ವಿರಾಟ್ ಕೊಹ್ಲಿಯನ್ನು 21 ಕೋಟಿ ರೂ. ನೀಡಿ ಉಳಿಸಿಕೊಂಡರೆ, ರಜತ್ ಪಾಟಿದಾರ್​ಗೆ 11 ಕೋಟಿ ರೂ. ನೀಡಲಾಗಿದೆ. ಹಾಗೆಯೇ ಯಶ್ ದಯಾಳ್ 5 ಕೋಟಿ ರೂ.ಗೆ ರಿಟೈನ್ ಆಗಿದ್ದಾರೆ. ಅಂದರೆ ಆರ್​ಸಿಬಿ ಫ್ರಾಂಚೈಸಿಯು ಮೂವರು ಆಟಗಾರರನ್ನು ಉಳಿಸಿಕೊಳ್ಳಲು 37 ಕೋಟಿ ರೂ. ಖರ್ಚು ಮಾಡಿದೆ. ಇನ್ನುಳಿದ 83 ಕೋಟಿ ರೂ. ನಲ್ಲಿ 22 ಆಟಗಾರರನ್ನು ಖರೀದಿಸಬಹುದು.

5 / 5
Follow us
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್