AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನನ್ನೂರು, ನಾನು ಕನ್ನಡಿಗ: RCBಗೆ ಬರುವ ಸೂಚನೆ ನೀಡಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಐಪಿಎಲ್ 2013 ಮತ್ತು 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 13, 2024 | 8:12 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ.

1 / 5
ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

2 / 5
ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

3 / 5
ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

4 / 5
ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದು, ಈ ಆಸೆಯು ಈ ಬಾರಿಯ ಮೆಗಾ ಹರಾಜಿನ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದು, ಈ ಆಸೆಯು ಈ ಬಾರಿಯ ಮೆಗಾ ಹರಾಜಿನ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:10 am, Wed, 13 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್