AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನನ್ನೂರು, ನಾನು ಕನ್ನಡಿಗ: RCBಗೆ ಬರುವ ಸೂಚನೆ ನೀಡಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಐಪಿಎಲ್ 2013 ಮತ್ತು 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 13, 2024 | 8:12 AM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ.

1 / 5
ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

2 / 5
ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

3 / 5
ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

4 / 5
ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದು, ಈ ಆಸೆಯು ಈ ಬಾರಿಯ ಮೆಗಾ ಹರಾಜಿನ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದು, ಈ ಆಸೆಯು ಈ ಬಾರಿಯ ಮೆಗಾ ಹರಾಜಿನ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:10 am, Wed, 13 November 24

Follow us
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್