AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನನ್ನೂರು, ನಾನು ಕನ್ನಡಿಗ: RCBಗೆ ಬರುವ ಸೂಚನೆ ನೀಡಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಐಪಿಎಲ್ 2013 ಮತ್ತು 2016 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Nov 13, 2024 | 8:12 AM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಖಚಿತವಾಗಿದೆ. ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಂದಿರುವ ರಾಹುಲ್ ಮೆಗಾ ಆಕ್ಷನ್​ನಲ್ಲಿ ಅದೃಷ್ಟ ಪರೀಕ್ಷಿಸಲಿದ್ದಾರೆ. ಈ ಅದೃಷ್ಟ ಪರೀಕ್ಷೆಯೊಂದಿಗೆ ಕನ್ನಡಿಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರಲಿದ್ದಾರಾ ಎಂಬುದೇ ಪ್ರಶ್ನೆ.

1 / 5
ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಏಕೆಂದರೆ ಕೆಎಲ್ ರಾಹುಲ್ ಈ ಹಿಂದಿನಿಂದಲೂ ತವರು ತಂಡದ ಪರ ಕಣಕ್ಕಿಳಿಯುವ ಇಂಗಿತ ವ್ಯಕ್ತಪಡಿಸುತ್ತಾ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಆರ್​ಸಿಬಿ ಜೊತೆಗಿನ ನಂಟನ್ನು ತಿಳಿಸಿರುವ ರಾಹುಲ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿಯುವ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

2 / 5
ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

ಖಾಸಗಿ ಚಾನೆಲ್​ವೊಂದರ ಸಂದರ್ಶನದಲ್ಲಿ ಮಾತನಾಡಿದ ಕೆಎಲ್ ರಾಹುಲ್, 2016 ರಲ್ಲಿ ಆರ್​ಸಿಬಿ ತಂಡದಲ್ಲಿದ್ದಾಗ, ನಾನು ಸಾಕಷ್ಟು ಎಂಜಾಯ್ ಮಾಡಿದ್ದೆ. ಅದರಲ್ಲೂ ಬೆಂಗಳೂರು ನನ್ನ ತವರೂರು. ಅಭಿಮಾನಿಗಳು ನನ್ನನ್ನು ಕನ್ನಡದ ಹುಡುಗ ಎಂದೇ ಕರೀತಾರೆ. ಈ ಎಲ್ಲಾ ಕಾರಣದಿಂದಾಗಿ ನನಗೆ ಬೆಂಗಳೂರು ಪರ ಕಣಕ್ಕಿಳಿಯುವುದು ವಿಶೇಷವಾಗಿತ್ತು ಎಂದು ತಿಳಿಸಿದ್ದಾರೆ.

3 / 5
ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

ಈ ಮೂಲಕ ಕೆಎಲ್ ರಾಹುಲ್ ಮತ್ತೆ ಆರ್​ಸಿಬಿ ಪರ ಕಣಕ್ಕಿಳಿಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಈ ಇಂಗಿತವನ್ನು ಪೂರೈಸಲು ಈ ಬಾರಿಯ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕನ್ನಡಿಗನ ಖರೀದಿಗೆ ಬಿಡ್ ಮಾಡುವುದು ಅತ್ಯುತ್ತಮ ಆಯ್ಕೆ. ಏಕೆಂದರೆ ನಾಯಕ ಫಾಫ್ ಡುಪ್ಲೆಸಿಸ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದು, ಹಾಗೆಯೇ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಆಯ್ಕೆಯಿಂದ ಆರ್​ಸಿಬಿ ಇಬ್ಬರ ಸ್ಥಾನವನ್ನು ತುಂಬಬಹುದು.

4 / 5
ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದು, ಈ ಆಸೆಯು ಈ ಬಾರಿಯ ಮೆಗಾ ಹರಾಜಿನ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

ಅಂದಹಾಗೆ ಕೆಎಲ್ ರಾಹುಲ್ ಆರ್​ಸಿಬಿ ಪರ ಒಟ್ಟು 19 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 14 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು 4 ಅರ್ಧಶತಕಗಳೊಂದಿಗೆ ಒಟ್ಟು 417 ರನ್ ಕಲೆಹಾಕಿದ್ದಾರೆ. ಇದೀಗ ರಾಹುಲ್ ಮತ್ತೆ ತವರು ತಂಡದ ಪರ ಕಣಕ್ಕಿಳಿಯುವ ಇರಾದೆಯಲ್ಲಿದ್ದು, ಈ ಆಸೆಯು ಈ ಬಾರಿಯ ಮೆಗಾ ಹರಾಜಿನ ಮೂಲಕ ಈಡೇರಲಿದೆಯಾ ಕಾದು ನೋಡಬೇಕಿದೆ.

5 / 5

Published On - 8:10 am, Wed, 13 November 24

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ