IPL 2025: ಧೋನಿಯ ಸಂಭಾವನೆ ಕಡಿತ: ಅತೀ ಕಡಿಮೆ ಮೊತ್ತ ಪಡೆಯಲಿರುವ MSD

IPL 2025: ಐಪಿಎಲ್ 2025ರ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ ಐವರು ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡುವ ಸಾಧ್ಯತೆಯಿದೆ. ಈ ಐವರು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ನಿರ್ದಿಷ್ಟ ಮೊತ್ತವನ್ನು ವ್ಯಯಿಸಬೇಕಾಗುತ್ತದೆ. ಹೀಗೆ ನಿಗದಿತ ಮೊತ್ತದೊಳಗೆ ಐವರು ಆಟಗಾರರ ಸಂಭಾವನೆ ನೀಡಬೇಕಾಗುತ್ತದೆ.

|

Updated on: Sep 26, 2024 | 10:17 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18ರ ಮೆಗಾ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ. ಈ ಐವರು ಆಟಗಾರರಲ್ಲಿ ಅತೀ ಕಡಿಮೆ ಹಣ ಪಡೆಯಲಿರುವುದು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎನ್ನಲಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18ರ ಮೆಗಾ ಹರಾಜಿಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 5 ಆಟಗಾರರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂದು ವರದಿಯಾಗಿದೆ. ಈ ಐವರು ಆಟಗಾರರಲ್ಲಿ ಅತೀ ಕಡಿಮೆ ಹಣ ಪಡೆಯಲಿರುವುದು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಎನ್ನಲಾಗಿದೆ.

1 / 6
ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಡೆಯಿಂದ ಧೋನಿ ಪ್ರಸ್ತುತ ಪಡೆಯುತ್ತಿರುವ ಮೊತ್ತ 12 ಕೋಟಿ ರೂ. 2022ರ ಹರಾಜಿನ ವೇಳೆ ಸಿಎಸ್​ಕೆ 2ನೇ ಆಟಗಾರನಾಗಿ ಧೋನಿಯನ್ನು ರಿಟೈನ್ ಮಾಡಿಕೊಂಡಿತ್ತು. ಅದರಂತೆ ಮೊದಲಿಗನಾಗಿ ರಿಟೈನ್ ಆಗಿದ್ದ ರವೀಂದ್ರ ಜಡೇಜಾ 16 ಕೋಟಿ ರೂ. ಪಡೆದರೆ, ಧೋನಿಗೆ 12 ಕೋಟಿ ರೂ. ನೀಡಲಾಗಿತ್ತು.

ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಕಡೆಯಿಂದ ಧೋನಿ ಪ್ರಸ್ತುತ ಪಡೆಯುತ್ತಿರುವ ಮೊತ್ತ 12 ಕೋಟಿ ರೂ. 2022ರ ಹರಾಜಿನ ವೇಳೆ ಸಿಎಸ್​ಕೆ 2ನೇ ಆಟಗಾರನಾಗಿ ಧೋನಿಯನ್ನು ರಿಟೈನ್ ಮಾಡಿಕೊಂಡಿತ್ತು. ಅದರಂತೆ ಮೊದಲಿಗನಾಗಿ ರಿಟೈನ್ ಆಗಿದ್ದ ರವೀಂದ್ರ ಜಡೇಜಾ 16 ಕೋಟಿ ರೂ. ಪಡೆದರೆ, ಧೋನಿಗೆ 12 ಕೋಟಿ ರೂ. ನೀಡಲಾಗಿತ್ತು.

2 / 6
ಇದೀಗ ಐಪಿಎಲ್ 2025 ರಲ್ಲಿ ಧೋನಿ ಅತೀ ಕಡಿಮೆ ಮೊತ್ತಕ್ಕೆ ರಿಟೈನ್ ಆಗಲಿದ್ದಾರೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ಅವರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುತ್ತಿರುವುದು. ಅಂದರೆ ಐಪಿಎಲ್​ನಲ್ಲಿ ರಿಟೇನ್ಷನ್ ಪಟ್ಟಿಯಲ್ಲಿ ಅನ್​ಕ್ಯಾಪ್ಡ್ ಆಟಗಾರನಾಗಿ ಆಯ್ಕೆಯಾಗುವ ಪ್ಲೇಯರ್​ಗೆ ಕಡಿಮೆ ಹಣ ನೀಡಲಾಗುತ್ತದೆ.

ಇದೀಗ ಐಪಿಎಲ್ 2025 ರಲ್ಲಿ ಧೋನಿ ಅತೀ ಕಡಿಮೆ ಮೊತ್ತಕ್ಕೆ ರಿಟೈನ್ ಆಗಲಿದ್ದಾರೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ಇದಕ್ಕೆ ಮುಖ್ಯ ಕಾರಣ ಅವರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುತ್ತಿರುವುದು. ಅಂದರೆ ಐಪಿಎಲ್​ನಲ್ಲಿ ರಿಟೇನ್ಷನ್ ಪಟ್ಟಿಯಲ್ಲಿ ಅನ್​ಕ್ಯಾಪ್ಡ್ ಆಟಗಾರನಾಗಿ ಆಯ್ಕೆಯಾಗುವ ಪ್ಲೇಯರ್​ಗೆ ಕಡಿಮೆ ಹಣ ನೀಡಲಾಗುತ್ತದೆ.

3 / 6
2022ರ ಹರಾಜಿನ ನಿಯಮದ ಪ್ರಕಾರ ಅನ್​ಕ್ಯಾಪ್ಡ್ ರಿಟೈನ್ ಆಟಗಾರನಿಗೆ ಕೇವಲ 4 ಕೋಟಿ ರೂ. ನಿಗದಿ ಮಾಡಲಾಗಿತ್ತು. ಈ ಬಾರಿ ಕೂಡ 4 ಕೋಟಿ ಅಥವಾ 5 ಕೋಟಿ ರೂ. ನಿಗದಿಪಡಿಸುವ ಸಾಧ್ಯತೆಯಿದೆ. ಇದರಿಂದಾಗಿ ಮಹೇಂದ್ರ ಸಿಂಗ್ ಧೋನಿ ಅವರ ಸಂಭಾವನೆ ಮೊತ್ತ ಕಡಿಮೆಯಾಗಲಿರುವುದು ಬಹುತೇಕ ಖಚಿತ.

2022ರ ಹರಾಜಿನ ನಿಯಮದ ಪ್ರಕಾರ ಅನ್​ಕ್ಯಾಪ್ಡ್ ರಿಟೈನ್ ಆಟಗಾರನಿಗೆ ಕೇವಲ 4 ಕೋಟಿ ರೂ. ನಿಗದಿ ಮಾಡಲಾಗಿತ್ತು. ಈ ಬಾರಿ ಕೂಡ 4 ಕೋಟಿ ಅಥವಾ 5 ಕೋಟಿ ರೂ. ನಿಗದಿಪಡಿಸುವ ಸಾಧ್ಯತೆಯಿದೆ. ಇದರಿಂದಾಗಿ ಮಹೇಂದ್ರ ಸಿಂಗ್ ಧೋನಿ ಅವರ ಸಂಭಾವನೆ ಮೊತ್ತ ಕಡಿಮೆಯಾಗಲಿರುವುದು ಬಹುತೇಕ ಖಚಿತ.

4 / 6
ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವತ್ತರಾಗಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಲು ಅವಕಾಶ ನೀಡಬೇಕೆಂದು ಬಿಸಿಸಿಐಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮನವಿ ಮಾಡಿದೆ. ಈ ಕೋರಿಕೆಯಂತೆ ಈ ಬಾರಿ ಹೊಸ ನಿಯಮವು ಜಾರಿಯಾಗುವ ಸಾಧ್ಯತೆಯಿದೆ.

ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವತ್ತರಾಗಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್ ಆಟಗಾರರ ಪಟ್ಟಿಗೆ ಸೇರಿಸಿಕೊಳ್ಳಲು ಅವಕಾಶ ನೀಡಬೇಕೆಂದು ಬಿಸಿಸಿಐಗೆ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಮನವಿ ಮಾಡಿದೆ. ಈ ಕೋರಿಕೆಯಂತೆ ಈ ಬಾರಿ ಹೊಸ ನಿಯಮವು ಜಾರಿಯಾಗುವ ಸಾಧ್ಯತೆಯಿದೆ.

5 / 6
ಅದರಂತೆ 2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿರುವ ಧೋನಿ ಈ ಬಾರಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿಯೇ ಮಹೇಂದ್ರ ಸಿಂಗ್ ಧೋನಿಯ ರಿಟೈನ್ ಮೊತ್ತವು ಒಂದಂಕಿ ಕೋಟಿಗೆ ಸೀಮಿತವಾಗಲಿದೆ.

ಅದರಂತೆ 2020 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿರುವ ಧೋನಿ ಈ ಬಾರಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿಯೇ ಮಹೇಂದ್ರ ಸಿಂಗ್ ಧೋನಿಯ ರಿಟೈನ್ ಮೊತ್ತವು ಒಂದಂಕಿ ಕೋಟಿಗೆ ಸೀಮಿತವಾಗಲಿದೆ.

6 / 6
Follow us
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುನಿರತ್ನರಿಂದ ಅತ್ಯಾಚಾರ ಆರೋಪ;ವಿಕಾಸಸೌಧದಲ್ಲಿ ‘ಕೈ’ ಮುಖಂಡರಿಂದ ಶುದ್ಧೀಕರಣ
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!
ಮುಡಾ ಕೇಸ್: ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದ ಸಚಿವ ಜಮೀರ್​ಗೆ ಸಂಕಷ್ಟ!