AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗ್ಲೆನ್ ಮ್ಯಾಕ್ಸ್​ವೆಲ್​ ಮೇಲೆ CSK ಕಣ್ಣು..!

Glenn Maxwell: ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು 2021 ರಲ್ಲಿ. ಮೊದಲ ಸೀಸನ್​ನಲ್ಲೇ ಭರ್ಜರಿ ಪ್ರದರ್ಶನ ನೀಡಿದ್ದ ಮ್ಯಾಕ್ಸ್​ವೆಲ್ 15 ಪಂದ್ಯಗಳಿಂದ 513 ರನ್ ಕಲೆಹಾಕಿದ್ದರು. ಇದೇ ವೇಳೆ 6 ಅರ್ಧಶತಕಗಳನ್ನು ಸಹ ಸಿಡಿಸಿದ್ದರು. ಆದರೆ ಕಳೆದ ಸೀಸನ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 52 ರನ್​ಗಳು ಮಾತ್ರ. ಹೀಗಾಗಿಯೇ ಈ ಬಾರಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Aug 19, 2024 | 11:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಗುಡ್ ಬೈ ಹೇಳುವ ಸಾಧ್ಯತೆಯಿದೆ. ಇದನ್ನು ಪುಷ್ಠೀಕರಿಸುವಂತೆ ಮ್ಯಾಕ್ಸ್​ವೆಲ್ ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ತಂಡವನ್ನು ಅನ್​ಫಾಲೋ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಗುಡ್ ಬೈ ಹೇಳುವ ಸಾಧ್ಯತೆಯಿದೆ. ಇದನ್ನು ಪುಷ್ಠೀಕರಿಸುವಂತೆ ಮ್ಯಾಕ್ಸ್​ವೆಲ್ ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ತಂಡವನ್ನು ಅನ್​ಫಾಲೋ ಮಾಡಿದ್ದಾರೆ.

1 / 5
ಇತ್ತ ಆರ್​ಸಿಬಿ ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆಸೀಸ್ ಆಲ್​ರೌಂಡರ್​ನ ಖರೀದಿಗೆ ಆಸಕ್ತಿ ಹೊಂದಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ 2021ರಲ್ಲಿ ಕಂಡು ಬಂದ ಹರಾಜು ಪೈಪೋಟಿ. ಅಂದು ಮ್ಯಾಕ್ಸ್​ವೆಲ್​ಗಾಗಿ ಸಿಎಸ್​ಕೆ ಭಾರೀ ಬಿಡ್ಡಿಂಗ್ ನಡೆಸಿತ್ತು.

ಇತ್ತ ಆರ್​ಸಿಬಿ ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆಸೀಸ್ ಆಲ್​ರೌಂಡರ್​ನ ಖರೀದಿಗೆ ಆಸಕ್ತಿ ಹೊಂದಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ 2021ರಲ್ಲಿ ಕಂಡು ಬಂದ ಹರಾಜು ಪೈಪೋಟಿ. ಅಂದು ಮ್ಯಾಕ್ಸ್​ವೆಲ್​ಗಾಗಿ ಸಿಎಸ್​ಕೆ ಭಾರೀ ಬಿಡ್ಡಿಂಗ್ ನಡೆಸಿತ್ತು.

2 / 5
2021ರ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ಕೂಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ಬಿಡ್ಡಿಂಗ್ ಆರಂಭಿಸಿತ್ತು. ಇದರ ನಡುವೆ ಎಂಟ್ರಿ ಕೊಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪೈಪೋಟಿ ನೀಡಿತು. ಉಭಯ ಫ್ರಾಂಚೈಸಿಗಳ ನಡುವಣ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಮ್ಯಾಕ್ಸ್​ವೆಲ್ ಅವರ ಮೊತ್ತವು 10 ಕೋಟಿ ರೂ. ದಾಟಿದೆ.

2021ರ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ಕೂಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ಬಿಡ್ಡಿಂಗ್ ಆರಂಭಿಸಿತ್ತು. ಇದರ ನಡುವೆ ಎಂಟ್ರಿ ಕೊಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪೈಪೋಟಿ ನೀಡಿತು. ಉಭಯ ಫ್ರಾಂಚೈಸಿಗಳ ನಡುವಣ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಮ್ಯಾಕ್ಸ್​ವೆಲ್ ಅವರ ಮೊತ್ತವು 10 ಕೋಟಿ ರೂ. ದಾಟಿದೆ.

3 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಮ್ಯಾಕ್ಸ್​ವೆಲ್ ಅವರನ್ನು ಬಿಟ್ಟು ಕೊಡಲು ಸಿದ್ಧರಿರಲಿಲ್ಲ. ಅಂತಿಮವಾಗಿ 13.75 ಕೋಟಿವರೆಗೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬಿಡ್ ಮಾಡಿತು. ಕೊನೆಗೆ 14 ಕೋಟಿಯೊಂದಿಗೆ ಮ್ಯಾಕ್ಸಿಯನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು. ಅಂದರೆ ಸಿಎಸ್​ಕೆ ಫ್ರಾಂಚೈಸಿಯು ಆಸ್ಟ್ರೇಲಿಯಾ ಆಟಗಾರನಿಗಾಗಿ ಬರೋಬ್ಬರಿ 13.75 ಕೋಟಿ ರೂ. ನೀಡಲು ಮುಂದಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಮ್ಯಾಕ್ಸ್​ವೆಲ್ ಅವರನ್ನು ಬಿಟ್ಟು ಕೊಡಲು ಸಿದ್ಧರಿರಲಿಲ್ಲ. ಅಂತಿಮವಾಗಿ 13.75 ಕೋಟಿವರೆಗೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬಿಡ್ ಮಾಡಿತು. ಕೊನೆಗೆ 14 ಕೋಟಿಯೊಂದಿಗೆ ಮ್ಯಾಕ್ಸಿಯನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು. ಅಂದರೆ ಸಿಎಸ್​ಕೆ ಫ್ರಾಂಚೈಸಿಯು ಆಸ್ಟ್ರೇಲಿಯಾ ಆಟಗಾರನಿಗಾಗಿ ಬರೋಬ್ಬರಿ 13.75 ಕೋಟಿ ರೂ. ನೀಡಲು ಮುಂದಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 5
ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಂಡರೆ ಸಿಎಸ್​ಕೆ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉತ್ತಮ ಆಲ್​​ರೌಂಡರ್​ನ ಅಗತ್ಯತೆ ಕೂಡ ಇದ್ದು, ಹಾಗಾಗಿ ಮೆಗಾ ಆಕ್ಷನ್ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಯೆಲ್ಲೋ ಆರ್ಮಿ ಪಾಲಾದರೂ ಅಚ್ಚರಿಪಡಬೇಕಿಲ್ಲ.

ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಂಡರೆ ಸಿಎಸ್​ಕೆ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉತ್ತಮ ಆಲ್​​ರೌಂಡರ್​ನ ಅಗತ್ಯತೆ ಕೂಡ ಇದ್ದು, ಹಾಗಾಗಿ ಮೆಗಾ ಆಕ್ಷನ್ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಯೆಲ್ಲೋ ಆರ್ಮಿ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5

Published On - 11:58 am, Mon, 19 August 24

Follow Us
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಫುಟ್​ಪಾತ್ ತೆರವು ವೇಳೆ ಜಿಬಿಎ ಸಿಬ್ಬಂದಿ ಮೇಲೆ ಪೆಪ್ಪರ್ ಸ್ಪ್ರೇ, ಹಲ್ಲೆ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ಚೆನ್ನಮ್ಮ ಸಮಾಧಿ ಬಳಿ ವಿಷ್ಣು ಸಹಸ್ರನಾಮ ಪಠಣ ವೇಳೆ ಗರುಡ ಪ್ರತ್ಯಕ್ಷ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ
ರಾಜಕಾಲುವೆ ಒತ್ತುವರಿದಾರರಿಗೂ ಶಾಕ್​​ ಕೊಡಲು ಮುಂದಾದ ಜಿಬಿಎ