Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಗ್ಲೆನ್ ಮ್ಯಾಕ್ಸ್​ವೆಲ್​ ಮೇಲೆ CSK ಕಣ್ಣು..!

Glenn Maxwell: ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು 2021 ರಲ್ಲಿ. ಮೊದಲ ಸೀಸನ್​ನಲ್ಲೇ ಭರ್ಜರಿ ಪ್ರದರ್ಶನ ನೀಡಿದ್ದ ಮ್ಯಾಕ್ಸ್​ವೆಲ್ 15 ಪಂದ್ಯಗಳಿಂದ 513 ರನ್ ಕಲೆಹಾಕಿದ್ದರು. ಇದೇ ವೇಳೆ 6 ಅರ್ಧಶತಕಗಳನ್ನು ಸಹ ಸಿಡಿಸಿದ್ದರು. ಆದರೆ ಕಳೆದ ಸೀಸನ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 10 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 52 ರನ್​ಗಳು ಮಾತ್ರ. ಹೀಗಾಗಿಯೇ ಈ ಬಾರಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ರಿಲೀಸ್ ಮಾಡುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Aug 19, 2024 | 11:58 AM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಗುಡ್ ಬೈ ಹೇಳುವ ಸಾಧ್ಯತೆಯಿದೆ. ಇದನ್ನು ಪುಷ್ಠೀಕರಿಸುವಂತೆ ಮ್ಯಾಕ್ಸ್​ವೆಲ್ ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ತಂಡವನ್ನು ಅನ್​ಫಾಲೋ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಗುಡ್ ಬೈ ಹೇಳುವ ಸಾಧ್ಯತೆಯಿದೆ. ಇದನ್ನು ಪುಷ್ಠೀಕರಿಸುವಂತೆ ಮ್ಯಾಕ್ಸ್​ವೆಲ್ ಸೋಷಿಯಲ್ ಮೀಡಿಯಾದಲ್ಲಿ ಆರ್​ಸಿಬಿ ತಂಡವನ್ನು ಅನ್​ಫಾಲೋ ಮಾಡಿದ್ದಾರೆ.

1 / 5
ಇತ್ತ ಆರ್​ಸಿಬಿ ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆಸೀಸ್ ಆಲ್​ರೌಂಡರ್​ನ ಖರೀದಿಗೆ ಆಸಕ್ತಿ ಹೊಂದಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ 2021ರಲ್ಲಿ ಕಂಡು ಬಂದ ಹರಾಜು ಪೈಪೋಟಿ. ಅಂದು ಮ್ಯಾಕ್ಸ್​ವೆಲ್​ಗಾಗಿ ಸಿಎಸ್​ಕೆ ಭಾರೀ ಬಿಡ್ಡಿಂಗ್ ನಡೆಸಿತ್ತು.

ಇತ್ತ ಆರ್​ಸಿಬಿ ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಹೊರಬೀಳಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಅತ್ತ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು ಆಸೀಸ್ ಆಲ್​ರೌಂಡರ್​ನ ಖರೀದಿಗೆ ಆಸಕ್ತಿ ಹೊಂದಿದೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ 2021ರಲ್ಲಿ ಕಂಡು ಬಂದ ಹರಾಜು ಪೈಪೋಟಿ. ಅಂದು ಮ್ಯಾಕ್ಸ್​ವೆಲ್​ಗಾಗಿ ಸಿಎಸ್​ಕೆ ಭಾರೀ ಬಿಡ್ಡಿಂಗ್ ನಡೆಸಿತ್ತು.

2 / 5
2021ರ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ಕೂಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ಬಿಡ್ಡಿಂಗ್ ಆರಂಭಿಸಿತ್ತು. ಇದರ ನಡುವೆ ಎಂಟ್ರಿ ಕೊಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪೈಪೋಟಿ ನೀಡಿತು. ಉಭಯ ಫ್ರಾಂಚೈಸಿಗಳ ನಡುವಣ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಮ್ಯಾಕ್ಸ್​ವೆಲ್ ಅವರ ಮೊತ್ತವು 10 ಕೋಟಿ ರೂ. ದಾಟಿದೆ.

2021ರ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹೆಸರು ಕೂಗುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ಬಿಡ್ಡಿಂಗ್ ಆರಂಭಿಸಿತ್ತು. ಇದರ ನಡುವೆ ಎಂಟ್ರಿ ಕೊಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪೈಪೋಟಿ ನೀಡಿತು. ಉಭಯ ಫ್ರಾಂಚೈಸಿಗಳ ನಡುವಣ ಜಿದ್ದಾಜಿದ್ದಿನ ಪೈಪೋಟಿಯಿಂದಾಗಿ ಮ್ಯಾಕ್ಸ್​ವೆಲ್ ಅವರ ಮೊತ್ತವು 10 ಕೋಟಿ ರೂ. ದಾಟಿದೆ.

3 / 5
ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಮ್ಯಾಕ್ಸ್​ವೆಲ್ ಅವರನ್ನು ಬಿಟ್ಟು ಕೊಡಲು ಸಿದ್ಧರಿರಲಿಲ್ಲ. ಅಂತಿಮವಾಗಿ 13.75 ಕೋಟಿವರೆಗೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬಿಡ್ ಮಾಡಿತು. ಕೊನೆಗೆ 14 ಕೋಟಿಯೊಂದಿಗೆ ಮ್ಯಾಕ್ಸಿಯನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು. ಅಂದರೆ ಸಿಎಸ್​ಕೆ ಫ್ರಾಂಚೈಸಿಯು ಆಸ್ಟ್ರೇಲಿಯಾ ಆಟಗಾರನಿಗಾಗಿ ಬರೋಬ್ಬರಿ 13.75 ಕೋಟಿ ರೂ. ನೀಡಲು ಮುಂದಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

ಇದಾಗ್ಯೂ ಸಿಎಸ್​ಕೆ ಫ್ರಾಂಚೈಸಿ ಮ್ಯಾಕ್ಸ್​ವೆಲ್ ಅವರನ್ನು ಬಿಟ್ಟು ಕೊಡಲು ಸಿದ್ಧರಿರಲಿಲ್ಲ. ಅಂತಿಮವಾಗಿ 13.75 ಕೋಟಿವರೆಗೂ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಬಿಡ್ ಮಾಡಿತು. ಕೊನೆಗೆ 14 ಕೋಟಿಯೊಂದಿಗೆ ಮ್ಯಾಕ್ಸಿಯನ್ನು ಖರೀದಿಸುವಲ್ಲಿ ಆರ್​ಸಿಬಿ ಯಶಸ್ವಿಯಾಯಿತು. ಅಂದರೆ ಸಿಎಸ್​ಕೆ ಫ್ರಾಂಚೈಸಿಯು ಆಸ್ಟ್ರೇಲಿಯಾ ಆಟಗಾರನಿಗಾಗಿ ಬರೋಬ್ಬರಿ 13.75 ಕೋಟಿ ರೂ. ನೀಡಲು ಮುಂದಾಗಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

4 / 5
ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಂಡರೆ ಸಿಎಸ್​ಕೆ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉತ್ತಮ ಆಲ್​​ರೌಂಡರ್​ನ ಅಗತ್ಯತೆ ಕೂಡ ಇದ್ದು, ಹಾಗಾಗಿ ಮೆಗಾ ಆಕ್ಷನ್ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಯೆಲ್ಲೋ ಆರ್ಮಿ ಪಾಲಾದರೂ ಅಚ್ಚರಿಪಡಬೇಕಿಲ್ಲ.

ಹೀಗಾಗಿಯೇ ಈ ಬಾರಿಯ ಮೆಗಾ ಹರಾಜಿನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಾಣಿಸಿಕೊಂಡರೆ ಸಿಎಸ್​ಕೆ ಬಿಡ್ಡಿಂಗ್ ನಡೆಸುವುದು ಖಚಿತ ಎನ್ನಲಾಗುತ್ತಿದೆ. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಉತ್ತಮ ಆಲ್​​ರೌಂಡರ್​ನ ಅಗತ್ಯತೆ ಕೂಡ ಇದ್ದು, ಹಾಗಾಗಿ ಮೆಗಾ ಆಕ್ಷನ್ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್ ಯೆಲ್ಲೋ ಆರ್ಮಿ ಪಾಲಾದರೂ ಅಚ್ಚರಿಪಡಬೇಕಿಲ್ಲ.

5 / 5

Published On - 11:58 am, Mon, 19 August 24

Follow us
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್