AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐದು ಐಪಿಎಲ್​ ತಂಡಗಳಿಗೆ ಹೊಸ ನಾಯಕರುಗಳು..!

IPL 2025: ಐಪಿಎಲ್ ಮೆಗಾ ಹರಾಜಿಗೂ ಮುನ್ನ 10 ಫ್ರಾಂಚೈಸಿಗಳು ಒಟ್ಟು 46 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಹಾಗೆಯೇ ಬಿಡುಗಡೆ ಮಾಡಿದ ಆಟಗಾರರಲ್ಲಿ ಐವರು ನಾಯಕರುಗಳಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ 5 ತಂಡಗಳ ನಾಯಕರುಗಳು ಬದಲಾಗುವುದು ಖಚಿತ ಎನ್ನಬಹುದು.

ಝಾಹಿರ್ ಯೂಸುಫ್
|

Updated on:Nov 02, 2024 | 11:57 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್​ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್​ಗಳು ಯಾರೆಂದರೆ....

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಲ್ಲಿ ಐದು ತಂಡಗಳ ನಾಯಕರುಗಳು ಬದಲಾಗುವುದು ಖಚಿತವಾಗಿದೆ. ಏಕೆಂದರೆ ಈ ಬಾರಿಯ ಮೆಗಾ ಹರಾಜಿಗೂ ಮುನ್ನ ಐದು ಫ್ರಾಂಚೈಸಿಗಳು ಕ್ಯಾಪ್ಟನ್​ಗಳನ್ನು ಬಿಡುಗಡೆ ಮಾಡಿದ್ದಾರೆ. ಆ ಕ್ಯಾಪ್ಟನ್​ಗಳು ಯಾರೆಂದರೆ....

1 / 7
1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.

1- ಫಾಫ್ ಡುಪ್ಲೆಸಿಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ನಾಯಕ ಫಾಫ್ ಡುಪ್ಲೆಸಿಸ್ ಅವರನ್ನು ಬಿಡುಗಡೆ ಮಾಡಿದೆ. ಕಳೆದ ಮೂರು ಸೀಸನ್​ಗಳಲ್ಲಿ ಫಾಫ್ ಆರ್​ಸಿಬಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಅವರು ತಂಡದಿಂದ ಹೊರಬಿದ್ದಿರುವ ಕಾರಣ ಮುಂದಿನ ಸೀಸನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತ ಎನ್ನಬಹುದು.

2 / 7
2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.

2- ಕೆಎಲ್ ರಾಹುಲ್: 2022 ರಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಎಲ್​ಎಸ್​ಜಿ ತಂಡವನ್ನು ನಿಕೋಲಸ್ ಪೂರನ್ ಮುನ್ನಡೆಸುವ ಸಾಧ್ಯತೆಯಿದೆ.

3 / 7
3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.

3- ರಿಷಭ್ ಪಂತ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಕೂಡ ಐಪಿಎಲ್ ಮೆಗಾ ಹರಾಜಿಗೆ ಎಂಟ್ರಿ ಕೊಟ್ಟಿದ್ದಾರೆ. ಹೀಗಾಗಿ ಸೀಸನ್-18 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹೊಸ ಕ್ಯಾಪ್ಟನ್ ಮುನ್ನಡೆಸುವುದು ಖಚಿತ ಎನ್ನಬಹುದು.

4 / 7
4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.

4- ಶ್ರೇಯಸ್ ಅಯ್ಯರ್: ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಶ್ರೇಯಸ್ ಅಯ್ಯರ್ ಕೂಡ ಈ ಬಾರಿಯ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಐಪಿಎಲ್ 2025 ರಲ್ಲಿ ಕೆಕೆಆರ್ ತಂಡಕ್ಕೆ ಹೊಸ ಕ್ಯಾಪ್ಟನ್ ಆಯ್ಕೆಯಾಗುವುದು ಖಚಿತ.

5 / 7
5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

5- ಶಿಖರ್ ಧವನ್: ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಐಪಿಎಲ್​ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಮುಂದಿನ ಸೀಸನ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದಿಲ್ಲ. ಅಲ್ಲದೆ ಐಪಿಎಲ್ 2025 ರಲ್ಲಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆಯಾಗಲಿದ್ದಾರೆ.

6 / 7
ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್​ಗಳ ಕ್ಯಾಪ್ಟನ್ಸ್​ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಅಂದರೆ ಈ ಮೇಲಿನ ಐದು ತಂಡಗಳನ್ನು ಹೊಸ ನಾಯಕರುಗಳು ಮುನ್ನಡೆಸುವುದು ಬಹುತೇಕ ಖಚಿತ. ಇದರ ಜೊತೆ ಉಳಿದ ಐದು ತಂಡಗಳಲ್ಲಿ ಕೆಲ ಟೀಮ್​ಗಳ ಕ್ಯಾಪ್ಟನ್ಸ್​ ಕೂಡ ಬದಲಾಗುವ ಸಾಧ್ಯತೆಯಿದೆ. ಹೀಗಾಗಿ ಮೆಗಾ ಹರಾಜಿನ ಬಳಿಕ ಯಾವೆಲ್ಲಾ ಫ್ರಾಂಚೈಸಿ ಹೊಸ ನಾಯಕರುಗಳೊಂದಿಗೆ ಹೊಸ ಅಭಿಯಾನ ಆರಂಭಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

7 / 7

Published On - 11:54 am, Sat, 2 November 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ