AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಪರ ಆಡ್ಬೇಕು, ಆರ್​ಸಿಬಿಗೆ ಕಪ್ ಗೆಲ್ಲಿಸಿ ಕೊಡ್ಬೇಕು: ಪ್ರಿಯಾಂಶ್ ಆರ್ಯ

Priyansh Arya: ಪ್ರಿಯಾಂಶ್ ಆರ್ಯ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿ ಅಬ್ಬರಿಸಿದ್ದಾರೆ. ಹಾಗೆಯೇ ಡಿಪಿಎಲ್​ನಲ್ಲಿ 2 ಶತಕ ಬಾರಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಐಪಿಎಲ್​ ಅವಕಾಶವನ್ನು ಎದುರು ನೋಡುತ್ತಿರುವ ಯುವ ದಾಂಡಿಗ ಆರ್​ಸಿಬಿ ಪರ ಕಣಕ್ಕಿಳಿಯಬೇಕೆಂಬ ಮನದಾಸೆಯನ್ನು ವ್ಯಕ್ತಪಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 03, 2024 | 9:03 AM

Share
ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಬೇಕು... ಅಲ್ಲದೆ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿರುವ ಐಪಿಎಲ್ ಟ್ರೋಫಿಯನ್ನು ಗೆದ್ದು ಕೊಡಬೇಕು... ಹೀಗಂದಿದ್ದು ಮತ್ಯಾರೂ ಅಲ್ಲ. ಡೆಲ್ಲಿ ಪ್ರೀಮಿಯರ್ ಲೀಗ್​ನ ಸಿಕ್ಸರ್ ಕಿಂಗ್ ಪ್ರಿಯಾಂಶ್ ಆರ್ಯ. ಪ್ರಸ್ತುತ ನಡೆಯುತ್ತಿರುವ ಡಿಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಪ್ರಿಯಾಂಶ್ ಆರ್​ಸಿಬಿ ಪರ ಆಡಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಬೇಕು... ಅಲ್ಲದೆ ಆರ್​ಸಿಬಿ ಪಾಲಿಗೆ ಮರೀಚಿಕೆಯಾಗಿರುವ ಐಪಿಎಲ್ ಟ್ರೋಫಿಯನ್ನು ಗೆದ್ದು ಕೊಡಬೇಕು... ಹೀಗಂದಿದ್ದು ಮತ್ಯಾರೂ ಅಲ್ಲ. ಡೆಲ್ಲಿ ಪ್ರೀಮಿಯರ್ ಲೀಗ್​ನ ಸಿಕ್ಸರ್ ಕಿಂಗ್ ಪ್ರಿಯಾಂಶ್ ಆರ್ಯ. ಪ್ರಸ್ತುತ ನಡೆಯುತ್ತಿರುವ ಡಿಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಪ್ರಿಯಾಂಶ್ ಆರ್​ಸಿಬಿ ಪರ ಆಡಬೇಕೆಂಬ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

1 / 5
ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ಪರ ಕಣಕ್ಕಿಳಿಯುತ್ತಿರುವ ಪ್ರಿಯಾಂಶ್ ಆರ್ಯ ಕೇವಲ 9 ಪಂದ್ಯಗಳಿಂದ 602 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್​ನಿಂದಲೇ ಗುರುತಿಸಿಕೊಂಡಿರುವ ಯುವ ಎಡಗೈ ದಾಂಡಿಗ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಚಾನ್ಸ್ ಸಿಗುವುದನ್ನು ಎದುರು ನೋಡುತ್ತಿದ್ದಾರೆ.

ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ಪರ ಕಣಕ್ಕಿಳಿಯುತ್ತಿರುವ ಪ್ರಿಯಾಂಶ್ ಆರ್ಯ ಕೇವಲ 9 ಪಂದ್ಯಗಳಿಂದ 602 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 4 ಅರ್ಧಶತಕಗಳನ್ನು ಸಿಡಿಸಿದ್ದಾರೆ. ತಮ್ಮ ಸ್ಪೋಟಕ ಬ್ಯಾಟಿಂಗ್​ನಿಂದಲೇ ಗುರುತಿಸಿಕೊಂಡಿರುವ ಯುವ ಎಡಗೈ ದಾಂಡಿಗ ಮುಂಬರುವ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಚಾನ್ಸ್ ಸಿಗುವುದನ್ನು ಎದುರು ನೋಡುತ್ತಿದ್ದಾರೆ.

2 / 5
ಈ ಬಗ್ಗೆ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಿಯಾಂಶ್, ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಹೀಗಾಗಿ ನಾನು ಸಹ ಆರ್​ಸಿಬಿ ಪರ ಆಡಲು ಬಯಸುತ್ತೇನೆ. ಅವಕಾಶ ಸಿಕ್ಕರೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವೆಬ್​ಸೈಟ್​ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಿಯಾಂಶ್, ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಹೀಗಾಗಿ ನಾನು ಸಹ ಆರ್​ಸಿಬಿ ಪರ ಆಡಲು ಬಯಸುತ್ತೇನೆ. ಅವಕಾಶ ಸಿಕ್ಕರೆ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ತಿಳಿಸಿದ್ದಾರೆ.

3 / 5
ಆರ್​ಸಿಬಿ ತಂಡವು ಈವರೆಗೆ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಈ ಕೊರತೆಯನ್ನು ನೀಗಿಸಬೇಕಿದೆ. ಅದಕ್ಕಾಗಿ ನಾನು ಬ್ಯಾಟಿಂಗ್​ ಮೂಲಕ ನನ್ನಿಂದಾದ ನೆರವು ನೀಡಬಲ್ಲೆ. ಈ ಮೂಲಕ ಆರ್​ಸಿಬಿಗೆ ಚೊಚ್ಚಲ ಟ್ರೋಫಿ ಗೆಲ್ಲಿಸಿಕೊಡಬೇಕೆಂಬ ಆಸೆಯಿದೆ ಎಂದು ಪ್ರಿಯಾಂಶ್ ಆರ್ಯ ತಿಳಿಸಿದ್ದಾರೆ.

ಆರ್​ಸಿಬಿ ತಂಡವು ಈವರೆಗೆ ಐಪಿಎಲ್ ಟ್ರೋಫಿ ಗೆದ್ದಿಲ್ಲ. ಈ ಕೊರತೆಯನ್ನು ನೀಗಿಸಬೇಕಿದೆ. ಅದಕ್ಕಾಗಿ ನಾನು ಬ್ಯಾಟಿಂಗ್​ ಮೂಲಕ ನನ್ನಿಂದಾದ ನೆರವು ನೀಡಬಲ್ಲೆ. ಈ ಮೂಲಕ ಆರ್​ಸಿಬಿಗೆ ಚೊಚ್ಚಲ ಟ್ರೋಫಿ ಗೆಲ್ಲಿಸಿಕೊಡಬೇಕೆಂಬ ಆಸೆಯಿದೆ ಎಂದು ಪ್ರಿಯಾಂಶ್ ಆರ್ಯ ತಿಳಿಸಿದ್ದಾರೆ.

4 / 5
ಸದ್ಯ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಸಂಚಲನ ಸೃಷ್ಟಿಸಿರುವ ಪ್ರಿಯಾಂಶ್ ಆರ್ಯ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಈಗಾಗಲೇ ಸೌತ್ ಡೆಲ್ಲಿಯ ಆರಂಭಿಕ ಆಟಗಾರನ ಮೇಲೆ ಕೆಲ ಫ್ರಾಂಚೈಸಿಗಳು ಕಣ್ಣಿಟ್ಟಿದೆ. ಇದಾಗ್ಯೂ ಯುವ ಎಡಗೈ ದಾಂಡಿಗ ಆರ್​ಸಿಬಿ ಪರ ಆಡಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರಿಯಾಂಶ್ ಆರ್ಯರನ್ನು ಈ ಬಾರಿ ಆರ್​ಸಿಬಿ ಖರೀದಿಸಲಿದೆಯಾ ಕಾದು ನೋಡಬೇಕಿದೆ.

ಸದ್ಯ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಸಂಚಲನ ಸೃಷ್ಟಿಸಿರುವ ಪ್ರಿಯಾಂಶ್ ಆರ್ಯ ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತ. ಈಗಾಗಲೇ ಸೌತ್ ಡೆಲ್ಲಿಯ ಆರಂಭಿಕ ಆಟಗಾರನ ಮೇಲೆ ಕೆಲ ಫ್ರಾಂಚೈಸಿಗಳು ಕಣ್ಣಿಟ್ಟಿದೆ. ಇದಾಗ್ಯೂ ಯುವ ಎಡಗೈ ದಾಂಡಿಗ ಆರ್​ಸಿಬಿ ಪರ ಆಡಬೇಕೆಂಬ ಮನದಿಂಗಿತವನ್ನು ವ್ಯಕ್ತಪಡಿಸಿದ್ದಾರೆ. ಹೀಗಾಗಿ ಪ್ರಿಯಾಂಶ್ ಆರ್ಯರನ್ನು ಈ ಬಾರಿ ಆರ್​ಸಿಬಿ ಖರೀದಿಸಲಿದೆಯಾ ಕಾದು ನೋಡಬೇಕಿದೆ.

5 / 5
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ