AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಪರ ಆಡುವ ಇಂಗಿತ ವ್ಯಕ್ತಪಡಿಸಿದ ರಿಂಕು ಸಿಂಗ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ರಿಂಕು ಸಿಂಗ್ ಪಡೆಯುತ್ತಿರುವ ಸಂಭಾವನೆ ಮೊತ್ತ 55 ಲಕ್ಷ ರೂ. ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ಈ ಬಾರಿ ಬೃಹತ್ ಮೊತ್ತ ನೀಡಿ ಅವರನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ. ಇಲ್ಲದಿದ್ದರೆ ರಿಂಕು ಸಿಂಗ್ ಐಪಿಎಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗೆ ಹರಾಜಿಗೆ ಎಂಟ್ರಿಯಾದರೆ ರಿಂಕು ಖರೀದಿಗೆ ಆರ್​ಸಿಬಿ ಮುಂದಾಗುವುದರಲ್ಲಿ ಅನುಮಾನವೇ ಇಲ್ಲ.

ಝಾಹಿರ್ ಯೂಸುಫ್
|

Updated on:Aug 19, 2024 | 1:51 PM

Share
ಐಪಿಎಲ್ 2025ರ ಮೆಗಾ ಹರಾಜಿಗಾಗಿ ರೂಪುರೇಷೆಗಳು ಸಿದ್ಧವಾಗುತ್ತಿದೆ. ಈ ರೂಪುರೇಷೆಗಳ ಸಿದ್ಧತೆಯ ಬಳಿಕ ಎಲ್ಲಾ ಫ್ರಾಂಚೈಸಿಗಳಿಗೆ ಇಂತಿಷ್ಟು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿಯ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ 4+2 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಐಪಿಎಲ್ 2025ರ ಮೆಗಾ ಹರಾಜಿಗಾಗಿ ರೂಪುರೇಷೆಗಳು ಸಿದ್ಧವಾಗುತ್ತಿದೆ. ಈ ರೂಪುರೇಷೆಗಳ ಸಿದ್ಧತೆಯ ಬಳಿಕ ಎಲ್ಲಾ ಫ್ರಾಂಚೈಸಿಗಳಿಗೆ ಇಂತಿಷ್ಟು ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಲಿದೆ. ಪ್ರಸ್ತುತ ಮಾಹಿತಿ ಪ್ರಕಾರ ಈ ಬಾರಿಯ ಹರಾಜಿಗೂ ಮುನ್ನ ಎಲ್ಲಾ ತಂಡಗಳಿಗೆ 4+2 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ.

1 / 6
ಅಂದರೆ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ನಾಲ್ವರನ್ನು ನೇರವಾಗಿ ರಿಟೈನ್ ಮಾಡಿಕೊಳ್ಳಬಹುದು. ಇನ್ನುಳಿದ ಇಬ್ಬರು ಆಟಗಾರರನ್ನು ಆರ್​ಟಿಎಂ ಕಾರ್ಡ್​ ಬಳಸಿ ಹರಾಜಿಗೆ ಬಿಡುಗಡೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಂದ 19 ಆಟಗಾರರು ಹೊರಬೀಳುವುದು ಖಚಿತ.

ಅಂದರೆ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳು ನಾಲ್ವರನ್ನು ನೇರವಾಗಿ ರಿಟೈನ್ ಮಾಡಿಕೊಳ್ಳಬಹುದು. ಇನ್ನುಳಿದ ಇಬ್ಬರು ಆಟಗಾರರನ್ನು ಆರ್​ಟಿಎಂ ಕಾರ್ಡ್​ ಬಳಸಿ ಹರಾಜಿಗೆ ಬಿಡುಗಡೆ ಮಾಡಲು ಅವಕಾಶ ನೀಡಲಿದ್ದಾರೆ ಎಂದು ವರದಿಯಾಗಿದೆ. ಅದರಂತೆ ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಂದ 19 ಆಟಗಾರರು ಹೊರಬೀಳುವುದು ಖಚಿತ.

2 / 6
ಹೀಗಾಗಿಯೇ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಿಮ್ಮನ್ನು ರಿಟೈನ್ ಮಾಡಿಕೊಳ್ಳದಿದ್ದರೆ ಯಾವ ತಂಡದ ಪರ ಕಣಕ್ಕಿಳಿಯುತ್ತೀರಿ ಎಂಬ ಪ್ರಶ್ನೆಯನ್ನು ರಿಂಕು ಸಿಂಗ್ ಅವರಲ್ಲಿ ಕೇಳಲಾಗಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಕೆಕೆಆರ್ ದಾಂಡಿಗ ನೀಡಿದ ನೇರ ಉತ್ತರ- RCB.

ಹೀಗಾಗಿಯೇ ಈ ಬಾರಿ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಯು ನಿಮ್ಮನ್ನು ರಿಟೈನ್ ಮಾಡಿಕೊಳ್ಳದಿದ್ದರೆ ಯಾವ ತಂಡದ ಪರ ಕಣಕ್ಕಿಳಿಯುತ್ತೀರಿ ಎಂಬ ಪ್ರಶ್ನೆಯನ್ನು ರಿಂಕು ಸಿಂಗ್ ಅವರಲ್ಲಿ ಕೇಳಲಾಗಿದೆ. ಈ ಕುತೂಹಲಕಾರಿ ಪ್ರಶ್ನೆಗೆ ಕೆಕೆಆರ್ ದಾಂಡಿಗ ನೀಡಿದ ನೇರ ಉತ್ತರ- RCB.

3 / 6
ಹೌದು, ಕೆಕೆಆರ್ ತಂಡವು ನನ್ನನ್ನು ರಿಟೈನ್ ಮಾಡದಿದ್ದರೆ, ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವುದನ್ನು ಎದುರು ನೋಡುತ್ತಿದ್ದೇನೆ. ನನಗೆ ಆರ್​ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ರಿಂಕು ಸಿಂಗ್ ಸ್ಪೋರ್ಟ್ಸ್​ ತಕ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಹೌದು, ಕೆಕೆಆರ್ ತಂಡವು ನನ್ನನ್ನು ರಿಟೈನ್ ಮಾಡದಿದ್ದರೆ, ನಾನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುವುದನ್ನು ಎದುರು ನೋಡುತ್ತಿದ್ದೇನೆ. ನನಗೆ ಆರ್​ಸಿಬಿ ಪರ ಆಡಬೇಕೆಂಬ ಆಸೆಯಿದೆ ಎಂದು ರಿಂಕು ಸಿಂಗ್ ಸ್ಪೋರ್ಟ್ಸ್​ ತಕ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ.

4 / 6
ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿರುವ ರಿಂಕು ಸಿಂಗ್ ಅವರನ್ನು ಕೆಕೆಆರ್ ರಿಲೀಸ್ ಮಾಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ 2018 ರಿಂದ ರಿಂಕು ಸಿಂಗ್ ಕೆಕೆಆರ್ ಪರ ಆಡುತ್ತಿದ್ದಾರೆ. ಅಲ್ಲದೆ ಕಳೆದ ಮೂರು ಹರಾಜಿನ ವೇಳೆಯೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅವರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗಾಗಿ ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಆದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿರುವ ರಿಂಕು ಸಿಂಗ್ ಅವರನ್ನು ಕೆಕೆಆರ್ ರಿಲೀಸ್ ಮಾಡಲಿದೆಯಾ ಎಂಬುದೇ ಪ್ರಶ್ನೆ. ಏಕೆಂದರೆ 2018 ರಿಂದ ರಿಂಕು ಸಿಂಗ್ ಕೆಕೆಆರ್ ಪರ ಆಡುತ್ತಿದ್ದಾರೆ. ಅಲ್ಲದೆ ಕಳೆದ ಮೂರು ಹರಾಜಿನ ವೇಳೆಯೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಅವರನ್ನು ರಿಟೈನ್ ಮಾಡಿಕೊಂಡಿತ್ತು. ಹೀಗಾಗಿ ಈ ಬಾರಿ ಕೂಡ ತಂಡದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಯಿದೆ.

5 / 6
ಇದಾಗ್ಯೂ ರಿಂಕು ಸಿಂಗ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಂದರೆ ಅವರ ಖರೀದಿಗೆ ಇತರೆ ಫ್ರಾಂಚೈಸಿಗಳು ಮುಗಿಬೀಳುವುದರಲ್ಲಿ ಅನುಮಾನವೇ ಇಲ್ಲ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಬೇಕೆಂಬ ಆಸೆಯನ್ನು ರಿಂಕು ಸಿಂಗ್ ಬಹಿರಂಗಪಡಿಸಿದ್ದಾರೆ. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ರಿಂಕು ಕಾಣಿಸಿಕೊಂಡರೆ ಆರ್​ಸಿಬಿ ಫ್ರಾಂಚೈಸಿ ಅವರ ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ದಿಟ.

ಇದಾಗ್ಯೂ ರಿಂಕು ಸಿಂಗ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದಿಂದ ಹೊರಬಂದರೆ ಅವರ ಖರೀದಿಗೆ ಇತರೆ ಫ್ರಾಂಚೈಸಿಗಳು ಮುಗಿಬೀಳುವುದರಲ್ಲಿ ಅನುಮಾನವೇ ಇಲ್ಲ. ಆದರೆ ಅದಕ್ಕೂ ಮುನ್ನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಬೇಕೆಂಬ ಆಸೆಯನ್ನು ರಿಂಕು ಸಿಂಗ್ ಬಹಿರಂಗಪಡಿಸಿದ್ದಾರೆ. ಹೀಗಾಗಿ ಈ ಬಾರಿಯ ಹರಾಜಿನಲ್ಲಿ ರಿಂಕು ಕಾಣಿಸಿಕೊಂಡರೆ ಆರ್​ಸಿಬಿ ಫ್ರಾಂಚೈಸಿ ಅವರ ಖರೀದಿಗಾಗಿ ಭರ್ಜರಿ ಪೈಪೋಟಿ ನಡೆಸುವುದಂತು ದಿಟ.

6 / 6

Published On - 8:28 am, Mon, 19 August 24

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್