AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಸ್ಟೀವ್ ಸ್ಮಿತ್ ರಿಎಂಟ್ರಿ

Steve Smith: ಸ್ಟೀವ್ ಸ್ಮಿತ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಚ್ಚಿ ಟಸ್ಕರ್ಸ್ ಕೇರಳ, ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಒಟ್ಟು 103 ಪಂದ್ಯಗಳನ್ನಾಡಿರುವ ಸ್ಮಿತ್ 2485 ರನ್ ಕಲೆಹಾಕಿದ್ದಾರೆ. ಅಲ್ಲದೆ ರಾಜಸ್ಥಾನ್ ರಾಯಲ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 14, 2024 | 10:55 AM

Share
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ಸೀಸನ್​ ಹರಾಜಿನಿಂದ ಹೊರಗುಳಿದಿದ್ದ ಸ್ಮಿತ್ ಈ ಬಾರಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಇದಕ್ಕಾಗಿ ಮೆಗಾ ಹರಾಜಿಗೆ ಹೆಸರು ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ಸೀಸನ್​ ಹರಾಜಿನಿಂದ ಹೊರಗುಳಿದಿದ್ದ ಸ್ಮಿತ್ ಈ ಬಾರಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಇದಕ್ಕಾಗಿ ಮೆಗಾ ಹರಾಜಿಗೆ ಹೆಸರು ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

1 / 5
ಸ್ಟೀವ್ ಸ್ಮಿತ್ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅವರನ್ನು ಐಪಿಎಲ್ 2022 ರ ಹರಾಜಿಗೂ ಮುನ್ನ ಬಿಡುಗಡೆ ಮಾಡಲಾಗಿತ್ತು. ಇನ್ನು 2022 ರಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೂ ಆಸೀಸ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಸ್ಟೀವ್ ಸ್ಮಿತ್ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅವರನ್ನು ಐಪಿಎಲ್ 2022 ರ ಹರಾಜಿಗೂ ಮುನ್ನ ಬಿಡುಗಡೆ ಮಾಡಲಾಗಿತ್ತು. ಇನ್ನು 2022 ರಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೂ ಆಸೀಸ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

2 / 5
ಇನ್ನು ಐಪಿಎಲ್ 2023ರ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಕಳೆದ ಸೀಸನ್​ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಮಿತ್ ಅವರು ಬಿಕರಿಯಾಗದೇ ಉಳಿದಿದ್ದರು. ಇದಾಗ್ಯೂ ಈ ಬಾರಿ ಸಹ ಐಪಿಎಲ್ ಹರಾಜಿಗೆ ಹೆಸರು ನೀಡುವುದಾಗಿ ಆಸ್ಟ್ರೇಲಿಯಾ ಆಟಗಾರ ತಿಳಿಸಿದ್ದಾರೆ.

ಇನ್ನು ಐಪಿಎಲ್ 2023ರ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಕಳೆದ ಸೀಸನ್​ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಮಿತ್ ಅವರು ಬಿಕರಿಯಾಗದೇ ಉಳಿದಿದ್ದರು. ಇದಾಗ್ಯೂ ಈ ಬಾರಿ ಸಹ ಐಪಿಎಲ್ ಹರಾಜಿಗೆ ಹೆಸರು ನೀಡುವುದಾಗಿ ಆಸ್ಟ್ರೇಲಿಯಾ ಆಟಗಾರ ತಿಳಿಸಿದ್ದಾರೆ.

3 / 5
ವಿಶೇಷ ಎಂದರೆ ಇತ್ತೀಚೆಗೆ ಮುಗಿದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ವಾಷಿಂಗ್ಟನ್ ಫ್ರೀಡಮ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ 9 ಇನಿಂಗ್ಸ್​ಗಳಿಂದ 336 ರನ್​ ಚಚ್ಚಿದ್ದರು. ಅಷ್ಟೇ ಅಲ್ಲದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು.

ವಿಶೇಷ ಎಂದರೆ ಇತ್ತೀಚೆಗೆ ಮುಗಿದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ವಾಷಿಂಗ್ಟನ್ ಫ್ರೀಡಮ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ 9 ಇನಿಂಗ್ಸ್​ಗಳಿಂದ 336 ರನ್​ ಚಚ್ಚಿದ್ದರು. ಅಷ್ಟೇ ಅಲ್ಲದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು.

4 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿರುವ ಸ್ಟೀವ್ ಸ್ಮಿತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಹೆಸರು ನೀಡಲು ನಿರ್ಧರಿಸಿದ್ದಾರೆ. ಅದರಂತೆ ಮೆಗಾ ಆಕ್ಷನ್​ನಲ್ಲಿ ಆಸೀಸ್ ಆಟಗಾರನ ಖರೀದಿಗೆ ಐಪಿಎಲ್​ನ ಕೆಲ ಫ್ರಾಂಚೈಸಿಗಳು ಆಸಕ್ತಿವಹಿಸುವ ಸಾಧ್ಯತೆಯಿದೆ.

ಈ ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿರುವ ಸ್ಟೀವ್ ಸ್ಮಿತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಹೆಸರು ನೀಡಲು ನಿರ್ಧರಿಸಿದ್ದಾರೆ. ಅದರಂತೆ ಮೆಗಾ ಆಕ್ಷನ್​ನಲ್ಲಿ ಆಸೀಸ್ ಆಟಗಾರನ ಖರೀದಿಗೆ ಐಪಿಎಲ್​ನ ಕೆಲ ಫ್ರಾಂಚೈಸಿಗಳು ಆಸಕ್ತಿವಹಿಸುವ ಸಾಧ್ಯತೆಯಿದೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಫುಟ್​​ಬಾಲ್ ವಿಶ್ವಕಪ್ ಉದ್ಘಾಟನೆಯಲ್ಲಿ ಹೀಗಿತ್ತು ನೋರಾ ಫತೇಹಿ ಪ್ರದರ್ಶನ
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ಸಾವಿನ ಬಗ್ಗೆ ಪದೇ ಪದೇ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಹೇಳಿದ್ದೇನು?
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ನಿರುದ್ಯೋಗಿಗಳಿಗೆ ಗುಡ್​ನ್ಯೂಸ್​​ ನೀಡಿದ ಸಿಎಂ ಡಿಕೆ ಶಿವಕುಮಾರ್​
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ