AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್​ಗೆ ಸ್ಟೀವ್ ಸ್ಮಿತ್ ರಿಎಂಟ್ರಿ

Steve Smith: ಸ್ಟೀವ್ ಸ್ಮಿತ್ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊಚ್ಚಿ ಟಸ್ಕರ್ಸ್ ಕೇರಳ, ಪುಣೆ ವಾರಿಯರ್ಸ್, ರಾಜಸ್ಥಾನ್ ರಾಯಲ್ಸ್, ರೈಸಿಂಗ್ ಪುಣೆ ಸೂಪರ್ ಜೈಂಟ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಒಟ್ಟು 103 ಪಂದ್ಯಗಳನ್ನಾಡಿರುವ ಸ್ಮಿತ್ 2485 ರನ್ ಕಲೆಹಾಕಿದ್ದಾರೆ. ಅಲ್ಲದೆ ರಾಜಸ್ಥಾನ್ ರಾಯಲ್ಸ್ ಹಾಗೂ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 14, 2024 | 10:55 AM

Share
ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ಸೀಸನ್​ ಹರಾಜಿನಿಂದ ಹೊರಗುಳಿದಿದ್ದ ಸ್ಮಿತ್ ಈ ಬಾರಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಇದಕ್ಕಾಗಿ ಮೆಗಾ ಹರಾಜಿಗೆ ಹೆಸರು ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರ ಸ್ಟೀವ್ ಸ್ಮಿತ್ ಈ ಬಾರಿಯ ಐಪಿಎಲ್ ಮೆಗಾ ಹರಾಜಿಗೆ ಹೆಸರು ನೊಂದಾಯಿಸಿಕೊಳ್ಳುವುದಾಗಿ ತಿಳಿಸಿದ್ದಾರೆ. ಕಳೆದ ಸೀಸನ್​ ಹರಾಜಿನಿಂದ ಹೊರಗುಳಿದಿದ್ದ ಸ್ಮಿತ್ ಈ ಬಾರಿ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್​ನಲ್ಲಿ ಕಾಣಿಸಿಕೊಳ್ಳಲು ಬಯಸಿದ್ದಾರೆ. ಇದಕ್ಕಾಗಿ ಮೆಗಾ ಹರಾಜಿಗೆ ಹೆಸರು ನೋಂದಣಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

1 / 5
ಸ್ಟೀವ್ ಸ್ಮಿತ್ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅವರನ್ನು ಐಪಿಎಲ್ 2022 ರ ಹರಾಜಿಗೂ ಮುನ್ನ ಬಿಡುಗಡೆ ಮಾಡಲಾಗಿತ್ತು. ಇನ್ನು 2022 ರಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೂ ಆಸೀಸ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಸ್ಟೀವ್ ಸ್ಮಿತ್ ಕೊನೆಯ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದು 2021 ರಲ್ಲಿ. ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಅವರನ್ನು ಐಪಿಎಲ್ 2022 ರ ಹರಾಜಿಗೂ ಮುನ್ನ ಬಿಡುಗಡೆ ಮಾಡಲಾಗಿತ್ತು. ಇನ್ನು 2022 ರಲ್ಲಿ ಹರಾಜಿನಲ್ಲಿ ಕಾಣಿಸಿಕೊಂಡರೂ ಆಸೀಸ್ ಆಟಗಾರನನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

2 / 5
ಇನ್ನು ಐಪಿಎಲ್ 2023ರ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಕಳೆದ ಸೀಸನ್​ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಮಿತ್ ಅವರು ಬಿಕರಿಯಾಗದೇ ಉಳಿದಿದ್ದರು. ಇದಾಗ್ಯೂ ಈ ಬಾರಿ ಸಹ ಐಪಿಎಲ್ ಹರಾಜಿಗೆ ಹೆಸರು ನೀಡುವುದಾಗಿ ಆಸ್ಟ್ರೇಲಿಯಾ ಆಟಗಾರ ತಿಳಿಸಿದ್ದಾರೆ.

ಇನ್ನು ಐಪಿಎಲ್ 2023ರ ಹರಾಜಿಗೆ ಸ್ಟೀವ್ ಸ್ಮಿತ್ ಹೆಸರು ನೀಡಿರಲಿಲ್ಲ. ಕಳೆದ ಸೀಸನ್​ ಐಪಿಎಲ್ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಸ್ಮಿತ್ ಅವರು ಬಿಕರಿಯಾಗದೇ ಉಳಿದಿದ್ದರು. ಇದಾಗ್ಯೂ ಈ ಬಾರಿ ಸಹ ಐಪಿಎಲ್ ಹರಾಜಿಗೆ ಹೆಸರು ನೀಡುವುದಾಗಿ ಆಸ್ಟ್ರೇಲಿಯಾ ಆಟಗಾರ ತಿಳಿಸಿದ್ದಾರೆ.

3 / 5
ವಿಶೇಷ ಎಂದರೆ ಇತ್ತೀಚೆಗೆ ಮುಗಿದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ವಾಷಿಂಗ್ಟನ್ ಫ್ರೀಡಮ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ 9 ಇನಿಂಗ್ಸ್​ಗಳಿಂದ 336 ರನ್​ ಚಚ್ಚಿದ್ದರು. ಅಷ್ಟೇ ಅಲ್ಲದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು.

ವಿಶೇಷ ಎಂದರೆ ಇತ್ತೀಚೆಗೆ ಮುಗಿದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಸ್ಟೀವ್ ಸ್ಮಿತ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ವಾಷಿಂಗ್ಟನ್ ಫ್ರೀಡಮ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ಸ್ಮಿತ್ 9 ಇನಿಂಗ್ಸ್​ಗಳಿಂದ 336 ರನ್​ ಚಚ್ಚಿದ್ದರು. ಅಷ್ಟೇ ಅಲ್ಲದೆ ಸ್ಟೀವ್ ಸ್ಮಿತ್ ನಾಯಕತ್ವದಲ್ಲಿ ವಾಷಿಂಗ್ಟನ್ ಫ್ರೀಡಮ್ ತಂಡವು ಚಾಂಪಿಯನ್ ಪಟ್ಟಕ್ಕೇರಿತ್ತು.

4 / 5
ಈ ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿರುವ ಸ್ಟೀವ್ ಸ್ಮಿತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಹೆಸರು ನೀಡಲು ನಿರ್ಧರಿಸಿದ್ದಾರೆ. ಅದರಂತೆ ಮೆಗಾ ಆಕ್ಷನ್​ನಲ್ಲಿ ಆಸೀಸ್ ಆಟಗಾರನ ಖರೀದಿಗೆ ಐಪಿಎಲ್​ನ ಕೆಲ ಫ್ರಾಂಚೈಸಿಗಳು ಆಸಕ್ತಿವಹಿಸುವ ಸಾಧ್ಯತೆಯಿದೆ.

ಈ ಭರ್ಜರಿ ಪ್ರದರ್ಶನದೊಂದಿಗೆ ಐಪಿಎಲ್ ಫ್ರಾಂಚೈಸಿಗಳ ಗಮನ ಸೆಳೆದಿರುವ ಸ್ಟೀವ್ ಸ್ಮಿತ್ ಈ ಬಾರಿಯ ಮೆಗಾ ಹರಾಜಿನಲ್ಲಿ ಹೆಸರು ನೀಡಲು ನಿರ್ಧರಿಸಿದ್ದಾರೆ. ಅದರಂತೆ ಮೆಗಾ ಆಕ್ಷನ್​ನಲ್ಲಿ ಆಸೀಸ್ ಆಟಗಾರನ ಖರೀದಿಗೆ ಐಪಿಎಲ್​ನ ಕೆಲ ಫ್ರಾಂಚೈಸಿಗಳು ಆಸಕ್ತಿವಹಿಸುವ ಸಾಧ್ಯತೆಯಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ