AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಐಪಿಎಲ್ ಫ್ರಾಂಚೈಸಿಗಳ ಚಿಂತೆ ಹೆಚ್ಚಿಸಿದ ಹೊಸ ರೂಲ್ಸ್

IPL 2025 Mega Auction: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗಾಗಿ ಪ್ರಕಟಿಸಲಾದ ರೈಟ್ ಟು ಮ್ಯಾಚ್ ರೂಲ್ಸ್​ನಲ್ಲಿನ ಲೋಪದೋಷಗಳ ಬಗ್ಗೆ ಐಪಿಎಲ್ ಫ್ರಾಂಚೈಸಿಗಳು ಕಳವಳ ವ್ಯಕ್ತಪಡಿಸಿದೆ. ಅಲ್ಲದೆ ಈ ನಿಯಮವನ್ನು ಮರುಪರಿಶೀಲಿಸುವಂತೆ ಬಿಸಿಸಿಐಗೆ ಮನವಿ ಮಾಡಿದೆ.

ಝಾಹಿರ್ ಯೂಸುಫ್
|

Updated on: Oct 05, 2024 | 4:09 PM

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಆಟಗಾರರ ರಿಟೈನ್ ನಿಯಮವನ್ನು ಪ್ರಕಟಿಸಲಾಗಿದೆ. ಈ ನಿಯಮದಂತೆ ಮೆಗಾ ಹರಾಜಿಗೂ ಮುನ್ನ ಗರಿಷ್ಠ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18ರ ಮೆಗಾ ಹರಾಜಿಗಾಗಿ ಸಿದ್ಧತೆಗಳು ಶುರುವಾಗಿದೆ. ಇದರ ಮೊದಲ ಹೆಜ್ಜೆಯಾಗಿ ಇದೀಗ ಆಟಗಾರರ ರಿಟೈನ್ ನಿಯಮವನ್ನು ಪ್ರಕಟಿಸಲಾಗಿದೆ. ಈ ನಿಯಮದಂತೆ ಮೆಗಾ ಹರಾಜಿಗೂ ಮುನ್ನ ಗರಿಷ್ಠ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಬಹುದು.

1 / 9
ಹಾಗೆಯೇ ಉಳಿಸಿಕೊಳ್ಳಲು ಬಯಸದಿದ್ದರೂ ರೈಟ್ ಟು ಮ್ಯಾಚ್ ಕಾರ್ಡ್ ಮೂಲಕ ಗರಿಷ್ಠ 6 ಆಟಗಾರರನ್ನು ಹರಾಜಿಗೆ ಬಿಡುಗಡೆ ಮಾಡಲು ಸಹ ಅವಕಾಶ ನೀಡಲಾಗಿದೆ. ಅಂದರೆ ಇಲ್ಲಿ ಆರ್​ಟಿಎಂ ಕಾರ್ಡ್​ ಬಳಸಿದ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಂಡರೂ ಅವರ ಮೇಲಿನ ಹಕ್ಕು ಹಳೆಯ ಫ್ರಾಂಚೈಸಿಯ ಕೈಯಲ್ಲೇ ಇರಲಿದೆ.

ಹಾಗೆಯೇ ಉಳಿಸಿಕೊಳ್ಳಲು ಬಯಸದಿದ್ದರೂ ರೈಟ್ ಟು ಮ್ಯಾಚ್ ಕಾರ್ಡ್ ಮೂಲಕ ಗರಿಷ್ಠ 6 ಆಟಗಾರರನ್ನು ಹರಾಜಿಗೆ ಬಿಡುಗಡೆ ಮಾಡಲು ಸಹ ಅವಕಾಶ ನೀಡಲಾಗಿದೆ. ಅಂದರೆ ಇಲ್ಲಿ ಆರ್​ಟಿಎಂ ಕಾರ್ಡ್​ ಬಳಸಿದ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಂಡರೂ ಅವರ ಮೇಲಿನ ಹಕ್ಕು ಹಳೆಯ ಫ್ರಾಂಚೈಸಿಯ ಕೈಯಲ್ಲೇ ಇರಲಿದೆ.

2 / 9
ಉದಾಹರಣೆಗೆ: RCB ತಂಡವು ಮೊಹಮ್ಮದ್ ಸಿರಾಜ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ಮೆಗಾ ಹರಾಜಿಗಾಗಿ ರಿಲೀಸ್ ಮಾಡಿದರೆ, ಸಿರಾಜ್ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

ಉದಾಹರಣೆಗೆ: RCB ತಂಡವು ಮೊಹಮ್ಮದ್ ಸಿರಾಜ್ ಅವರನ್ನು ಹರಾಜಿಗಾಗಿ ರಿಲೀಸ್ ಮಾಡಿದೆ ಎಂದಿಟ್ಟುಕೊಳ್ಳಿ. ಆದರೆ ಬಿಡುಗಡೆಗೂ ಮುನ್ನ ಆರ್​ಟಿಎಂ ಆಯ್ಕೆ ಬಳಸಿ ಮೆಗಾ ಹರಾಜಿಗಾಗಿ ರಿಲೀಸ್ ಮಾಡಿದರೆ, ಸಿರಾಜ್ ಮೇಲಿನ ಹಕ್ಕು ಆರ್​ಸಿಬಿ ಬಳಿಯೇ ಇರುತ್ತದೆ.

3 / 9
ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ (ಆರ್​ಟಿಎಂ) ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು 10 ಕೋಟಿ ರೂ.ವರೆಗೆ ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಸಿರಾಜ್ ಅವರನ್ನು ಆರ್​ಸಿಬಿ ಮರಳಿ ಖರೀದಿಸಬಹುದು.

ಅದರಂತೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಸಿರಾಜ್ (ಆರ್​ಟಿಎಂ) ಅವರ ಖರೀದಿಗೆ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯು 10 ಕೋಟಿ ರೂ.ವರೆಗೆ ಬಿಡ್ ಮಾಡಿತು ಎಂದಿಟ್ಟುಕೊಳ್ಳಿ. ಈ ವೇಳೆ ಆ ಮೊತ್ತವನ್ನು ತಾವೇ ನೀಡುತ್ತೇವೆ ಎಂದು ಸಿರಾಜ್ ಅವರನ್ನು ಆರ್​ಸಿಬಿ ಮರಳಿ ಖರೀದಿಸಬಹುದು.

4 / 9
ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಆದರೆ ಈ ಆಯ್ಕೆಯೊಂದಿಗೆ ಬಿಸಿಸಿಐ ಪರಿಚಯಿಸಿದ ಹೊಸ ರೂಲ್ಸ್ ಈಗ ಫ್ರಾಂಚೈಸಿಗಳ ಚಿಂತೆಗೆ ಕಾರಣವಾಗಿದೆ.

ಒಂದು ವೇಳೆ ಬಿಡುಗಡೆ ಮಾಡಿದ ತಂಡವು ಮರಳಿ ಖರೀದಿಸಲು ಇಚ್ಛಿಸದಿದ್ದರೆ ಮಾತ್ರ ಆರ್​ಟಿಎಂ ಆಯ್ಕೆಯಲ್ಲಿ ಕಾಣಿಸಿಕೊಂಡ ಆಟಗಾರರು ಕೊನೆಯದಾಗಿ ಬಿಡ್ ಮಾಡಿದ ತಂಡದ ಪಾಲಾಗಲಿದ್ದಾರೆ. ಆದರೆ ಈ ಆಯ್ಕೆಯೊಂದಿಗೆ ಬಿಸಿಸಿಐ ಪರಿಚಯಿಸಿದ ಹೊಸ ರೂಲ್ಸ್ ಈಗ ಫ್ರಾಂಚೈಸಿಗಳ ಚಿಂತೆಗೆ ಕಾರಣವಾಗಿದೆ.

5 / 9
ಅಂದರೆ ಇಲ್ಲಿ ಆರ್​ಟಿಎಂ ಆಯ್ಕೆಯಲ್ಲಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ಆಟಗಾರನ ಖರೀದಿಗೆ ಫ್ರಾಂಚೈಸಿಯೊಂದು ಕೊನೆಯದಾಗಿ 10 ಕೋಟಿ ರೂ. ಬಿಡ್ಡಿಂಗ್ ಮಾಡಿದ್ರೆ, ಆರ್​ಟಿಎಂ ಬಳಸಿದ ಫ್ರಾಂಚೈಸಿಗೆ ನೀವು ಈ ಆಟಗಾರನನ್ನು ಉಳಿಸಿಕೊಳ್ಳಲು ಬಯಸುತ್ತೀರಾ ಎಂದು ಕೇಳಲಾಗುತ್ತದೆ. ಈ ವೇಳೆ ಎಸ್​ ಎಂದರೆ... ಕೊನೆದಾಗಿ ಬಿಡ್ ಮಾಡಿದ ಫ್ರಾಂಚೈಸಿಗೆ ಮತ್ತೊಂದು ಬಿಡ್ಡಿಂಗ್​ಗೆ ಅವಕಾಶ ನೀಡಲಾಗುತ್ತದೆ. ಈ ನಿಯಮದ ಬಗ್ಗೆ ಇದೀಗ ಫ್ರಾಂಚೈಸಿಗಳು ಅಸಮಾಧಾನ ಹೊರಹಾಕಿದ್ದಾರೆ.

ಅಂದರೆ ಇಲ್ಲಿ ಆರ್​ಟಿಎಂ ಆಯ್ಕೆಯಲ್ಲಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ಆಟಗಾರನ ಖರೀದಿಗೆ ಫ್ರಾಂಚೈಸಿಯೊಂದು ಕೊನೆಯದಾಗಿ 10 ಕೋಟಿ ರೂ. ಬಿಡ್ಡಿಂಗ್ ಮಾಡಿದ್ರೆ, ಆರ್​ಟಿಎಂ ಬಳಸಿದ ಫ್ರಾಂಚೈಸಿಗೆ ನೀವು ಈ ಆಟಗಾರನನ್ನು ಉಳಿಸಿಕೊಳ್ಳಲು ಬಯಸುತ್ತೀರಾ ಎಂದು ಕೇಳಲಾಗುತ್ತದೆ. ಈ ವೇಳೆ ಎಸ್​ ಎಂದರೆ... ಕೊನೆದಾಗಿ ಬಿಡ್ ಮಾಡಿದ ಫ್ರಾಂಚೈಸಿಗೆ ಮತ್ತೊಂದು ಬಿಡ್ಡಿಂಗ್​ಗೆ ಅವಕಾಶ ನೀಡಲಾಗುತ್ತದೆ. ಈ ನಿಯಮದ ಬಗ್ಗೆ ಇದೀಗ ಫ್ರಾಂಚೈಸಿಗಳು ಅಸಮಾಧಾನ ಹೊರಹಾಕಿದ್ದಾರೆ.

6 / 9
ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್​ ಅವರನ್ನು ಆರ್​ಟಿಎಂ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ ಎಂದಿಟ್ಟುಕೊಳ್ಳಿ. ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯು ಪಾಟಿದಾರ್ ಅವರಿಗಾಗಿ 10 ಕೋಟಿ ರೂ. ಬಿಡ್ಡಿಂಗ್ ಮಾಡಿರುತ್ತದೆ. ಈ ವೇಳೆ ಆರ್​ಸಿಬಿಗೆ ನೀವು 10 ಕೋಟಿ ರೂ.ಗೆ ಪಾಟಿದಾರ್ ಅವರನ್ನು ಮರಳಿ ಖರೀದಿಸಲು ಬಯಸುತ್ತೀರಾ ಎಂದು ಕೇಳಲಾಗುತ್ತದೆ. ಈ ವೇಳೆ ಹೌದು ಎಂದರೆ, ಸಿಎಸ್​ಕೆಗೆ ಮತ್ತೊಂದು ಬಿಡ್​ಗೆ ಅವಕಾಶ ನೀಡಲಾಗುತ್ತದೆ.

ಉದಾಹರಣೆಗೆ: ಆರ್​ಸಿಬಿ ತಂಡವು ರಜತ್ ಪಾಟಿದಾರ್​ ಅವರನ್ನು ಆರ್​ಟಿಎಂ ಆಯ್ಕೆಯಲ್ಲಿ ಬಿಡುಗಡೆ ಮಾಡಿದೆ ಎಂದಿಟ್ಟುಕೊಳ್ಳಿ. ಹರಾಜಿನಲ್ಲಿ ಸಿಎಸ್​ಕೆ ಫ್ರಾಂಚೈಸಿಯು ಪಾಟಿದಾರ್ ಅವರಿಗಾಗಿ 10 ಕೋಟಿ ರೂ. ಬಿಡ್ಡಿಂಗ್ ಮಾಡಿರುತ್ತದೆ. ಈ ವೇಳೆ ಆರ್​ಸಿಬಿಗೆ ನೀವು 10 ಕೋಟಿ ರೂ.ಗೆ ಪಾಟಿದಾರ್ ಅವರನ್ನು ಮರಳಿ ಖರೀದಿಸಲು ಬಯಸುತ್ತೀರಾ ಎಂದು ಕೇಳಲಾಗುತ್ತದೆ. ಈ ವೇಳೆ ಹೌದು ಎಂದರೆ, ಸಿಎಸ್​ಕೆಗೆ ಮತ್ತೊಂದು ಬಿಡ್​ಗೆ ಅವಕಾಶ ನೀಡಲಾಗುತ್ತದೆ.

7 / 9
ಹೀಗೆ ಸಿಗುವ ಅವಕಾಶದಲ್ಲಿ ಎದುರಾಳಿ ಫ್ರಾಂಚೈಸಿ ತನ್ನ ಮೊತ್ತವನ್ನು ಡಬಲ್ ಮಾಡಬಹುದು. ಉದಾಹರಣೆಗೆ, ಪಾಟಿದಾರ್​ಗೆ 10 ಕೋಟಿ ರೂ.ವರೆಗೆ ಬಿಡ್ ಮಾಡಿದ್ದ ಸಿಎಸ್​ಕೆ ಫ್ರಾಂಚೈಸಿ ತನಗೆ ಆ ಆಟಗಾರ ಸಿಗಲ್ಲ ಎಂದು ಗೊತ್ತಾದ ಮೇಲೆ ಕೊನೆಯ ಬಿಡ್ ಅನ್ನು ಏಕಾಏಕಿ 15 ಕೋಟಿ ರೂ.ಗೆ ಹೆಚ್ಚಿಸಬಹುದು. ಇದರಿಂದ ಆರ್​ಟಿಎಂ ಬಳಸಿದ ಫ್ರಾಂಚೈಸಿ 15 ಕೋಟಿ ರೂ. ನೀಡಬೇಕಾಗುತ್ತದೆ. ಹೀಗಾಗಿ ಈ ನಿಯಮವನ್ನು ಫ್ರಾಂಚೈಸಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಹೀಗೆ ಸಿಗುವ ಅವಕಾಶದಲ್ಲಿ ಎದುರಾಳಿ ಫ್ರಾಂಚೈಸಿ ತನ್ನ ಮೊತ್ತವನ್ನು ಡಬಲ್ ಮಾಡಬಹುದು. ಉದಾಹರಣೆಗೆ, ಪಾಟಿದಾರ್​ಗೆ 10 ಕೋಟಿ ರೂ.ವರೆಗೆ ಬಿಡ್ ಮಾಡಿದ್ದ ಸಿಎಸ್​ಕೆ ಫ್ರಾಂಚೈಸಿ ತನಗೆ ಆ ಆಟಗಾರ ಸಿಗಲ್ಲ ಎಂದು ಗೊತ್ತಾದ ಮೇಲೆ ಕೊನೆಯ ಬಿಡ್ ಅನ್ನು ಏಕಾಏಕಿ 15 ಕೋಟಿ ರೂ.ಗೆ ಹೆಚ್ಚಿಸಬಹುದು. ಇದರಿಂದ ಆರ್​ಟಿಎಂ ಬಳಸಿದ ಫ್ರಾಂಚೈಸಿ 15 ಕೋಟಿ ರೂ. ನೀಡಬೇಕಾಗುತ್ತದೆ. ಹೀಗಾಗಿ ಈ ನಿಯಮವನ್ನು ಫ್ರಾಂಚೈಸಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

8 / 9
ಇದೇ ಕಾರಣದಿಂದ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ ಕೆಲ ಫ್ರಾಂಚೈಸಿಗಳು ರೈಟ್ ಟು ಮ್ಯಾಚ್ (ಆರ್‌ಟಿಎಂ) ಹೊಸ ನಿಯಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ನಿಯಮವನ್ನು ಬದಲಿಸುವಂತೆ ಬಿಸಿಸಿಐಗೆ ಪತ್ರದ ಮೂಲಕ ಮನವಿ ಮಾಡಿದೆ ಎಂದು ವರದಿಯಾಗಿದೆ.

ಇದೇ ಕಾರಣದಿಂದ ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ಸೇರಿದಂತೆ ಕೆಲ ಫ್ರಾಂಚೈಸಿಗಳು ರೈಟ್ ಟು ಮ್ಯಾಚ್ (ಆರ್‌ಟಿಎಂ) ಹೊಸ ನಿಯಮದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಈ ನಿಯಮವನ್ನು ಬದಲಿಸುವಂತೆ ಬಿಸಿಸಿಐಗೆ ಪತ್ರದ ಮೂಲಕ ಮನವಿ ಮಾಡಿದೆ ಎಂದು ವರದಿಯಾಗಿದೆ.

9 / 9
Follow us
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ 1 ತಿಂಗಳ ಸಂಬಳ ನೀಡುತ್ತೇವೆ: ಅಶೋಕ್​
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ಹೇಸರಘಟ್ಟದಲ್ಲಿನ ಡ್ರ್ಯಾಗನ್​ ಫ್ರೂಟ್​ ಜಮೀನಿಗೆ ಭೇಟಿ ನೀಡಿದ ಕೇಂದ್ರ ಸಚಿವ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ